ಗುಜರಾತಿನ ಕಚ್ ನಲ್ಲಿ ಐಎಸ್ಐ ಏಜೆಂಟ್ ಗಳ ಬಂಧನ
ಗಾಂಧಿನಗರ, ಅಕ್ಟೋಬರ್ 13: ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ (ಐಎಸ್ಐ) ಬೆಂಬಲಿತ ಇಬ್ಬರು ಏಜೆಂಟ್ ಗಳನ್ನು ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಬುಧವಾರ ರಾತ್ರಿ ಕಚ್ ಜಿಲ್ಲೆಯ ಖಾವ್ಡಾದಲ್ಲಿ ಬಂಧಿಸಿದ್ದಾರೆ. ಬಂಧಿತರು ವಿಚಾರಣೆ ವೇಳೆ ಅನೇಕ ಸ್ಫೋಟಕ ಮಾಹಿತಿಗಳು ಹೊರ ಬೀಳುವ ಸಾಧ್ಯತೆಯಿದೆ.
ಕಚ್ ಜಿಲ್ಲೆಯ ಖಾವ್ಡಾದಲ್ಲಿ ಕಾರ್ಯನಿರ್ವಹಿಸಿಸುತ್ತಿದ್ದ ಇಬ್ಬರು ಐಎಸ್ಐ ಏಜೆಂಟ್ ಗಳ ಮೇಲೆ ಅನುಮಾನದ ಹಿನ್ನೆಲೆಯಲ್ಲಿ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಬಂಧಿಸಿದ್ದಾರೆ. ಇವರಿಬ್ಬರ ಮೇಲೆ ಕಳೆದ ಒಂದು ವರ್ಷದಿಂದ ನಿಗಾವಹಿಸಲಾಗಿತ್ತು. ಬಂಧಿತರ ಬಳಿ ಪಾಕಿಸ್ತಾನ ಸಿಮ್ ಹಾಗೂ ಮೊಬೈಲ್ ಫೋನ್ ಪತ್ತೆಯಾಗಿದೆ.

ಸರ್ಜಿಕಲ್ ದಾಳಿಗೆ ಪ್ರತೀಕಾರವಾಗಿ ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಭಯೋತ್ಪಾದನಾ ಸಂಘಟನೆಗಳು ಸಂಚು ರೂಪಿಸುತ್ತಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದ ಬೆನ್ನಲ್ಲೇ ಈ ಬೆಳವಣಿಗೆ ಕಂಡು ಬಂದಿದೆ. ಪಾಕಿಸ್ತಾನದ ಐಎಸ್ಐ ಮತ್ತು ಉಗ್ರರಿಗೆ ಮಹತ್ವದ ಮಾಹಿತಿಗಳನ್ನು ಈ ಪಾಕ್ ಮೂಲದ ಗೂಢಚಾರರು ನೀಡುತ್ತಿದ್ದರೆಂಬ ಅಂಶದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
ಭಾರತೀಯ ಕಮ್ಯಾಂಡೋಗಳು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೈಗೊಂಡ ಸರ್ಜಿಕಲ್ ದಾಳಿ ನಂತರ ಐಎಸ್ಐ ಸೂಚನೆ ಮೇರೆಗೆ ಅನೇಕ ಉಗ್ರರು ದೇಶದೊಳಗೆ ನುಸುಳಿ ವಿಧ್ವಂಸಕ ಕೃತ್ಯಗಳನ್ನು ಎಸಗಲಿದ್ದಾರೆ ಎಂಬ ಗುಪ್ತಚರ ಮಾಹಿತಿ ನೀಡಿತ್ತು. ಅದರಲ್ಲೂ ಗಡಿಭಾಗದಲ್ಲಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಹೊರ ಬಂದಿದೆ. ಈಗ ಇವರಿಬ್ಬರ ವಿಚಾರಣೆ ನಂತರ ಇನ್ನಷ್ಟು ಮಾಹಿತಿ ಹೊರ ಬೀಳುವ ಸಾಧ್ಯತೆಯಿದೆ.(ಪಿಟಿಐ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications