ಗುಜರಾತ್ ನಲ್ಲಿ ರಾಷ್ಟ್ರೀಯ ಪಕ್ಷಗಳನ್ನೇ ಹಿಂದಿಕ್ಕಿದ 'ನೋಟಾ'
Recommended Video

ಅಹಮದಾಬಾದ್, ಡಿಸೆಂಬರ್ 18: ಬಹುನಿರೀಕ್ಷಿತ ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಜಿದ್ದಾಜಿದ್ದಿನ ಕಾಳಗದಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ.
ಇಲ್ಲಿ ನಾಲ್ಕನೇ ಸ್ಥಾನವನ್ನು ನೋಟಾ (NOTA - None of the Above) ಪಡೆದುಕೊಂಡಿದ್ದು ರಾಷ್ಟ್ರೀಯ ಪಕ್ಷಗಳಾದ ಎನ್.ಸಿ.ಪಿ ಮತ್ತು ಬಿಎಸ್ಪಿಯನ್ನೇ ಹಿಂದಿಕ್ಕಿದೆ. ಗುಜರಾತ್ ಚುನಾವಣೆಯಲ್ಲಿ ಶೇಕಡಾ 1.8 ನೋಟಾ ಮತಗಳು ಚಲಾವಣೆಯಾಗಿವೆ. ಒಟ್ಟು 5,24,709 ಜನರು ನೋಟಾ ಗುಂಡಿ ಒತ್ತಿದ್ದಾರೆ.

ವಿಜಯಶಾಲಿ ಬಿಜೆಪಿ ಶೇಕಡಾ 49.0 ಮತಗಳನ್ನು ಬುಟ್ಟಿಗೆ ಹಾಕಿಕೊಂಡಿದ್ದು 1,39,79,099 ಜನರ ಮತ ಪಡೆದಿದೆ. ಬಿಜೆಪಿ ಭಾರೀ ಪೈಪೋಟಿ ನೀಡಿದ ಕಾಂಗ್ರೆಸ್ ಶೇ. 41.4 ಮತಗಳನ್ನು ಬಾಚಿಕೊಂಡಿದ್ದು 1,18,18,690 ಮತಗಳನ್ನು ಗಳಿಸಿಕೊಂಡಿದೆ.
ಇನ್ನು ಪಕ್ಷೇತರ ಅಭ್ಯರ್ಥಿಗಳು ಶೇಕಡಾ 4.3 ಮತಗಳನ್ನು ಪಡೆದಿದ್ದಾರೆ. ಒಟ್ಟು 12,24,216 ಮತದಾರರು ಪಕ್ಷೇತರರಿಗೆ ಮತದಾನ ಮಾಡಿದ್ದಾರೆ. ಬಿಟಿಪಿ, ಬಿಎಸ್ಪಿ, ಎನ್.ಸಿ.ಪಿ, ಎಐಎನ್ಎಚ್ ಸಿಪಿ, ಆರ್.ಎಸ್.ಪಿ.ಎಸ್ ಪಕ್ಷಗಳು ಕ್ರಮವಾಗಿ ಶೇ. 0.8, 0.7, 0.6, 0.3, 0.2 ಮತಗಳನ್ನು ಪಡೆದಿವೆ.

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನೋಟಾ ಐದನೇ ಸ್ಥಾನ ಪಡೆದುಕೊಂಡಿದೆ. ಇಲ್ಲಿ ಶೇಕಡಾ 0.9 ಮತದಾರರು ನೋಟಾಗೆ ಮತ ಹಾಕಿದ್ದಾರೆ. ಹೀಗೆ ಬಿದ್ದಿರುವ ಒಟ್ಟು ನೋಟಾ ಮತಗಳ ಸಂಖ್ಯೆ 29,618.
ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಜಯ ದಾಖಲಿಸಿರುವ ಬಿಜೆಪಿ ಶೇಕಡಾ 48.5 ಮತಗಳನ್ನು ಪಡೆದಿದೆ. ಮತ್ತು ಕೇಸರಿ ಪಕ್ಷಕ್ಕೆ 15,74,210 ಜನರು ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ ಶೇಕಡಾ 41.8 ಮತಗಳನ್ನು ಪಡೆದಿದ್ದು 12,54,709 ಮತಗಳನ್ನು ಗಳಿಸಿದೆ.
ಇಲ್ಲಿ ಪಕ್ಷೇತರರ ಪರ ಶೇಕಡಾ 6.4, ಸಿಪಿಎಂ ಪರ ಶೇಕಡಾ 1.6, ಬಿಎಸ್ಪಿ ಪರ ಶೇಕಡಾ 0.5 ಮತಗಳು ಚಲಾವಣೆಯಾಗಿವೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications