ಗುಜರಾತ್: ಬಾನೆಟ್ ಮೇಲೆ ಕುಳಿತು ಸಿಂಹಗಳನ್ನು ಬೆನ್ನಟ್ಟಿದ್ದಕ್ಕಾಗಿ 3 ಬಂಧನ
ಅಹಮದಾಬಾದ್ ಜನರವರಿ 7: ಗುಜರಾತ್ನ ಗಿರ್ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಅಲೆದಾಡುತ್ತಿದ್ದ ಮೂರು ಸಿಂಹಗಳನ್ನು ವಾಹನದ ಮೇಲೆ ಕುಳಿತು ಹಿಂಬಾಲಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ವಿಡಿಯೊವನ್ನು ಗಂಭೀರವಾಗಿ ಪರಿಗಣಿಸಿದ ಗುಜರಾತ್ನ ಜುನಾಗಢ್ನಲ್ಲಿ ಅರಣ್ಯ ಇಲಾಖೆ ಮೂವರನ್ನು ಬಂಧಿಸಿದೆ.
ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಕುಳಿತಿದ್ದ ವ್ಯಕ್ತಿಯೊಬ್ಬ ಮೂರು ಸಿಂಹಗಳನ್ನು ಬೆನ್ನಟ್ಟಿದ್ದಾನೆ. ಜೊತೆಗೆ ಸಿಂಹಗಳನ್ನು ತಾನು ಬೆನ್ನಟ್ಟುತ್ತಿರುವ ವಿಡಿಯೋವನ್ನು ಸಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ವಿಡಿಯೋದಲ್ಲಿ ಬಾನೆಟ್ ಮೇಲೆ ಕುಳಿತ ವ್ಯಕ್ತಿಯ ಕಾಲು ಕಾಣಿಸುತ್ತದೆ. ಮುಂಭಾಗದಲ್ಲಿ ಸಿಂಹಗಳು ನಡೆದುಕೊಂಡು ಹೋಗುವುದು ಕೂಡ ಕಾಣಿಸುತ್ತದೆ. ವಾಹನದ ಲೈಟ್ ಸಿಂಹದ ಮೇಲೆ ಬೀಳುತ್ತಿದ್ದಂತೆ ಸಿಂಹಗಳು ಮನೆಗಳಿರುವ ಕಡೆಗೆ ನಡೆದುಕೊಂಡು ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು.
ವರದಿಯ ಪ್ರಕಾರ, ಐದರಿಂದ ಆರು ಜನರ ಗುಂಪಿನಿಂದ ಸಿಂಹಗಳು ತೊಂದರೆಗೊಳಗಾಗಿವೆ. ಕೆಲ ದಿನಗಳ ಹಿಂದಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಸಿಂಹಗಳು ಮುಂದೆ ಸಾಗುತ್ತಿರುವಾಗ ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬರು ಸಿಂಹಗಳನ್ನು ಅಟ್ಟಿಸಿಕೊಂಡು ಹೋಗುತ್ತಿರುವುದನ್ನು ಕಾಣಬಹುದು.

ವಿಡಿಯೋ ವೈರಲ್ ಆದ ಕೂಡಲೇ ಅರಣ್ಯ ಇಲಾಖೆ ಕಾರ್ಯಾಚರಣೆಗಿಳಿದು ವೈರಲ್ ವಿಡಿಯೋದಲ್ಲಿ ಕಂಡ ವ್ಯಕ್ತಿಯನ್ನು ಗುರುತಿಸಿದೆ. ಪ್ರಕರಣ ದಾಖಲಾಗಿದ್ದು, ಘಟನೆಯಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಲಾಗಿದೆ. ಈ ಮೂವರು ರಾಜಸ್ಥಾನದಿಂದ ಗಿರ್ ರಾಷ್ಟ್ರೀಯ ಉದ್ಯಾನವನಕ್ಕೆ ಬಂದಿದ್ದರು ಎನ್ನಲಾಗಿದೆ.
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರಾಧನಾ ಶಾಹು ಮಾತನಾಡಿ, 'ವಿಡಿಯೋ ಬಯಲಿಗೆ ಬಂದ ನಂತರ 6 ಜನರ ವಿರುದ್ಧ ಪ್ರಕರಣ ದಾಖಲಿಸಿ 3 ಮಂದಿಯನ್ನು ಬಂಧಿಸಲಾಗಿದೆ. ರಾತ್ರಿ ವೇಳೆ ಅಕ್ರಮವಾಗಿ ಅರಣ್ಯ ಪ್ರವೇಶಿಸಿದ ಆರೋಪದ ಮೇಲೆ ಎರಡು ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಒಂದನ್ನು ಸಿಂಹಕ್ಕೆ ಕಿರುಕುಳ ನೀಡಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ' ಎಂದಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications