ಗುಜರಾತ್: ಬಾನೆಟ್ ಮೇಲೆ ಕುಳಿತು ಸಿಂಹಗಳನ್ನು ಬೆನ್ನಟ್ಟಿದ್ದಕ್ಕಾಗಿ 3 ಬಂಧನ
ಅಹಮದಾಬಾದ್ ಜನರವರಿ 7: ಗುಜರಾತ್ನ ಗಿರ್ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಅಲೆದಾಡುತ್ತಿದ್ದ ಮೂರು ಸಿಂಹಗಳನ್ನು ವಾಹನದ ಮೇಲೆ ಕುಳಿತು ಹಿಂಬಾಲಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ವಿಡಿಯೊವನ್ನು ಗಂಭೀರವಾಗಿ ಪರಿಗಣಿಸಿದ ಗುಜರಾತ್ನ ಜುನಾಗಢ್ನಲ್ಲಿ ಅರಣ್ಯ ಇಲಾಖೆ ಮೂವರನ್ನು ಬಂಧಿಸಿದೆ.
ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಕುಳಿತಿದ್ದ ವ್ಯಕ್ತಿಯೊಬ್ಬ ಮೂರು ಸಿಂಹಗಳನ್ನು ಬೆನ್ನಟ್ಟಿದ್ದಾನೆ. ಜೊತೆಗೆ ಸಿಂಹಗಳನ್ನು ತಾನು ಬೆನ್ನಟ್ಟುತ್ತಿರುವ ವಿಡಿಯೋವನ್ನು ಸಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ವಿಡಿಯೋದಲ್ಲಿ ಬಾನೆಟ್ ಮೇಲೆ ಕುಳಿತ ವ್ಯಕ್ತಿಯ ಕಾಲು ಕಾಣಿಸುತ್ತದೆ. ಮುಂಭಾಗದಲ್ಲಿ ಸಿಂಹಗಳು ನಡೆದುಕೊಂಡು ಹೋಗುವುದು ಕೂಡ ಕಾಣಿಸುತ್ತದೆ. ವಾಹನದ ಲೈಟ್ ಸಿಂಹದ ಮೇಲೆ ಬೀಳುತ್ತಿದ್ದಂತೆ ಸಿಂಹಗಳು ಮನೆಗಳಿರುವ ಕಡೆಗೆ ನಡೆದುಕೊಂಡು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು.
ವರದಿಯ ಪ್ರಕಾರ, ಐದರಿಂದ ಆರು ಜನರ ಗುಂಪಿನಿಂದ ಸಿಂಹಗಳು ತೊಂದರೆಗೊಳಗಾಗಿವೆ. ಕೆಲ ದಿನಗಳ ಹಿಂದಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಸಿಂಹಗಳು ಮುಂದೆ ಸಾಗುತ್ತಿರುವಾಗ ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬರು ಸಿಂಹಗಳನ್ನು ಅಟ್ಟಿಸಿಕೊಂಡು ಹೋಗುತ್ತಿರುವುದನ್ನು ಕಾಣಬಹುದು.

ವಿಡಿಯೋ ವೈರಲ್ ಆದ ಕೂಡಲೇ ಅರಣ್ಯ ಇಲಾಖೆ ಕಾರ್ಯಾಚರಣೆಗಿಳಿದು ವೈರಲ್ ವಿಡಿಯೋದಲ್ಲಿ ಕಂಡ ವ್ಯಕ್ತಿಯನ್ನು ಗುರುತಿಸಿದೆ. ಪ್ರಕರಣ ದಾಖಲಾಗಿದ್ದು, ಘಟನೆಯಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಲಾಗಿದೆ. ಈ ಮೂವರು ರಾಜಸ್ಥಾನದಿಂದ ಗಿರ್ ರಾಷ್ಟ್ರೀಯ ಉದ್ಯಾನವನಕ್ಕೆ ಬಂದಿದ್ದರು ಎನ್ನಲಾಗಿದೆ.
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರಾಧನಾ ಶಾಹು ಮಾತನಾಡಿ, 'ವಿಡಿಯೋ ಬಯಲಿಗೆ ಬಂದ ನಂತರ 6 ಜನರ ವಿರುದ್ಧ ಪ್ರಕರಣ ದಾಖಲಿಸಿ 3 ಮಂದಿಯನ್ನು ಬಂಧಿಸಲಾಗಿದೆ. ರಾತ್ರಿ ವೇಳೆ ಅಕ್ರಮವಾಗಿ ಅರಣ್ಯ ಪ್ರವೇಶಿಸಿದ ಆರೋಪದ ಮೇಲೆ ಎರಡು ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಒಂದನ್ನು ಸಿಂಹಕ್ಕೆ ಕಿರುಕುಳ ನೀಡಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ' ಎಂದಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications