ಅಂಬೇಡ್ಕರ್ ಮತ್ತು ಮೋದಿ ಬ್ರಾಹ್ಮಣರು: ಗುಜರಾತ್ ಸ್ಪೀಕರ್
ಗಾಂಧಿನಗರ (ಗುಜರಾತ್) ಮೇ 1: ದಲಿತ ನಾಯಕ ಡಾ.ಬಿ.ಆರ್. ಅಂಬೇಡ್ಕರ್ ಒಬ್ಬ ಬ್ರಾಹ್ಮಣ. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಅವರೂ ಬ್ರಾಹ್ಮಣರೇ ಎಂದು ಗುಜರಾತ್ ವಿಧಾನಸಭೆ ಸ್ಪೀಕರ್ ರಾಜೇಂದ್ರ ತ್ರಿವೇದಿ ಹೇಳಿದ್ದಾರೆ.
ತಿಳಿವಳಿಕೆ ಹೊಂದಿರುವ ಯಾವ ವ್ಯಕ್ತಿಯನ್ನಾದರೂ ಬ್ರಾಹ್ಮಣ ಎಂದು ಕರೆಯುವುದರಲ್ಲಿ ಯಾವ ತಪ್ಪೂ ಇಲ್ಲ ಎಂದು ಅವರು ವಿವರಣೆ ನೀಡಿದ್ದಾರೆ.
ಗಾಂಧಿನಗರದಲ್ಲಿ ಭಾನುವಾರ ಮೆಗಾ ಬ್ರಾಹ್ಮಣ ಉದ್ದಿಮೆ ಸಮಾವೇಶ ಉದ್ದೇಶಿಸಿ ಮಾತನಾಡುವಾಗ ಅವರು ಈ ಹೇಳಿಕೆ ನೀಡಿದ್ದಾರೆ.

'ಅಂಬೇಡ್ಕರ್ ಒಬ್ಬ ಬ್ರಾಹ್ಮಣರಾಗಿದ್ದರು ಎಂದು ಹೇಳುವುದಕ್ಕೆ ನನಗೆ ಅಂಜಿಕೆಯೂ ಇಲ್ಲ. ಜ್ಞಾನವಂತ ವ್ಯಕ್ತಿಯನ್ನು ಬ್ರಾಹ್ಮಣ ಎಂದು ಕರೆಯುವುದರಲ್ಲಿ ಯಾವುದೇ ತಪ್ಪಿಲ್ಲ. ಇದೇ ರೀತಿ ಪ್ರಧಾನಿ ನರೇಂದ್ರ ಮೋದಿ ಅವರೂ ಬ್ರಾಹ್ಮಣರಾಗಿದ್ದಾರೆ ಎಂದು ನಾನು ಹೇಳುತ್ತೇನೆ' ಎಂದಿದ್ದಾರೆ.
ಅಂಬೇಡ್ಕರ್ ಅವರಿಗೆ ನೀಡಿರುವ ಅಡ್ಡಹೆಸರು (ಸರ್ನೇಮ್) ಬ್ರಾಹ್ಮಣರದ್ದು ಮತ್ತು ಅದನ್ನು ನೀಡಿರುವ ಅವರ ಶಿಕ್ಷಕ ಕೂಡ ಬ್ರಾಹ್ಮಣರಾಗಿದ್ದರು ಎಂದು ತ್ರಿವೇದಿ ಹೇಳಿದ್ದಾರೆ.
ರಾಮ ಕ್ಷತ್ರಿಯ ಜಾತಿಗೆ ಸೇರಿದವನಾಗಿದ್ದರೆ, ಕೃಷ್ಣ ಇತರೆ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿದವನಾಗಿದ್ದಾನೆ. ಆದರೆ ಋಷಿಗಳು ಅವರನ್ನು ದೇವರನ್ನಾಗಿಸಿದರು ಎಂದೂ ಅವರು ಹೇಳಿಕೆ ನೀಡಿದ್ದಾರೆ.
ತ್ರಿವೇದಿ ಹೇಳಿಕೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ. ಜಾತಿವಾದದ ವಿರುದ್ಧ ತಮ್ಮ ಜೀವಮಾನವಿಡೀ ಹೋರಾಟ ನಡೆಸಿದ ಅಂಬೇಡ್ಕರ್ ಅವರಿಗೆ ಜಾತಿ ಪ್ರಮಾಣಪತ್ರ ನೀಡಲು ತ್ರಿವೇದಿ ಅವರಿಗೆ ಯಾವುದೇ ಹಕ್ಕಿಲ್ಲ. ಅಂಬೇಡ್ಕರ್ ಅವರ ಬೋಧನೆಗಳು ಆರ್ಎಸ್ಎಸ್ ಜತೆ ನಂಟು ಹೊಂದಿರುವ ತ್ರಿವೇದಿ ಅವರಿಗೆ ಅರ್ಥವಾಗಲು ಸಾಧ್ಯವಿಲ್ಲ ಎಂದು ಶಾಸಕ ಜಿಗ್ನೇಶ್ ಮೇವಾನಿ ಟೀಕಿಸಿದ್ದಾರೆ.
ತಮ್ಮ ಹೇಳಿಕೆಯು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸ್ಪಷ್ಟೀಕರಣ ನೀಡಿರುವ ತ್ರಿವೇದಿ, 'ವ್ಯಕ್ತಿಯ ಜ್ಞಾನದ ಮೇಲೆ ಜಾತಿ ನಿರ್ಧರಿತವಾಗಬೇಕೇ ಹೊರತು ಹುಟ್ಟಿನಿಂದ ಅಲ್ಲ ಎಂದು ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ್ದಾನೆ. ಆದ್ದರಿಂದ ಜ್ಞಾನ ಹೊಂದಿರುವ ಯಾರನ್ನಾದರೂ ಬ್ರಾಹ್ಮಣ ಎಂದೇ ಕರೆಯಬಹುದು. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ' ಎಂದು ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications