ಗುಜರಾತ್: 'ನಿಮ್ಮ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿ' ಅಭಿಯಾನ ಆರಂಭಿಸಿದ ಕೇಜ್ರಿವಾಲ್

ಅಹಮದಾಬಾದ್, ಅಕ್ಟೋಬರ್ 29: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸುವ ಪ್ರಯತ್ನದ ಭಾಗವಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಗುಜರಾತ್‌ಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕ್ರೌಡ್ ಸೋರ್ಸಿಂಗ್ ಅಭಿಯಾನವನ್ನು ಶನಿವಾರ ಆರಂಭಿಸಿದ್ದಾರೆ.

"ನಿಮ್ಮ ಮುಖ್ಯಮಂತ್ರಿಯನ್ನು ಆರಿಸಿ" ಅಭಿಯಾನ ಆರಂಭಿಸಿದ್ದಾರೆ. ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ಭರ್ಜರಿ ಪ್ರಚಾರ ಮಾಡುತ್ತಿರುವ ದೆಹಲಿ ಮುಖ್ಯಮಂತ್ರಿ ರ್‍ಯಾಲಿಗಳನ್ನು ಆರಂಭಿಸಿದ್ದಾರೆ. ಉಚಿತ ವಿದ್ಯುತ್, ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳಂತಹ ಚುನಾವಣಾ ಪೂರ್ವ ಭರವಸೆಗಳನ್ನು ನೀಡುತ್ತಿದ್ದಾರೆ. 182 ಸದಸ್ಯರ ಬಲದ ಗುಜರಾತ್ ವಿಧಾನಸಭೆಗೆ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಆದರೆ, ಮತದಾನದ ದಿನಾಂಕ ಇನ್ನಷ್ಟೇ ಘೋಷಣೆಯಾಗಬೇಕಿದೆ.

ಚುನಾವಣಾ ಆಯೋಗ ಹಿಮಾಚಲ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿತ್ತು. ಹಿಮಾಚಲ ಪ್ರದೇಶದೊಂದಿಗೆ ಗುಜರಾತ್‌ನ ವಿಧಾನಸಭೆ ಚುನಾವಣೆ ನಡೆಯಲಿದೆ ಎಂಬ ಊಹಾಪೋಹಗಳಿದ್ದವು. ಆದರೆ ಅದು ಅಧಿಕೃತವಾಗಿಲ್ಲ. ಚುನಾವಣಾ ಆಯೋಗದ ಪ್ರಕಾರ, ಎರಡೂ ರಾಜ್ಯಗಳಲ್ಲಿ ವಿಧಾನಸಭೆಯ ಅಧಿಕಾರಾವಧಿಯಲ್ಲಿ 40 ದಿನಗಳ ವ್ಯತ್ಯಾಸವಿದೆ. ಇಂತಹ ಪರಿಸ್ಥಿತಿಯಲ್ಲಿ ಹಿಮಾಚಲ ವಿಧಾನಸಭಾ ಚುನಾವಣೆಯ ನಂತರ ಗುಜರಾತ್ ಚುನಾವಣೆ ನಡೆಯಲಿದೆ. ಇದೀಗ ಗುಜರಾತ್‌ನಲ್ಲಿ ಚುನಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಯಾವುದೇ ಸಮಯದಲ್ಲಿ ದಿನಾಂಕ ಘೋಷಣೆಯಾಗಬಹುದು.

ಗಡಿ ಭದ್ರತೆ ಹೆಚ್ಚಳ

ಗಡಿ ಭದ್ರತೆ ಹೆಚ್ಚಳ

ಮೂಲಗಳ ಪ್ರಕಾರ ಚುನಾವಣಾ ಆಯೋಗದ ತಂಡ ಗುಜರಾತ್ ವಿಧಾನಸಭೆ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಶೀಘ್ರದಲ್ಲೇ ಚುನಾವಣಾ ದಿನಾಂಕಗಳನ್ನು ಘೋಷಿಸಬಹುದು. ಕಳೆದ ಬಾರಿಯಂತೆ ಈ ಬಾರಿಯೂ ಎರಡು ಹಂತಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಇದೇ ವೇಳೆ ಗಡಿ ರಾಜ್ಯವಾಗಿರುವ ಕಾರಣ ಚುನಾವಣಾ ಆಯೋಗ ಅಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡುತ್ತಿದೆ. ಇದರೊಂದಿಗೆ ಗಡಿಯ ಭದ್ರತೆಯನ್ನೂ ಹೆಚ್ಚಿಸಲಾಗಿದೆ.

ಬಿಜೆಪಿ ಮತ್ತು ಎಎಪಿ ಜಿದ್ದಾಜಿದ್ದಿ

ಬಿಜೆಪಿ ಮತ್ತು ಎಎಪಿ ಜಿದ್ದಾಜಿದ್ದಿ

ಗುಜರಾತ್ ವಿಧಾನಸಭೆಯಲ್ಲಿ ಒಟ್ಟು 182 ಸ್ಥಾನಗಳಿವೆ. ಈ ಬಾರಿ ಬಿಜೆಪಿ, ಕಾಂಗ್ರೆಸ್ ಹೊರತುಪಡಿಸಿ ಆಮ್ ಆದ್ಮಿ ಪಕ್ಷವೂ ಕಣದಲ್ಲಿದೆ. ಇದರಿಂದಾಗಿ ಸ್ಪರ್ಧೆಯು ತ್ರಿಕೋನ ರೀತಿಯಲ್ಲಿ ನಡೆಯಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಗೆದ್ದು ಸಂಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ರಚಿಸಿದರೆ, ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದಿದೆ. ರಾಜ್ಯ ವಿಧಾನಸಭೆಯ ಅವಧಿ ಫೆಬ್ರವರಿ 18, 2023 ರಂದು ಕೊನೆಗೊಳ್ಳುತ್ತದೆ. ಅದಕ್ಕೂ ಮೊದಲು ಅಲ್ಲಿ ಚುನಾವಣೆ ನಡೆಸಿ ಫಲಿತಾಂಶಗಳನ್ನು ಘೋಷಿಸಲಾಗುತ್ತದೆ.

ಬಿಜೆಪಿ ಮತ್ತು ಕಾಂಗ್ರೆಸ್ ಕಥೆ ಏನು?

ಬಿಜೆಪಿ ಮತ್ತು ಕಾಂಗ್ರೆಸ್ ಕಥೆ ಏನು?

ಆಮ್ ಆದ್ಮಿ ಪಕ್ಷವು ಗುಜರಾತ್‌ನಲ್ಲಿ ಸಕ್ರಿಯವಾಗಿದೆ. ಈ ಕಾರಣದಿಂದಾಗಿ ಅವರ ಹಿರಿಯ ನಾಯಕರು ನಿರಂತರವಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇದೀಗ ಚುನಾವಣಾ ಆಯೋಗವು ಅಧಿಕೃತವಾಗಿ ದಿನಾಂಕಗಳನ್ನು ಪ್ರಕಟಿಸಿಲ್ಲ, ಆದರೆ ಆಪ್ 13 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಇನ್ನೂ ಯಾವುದೇ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಮೂಲಗಳ ಪ್ರಕಾರ, ದಿನಾಂಕ ಘೋಷಣೆಯ ನಂತರವೇ ಎರಡೂ ಪಕ್ಷಗಳು ಪಟ್ಟಿಯನ್ನು ಬಿಡುಗಡೆ ಮಾಡುತ್ತವೆ.

ಮುಂಗಾರು ಮಳೆಯಿಂದಾಗಿ ರೈತರಿಗೆ ನಷ್ಟ

ಮುಂಗಾರು ಮಳೆಯಿಂದಾಗಿ ರೈತರಿಗೆ ನಷ್ಟ

ಬಿಜೆಪಿ ಸರ್ಕಾರ ಸಾಲು ಸಾಲು ಯೋಜನೆಗಳನ್ನು ಘೋಷಿಸುತ್ತಿದೆ. ಈ ಬಾರಿಯ ಮುಂಗಾರು ಮಳೆಯಿಂದಾಗಿ ನಷ್ಟ ಅನುಭವಿಸಿದ ರೈತರಿಗೆ ರಾಜ್ಯ ಸರ್ಕಾರ ಶುಕ್ರವಾರ 630.34 ಕೋಟಿ ರೂಪಾಯಿಯ ಪರಿಹಾರ ಪ್ಯಾಕೇಜ್ ಘೋಷಿಸಿದೆ.

ಶುಕ್ರವಾರ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪರಿಹಾರ ಪ್ಯಾಕೇಜ್ ಅನ್ನು ಅಂಗೀಕರಿಸಲಾಗಿದೆ. 14 ಜಿಲ್ಲೆಗಳ 2,554 ಹಳ್ಳಿಗಳ ಎಂಟು ಲಕ್ಷ ರೈತರಿಗೆ ಈ ಪರಿಹಾರ ಪ್ಯಾಕೇಜ್‌ನಿಂದ ಪ್ರಯೋಜನವಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+