ಗುಜರಾತ್ ಚುನಾವಣೆ: ಮತ್ತೊಬ್ಬ ಕಾಂಗ್ರೆಸ್ ಶಾಸಕ ಬಿಜೆಪಿಗೆ
ಅಹಮದಾಬಾದ್, ನ.10 : ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ಗೆ ಮತ್ತೊಂದು ಆಘಾತ ಉಂಟಾಗಿದೆ. ಝಲೋದ್ ಕ್ಷೇತ್ರದ ಪಕ್ಷದ ಶಾಸಕ ಭವೇಶ್ ಕಟಾರಾ ಬುಧವಾರ ಸ್ಪೀಕರ್ ನಿಮಾಬೆನ್ ಆಚಾರ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಬುಧವಾರ ಒಂದೇ ದಿನ ಇಬ್ಬರು ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಿದ್ದಾರೆ. ಭವೇಶ್ ಕಟಾರಾಗೂ ಮೊದಲು, ಗುಜರಾತ್ನ ತಲಾಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಭಗವಾನ್ಭಾಯ್ ಡಿ ಬರಾದ್ ಅವರು ಕಾಂಗ್ರೆಸ್ನ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿ, ರಾಜೀನಾಮೆ ಪತ್ರವನ್ನು ಸ್ಪೀಕರ್ ಡಾ. ನಿಮಾಬೆನ್ ಆಚಾರ್ಯ ಅವರಿಗೆ ಸಲ್ಲಿಸಿದ್ದಾರೆ.
ತಮ್ಮ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಕಾಂಗ್ರೆಸ್ ತೊರೆಯಲು ನಿರ್ಧರಿಸಿರುವುದಾಗಿ ತಿಳಿಸಿದ್ದು, ಚುನಾವಣೆಗೂ ಮುನ್ನ ಅವರು ಬಿಜೆಪಿ ಸೇರಲಿದ್ದಾರೆ.

ಹತ್ತು ಬಾರಿ ಶಾಸಕರಾಗಿರುವ ಕಾಂಗ್ರೆಸ್ ಪಕ್ಷದ ಶಾಸಕ ಮತ್ತು ಬುಡಕಟ್ಟು ಮುಖಂಡ ಮೋಹನ್ಸಿನ್ಹ್ ರಥ್ವಾ ಮಂಗಳವಾರ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ತೆರಳಿದ್ದಾರೆ. ಇದು ಕಾಂಗ್ರೆಸ್ಗೆ ದೊಡ್ಡ ಹೊಡೆತ. ಇದರ ಬೆನ್ನಲ್ಲೆ ಸತತ ಎರಡನೇ ದಿನವೂ ಕಾಂಗ್ರೆಸ್ ಪಕ್ಷಕ್ಕೆ ಆಘಾತ ಉಂಟಾಗಿದೆ.
ಇತ್ತ, ಗುರುವಾರ ಭಾರತೀಯ ಜನತಾ ಪಕ್ಷವೂ ಗುಜರಾತ್ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸಿಆರ್ ಪಾಟೀಲ್ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟ್ಟಿ ಘೋಷಣೆ ಮಾಡುವ ಸಾಧ್ಯತೆಯಿದೆ.
2017ರ ಚುನಾವಣೆಯಲ್ಲಿ ಗೆದ್ದಿರುವ 99 ಶಾಸಕರ ಪೈಕಿ ಶೇ.20ರಷ್ಟು ಮಂದಿಯನ್ನು ಈ ಬಾರಿ ಬಿಜೆಪಿ ಕೈಬಿಡಬಹುದು ಎಂದು ಮೂಲಗಳು ತಿಳಿಸಿವೆ.

ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಗುಜರಾತ್ನಲ್ಲಿ ಏಳನೇ ಅವಧಿಯ ಅಧಿಕಾರವನ್ನು ಪಡೆಯುವ ವಿಶ್ವಾಸದಲ್ಲಿ ಬಿಜೆಪಿಯಿದೆ. ಗುಜರಾತ್ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಮತಗಳ ಎಣಿಕೆ ನಡೆಯಲಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ












Click it and Unblock the Notifications