ಗುಜರಾತ್ ಚುನಾವಣೆ; ಬಿಜೆಪಿ ವಿರುದ್ದ ಆರ್ಚ್ ಬಿಷಪ್ ಅಸಹಿಷ್ಣುತೆ!
ಅಹಮದಾಬಾದ್, ನ 24: ಪ್ರತೀ ಸಾರ್ವತ್ರಿಕ ಚುನಾವಣೆಯ ಮುನ್ನ ದೆಹಲಿಯ ಜಾಮಾ ಮಸೀದಿಯ ಇಮಾಂ, ದೇಶದ ಮುಸ್ಲಿಂ ಬಾಂಧವರಿಗೆ ಯಾವ ಪಕ್ಷಕ್ಕೆ ಮತ ನೀಡಬೇಕೆಂದು ಫರ್ಮಾನು ಹೊರಡಿಸುವ ಪದ್ದತಿಯಿದೆ. ಇಮಾಂ ಹೊರಡಿಸುವ ಆದೇಶವನ್ನು ಮುಸ್ಲಿಮರು ಪಾಲಿಸುತ್ತಾರೋ, ಇಲ್ಲವೋ.. ಅದು ಆನಂತರದ ಪ್ರಶ್ನೆ.
ಈಗ, ಗುಜರಾತ್ ವಿಧಾನಸಭೆ ಚುನಾವಣೆಗೆ ಮುನ್ನ ಅಹಮದಾಬಾದಿನ ಆರ್ಚ್ ಬಿಷಪ್, ರಾಷ್ಟ್ರೀಯತಾವಾದಿಗಳ ವಿರುದ್ದವಾಗಿ ಮತ ಚಲಾಯಿಸಿ ಎಂದು ದೇಶದ ಸಮಸ್ತ ಕ್ರಿಶ್ಚಿಯನ್ ಸಮುದಾಯದವರಿಗೆ ಕರೆನೀಡುವ ಮೂಲಕ, ವಿವಾದದ ಕಿಡಿ ಹೊತ್ತಿಸಿದ್ದಾರೆ.

ಬಿಜೆಪಿಯ ಹೆಸರನ್ನು ಉಲ್ಲೇಖಿಸದೇ ಪತ್ರ ಬರೆದಿರುವ ಆರ್ಚ್ ಬಿಷಪ್, ರಾಷ್ಟ್ರೀಯತಾವಾದಿಗಳಿಗೆ ಚುನಾವಣೆಯಲ್ಲಿ ಸೋಲಾಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡಬೇಕೆಂದು ತಮ್ಮ ಸಮುದಾಯದವರಿಗೆ ಕರೆ ನೀಡಿದ್ದಾರೆಂದು ಇಂಡಿಯಾ ಟುಡೇ ವರದಿ ಮಾಡಿದೆ.
ನವೆಂಬರ್ 21ರಂದು ದೇಶದ ಎಲ್ಲಾ ಪ್ರಮುಖ ಚರ್ಚುಗಳಿಗೆ ಪತ್ರ ಬರೆದಿರುವ ಅಹಮದಾಬಾದ್ ನಗರದ ಆರ್ಚ್ ಬಿಷಪ್ ಥಾಮಸ್ ಮ್ಯಾಕ್ವೆನ್, ಭಾರತದ ಎಲ್ಲಾ ಕ್ರಿಶ್ಚಿಯನ್ನರಿಗೆ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಪೆಟ್ಟು ಬೀಳುತ್ತಿದೆ ಎನ್ನುವ ಅರಿವಿದೆ, ಇದರ ವಿರುದ್ದ ನಾವು ಧ್ವನಿ ಎತ್ತಬೇಕಾಗಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ, ಸಂವಿಧಾನಾತ್ಮಕ ಹಕ್ಕುಗಳಿಗೆ ಬೆಲೆಯಿಲ್ಲದಂತಾಗಿದೆ, ಚರ್ಚುಗಳ ಮೇಲೆ ದಾಳಿ ನಡೆಯದ ದಿನವೇ ಇಲ್ಲ. ದೇಶದಲ್ಲಿ ನಮ್ಮದು ಅತ್ಯಂತ ನಿಷ್ಠಾವಂತ ಸಮುದಾಯವಾಗಿದ್ದರೂ, ನಮ್ಮ ಸಮುದಾಯದವರು ಪ್ರತೀ ದಿನ ತೊಂದರೆ ಎದುರಿಸಬೇಕಾಗಿದೆ ಎಂದು ಆರ್ಚ್ ಬಿಷಪ್ ತಾವು ಬರೆದಿರುವ ಪತ್ರದಲ್ಲಿ ನೋವು ತೋಡಿಕೊಂಡಿದ್ದಾರೆ.
ದೇಶದಲ್ಲಿ ಈಗಾಗಲೇ ತಮ್ಮ ಪ್ರಭಾವವನ್ನು ಹೆಚ್ಚಿಸಿಕೊಂಡಿರುವ ರಾಷ್ಟ್ರೀಯತಾವಾದಿಗಳಿಗೆ ತಮ್ಮ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲು ಗುಜರಾತ್ ಚುನಾವಣೆ ಅತ್ಯಂತ ನಿರ್ಣಾಯಕ. ಹಾಗಾಗಿ, ಕ್ರಿಶ್ಚಿಯನ್ ಸಮುದಾಯದವರು ಇಂತಹ ಶಕ್ತಿಗಳ ವಿರುದ್ದ ಮತಚಲಾಯಿಸಬೇಕೆಂದು, ಪರೋಕ್ಷವಾಗಿ ಬಿಜೆಪಿಗೆ ಮತನೀಡಬೇಡಿ ಎಂದು ಕರೆನೀಡಿದ್ದಾರೆ.
ಪ್ರತೀದಿನ ಚರ್ಚ್ ಮೇಲೆ ಮತ್ತು ಕ್ರಿಶ್ಚಿಯನ್ನರ ಮೇಲೆ ದಾಳಿಯಾಗುತ್ತಿದೆ ಎಂದು ಆರ್ಚ್ ಬಿಷಪ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ, ಆದರೆ ಅದಕ್ಕೆ ಪೂರಕವಾದ ಯಾವುದೇ ಸ್ಪಷ್ಟನೆಯನ್ನು ಪತ್ರದಲ್ಲಿ ಅವರು ನೀಡಲಿಲ್ಲ.
ಕೊನೇಮಾತು: ಒಂದು ವೇಳೆ, ಪ್ರತೀದಿನ ದಾಳಿ ನಡೆದಿದ್ದೇ ಆದಲ್ಲಿ ನಮ್ಮ ಅತೀ ಬುದ್ದಿಜೀವಿಗಳು ಸುಮ್ಮನೆ ಇರುತ್ತಾರೆ ಅನ್ಕೊಂಡ್ರಾ? ರಾಷ್ಟ್ರೀಯತಾವಾದಿಗಳ ವಿರುದ್ದ ಹೋರಾಡಿ ಅನ್ನುವ ನಿಮಗೆ, ಮಿಷನರಿಗಳು ಹಿಂದೂಗಳ ಮತಾಂತರ ನಡೆಸುತ್ತಿರುವುದು ನಿಮ್ಮ ಕಣ್ಣಿಗೆ ಬಿದ್ದಿಲ್ಲವೇ?
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications