ಗುಜರಾತ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಭೂಪೇಂದ್ರ ಪಟೇಲ್ ಆಯ್ಕೆ
ಗಾಂಧಿನಗರ, ಡಿಸೆಂಬರ್ 10: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ.
ಇಂದು (ಡಿಸೆಂಬರ್ 10) ಗುಜರಾತ್ನ ಗಾಂಧಿನಗರದಲ್ಲಿ ಹೊಸದಾಗಿ ಆಯ್ಕೆಯಾದ ಭಾರತೀಯ ಜನತಾ ಪಕ್ಷದ (BJP) ಶಾಸಕರ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ನಿಯೋಜಿತ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ವರದಿಗಳ ಪ್ರಕಾರ, ಪಾರ್ಡೊ ಶಾಸಕ ಕಾನು ದೇಸಾಯಿ ಭೂಪೇಂದ್ರ ಪಟೇಲ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಅದಕ್ಕೆ ಎಲ್ಲಾ ಶಾಸಕರ ಅವಿರೋಧವಾಗಿ ಅನುಮೋದನೆ ನೀಡಿದರು.
ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅರ್ಜುನ್ ಮುಂಡಾ ಅವರು ಕೂಡ ಸಭೆಯಲ್ಲಿ ಕೇಂದ್ರ ವೀಕ್ಷಕರಾಗಿ ಭಾಗವಹಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್. ಪಾಟೀಲ್ ಅವರೊಂದಿಗೆ ಭೂಪೇಂದ್ರ ಪಟೇಲ್ ಅವರು ನವದೆಹಲಿಗೆ ಭೇಟಿ ನೀಡಲಿದ್ದಾರೆ. ತಮ್ಮ ಭೇಟಿಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಅವರೊಂದಿಗೆ ಮಾತಕತೆ ನಡೆಸಲಿದ್ದಾರೆ. ಡಿಸೆಂಬರ್ 12 ರ ಸೋಮವಾರದಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಔಪಚಾರಿಕ ಆಹ್ವಾನವನ್ನು ನೀಡಲಿದ್ದಾರೆ.
ಸಭೆಯ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಹಾರ್ದಿಕ್ ಪಟೇಲ್, ಮತ್ತೊಮ್ಮೆ ಬಿಜೆಪಿ ಸರ್ಕಾರ ರಚಿಸಿದೆ. ಇದರಿಂದ ಗುಜರಾತ್ ಮತ್ತಷ್ಟು ಪ್ರಬಲವಾಗುತ್ತದೆ. ಮುಂದಿನ 5 ರಿಂದ ಹತ್ತು ವರ್ಷಗಳಲ್ಲಿ ಇಲ್ಲಿ ಅಭಿವೃದ್ಧಿ ಪರ್ವವೇ ಆರಂಭವಾಗಲಿದೆ ಎಂದು ಹೇಳಿದರು.
'ನನಗೆ ಗೊತ್ತಿಲ್ಲ, ನಾನು ಮೊದಲಿನಿಂದಲೂ ಕೇವಲ ಸೈನಿಕನ ಪಾತ್ರವನ್ನು ನಿರ್ವಹಿಸಿದ್ದೇನೆ. ಪಕ್ಷವು ನನಗೆ ಯಾವುದೇ ಪಾತ್ರವನ್ನು ವಹಿಸಿದರೂ ನಾನು ಸ್ವೀಕರಿಸುತ್ತೇನೆ' ಎಂದು ಅವರು ಸಚಿವ ಸಂಪುಟದ ಬಗ್ಗೆ ಕೇಳಿದಾಗ ಹೇಳಿದರು.

ಬಿಜೆಪಿ ಶಾಸಕ ಹರ್ಷ ಸಾಂಘ್ವಿ ಮಾತನಾಡಿ, ಗುಜರಾತ್ ಚುನಾವಣೆಯಲ್ಲಿ ಗೆಲ್ಲಲು ಪ್ರತಿಪಕ್ಷಗಳು ಎಲ್ಲ ಆರೋಪಗಳನ್ನು ಮಾಡಿದ್ದರು. ಆದರೆ, ಜನರೇ ಅವರಿಗೆ ಉತ್ತರ ನೀಡಿದ್ದಾರೆ.
'ಈ ಚುನಾವಣೆಗಳು ಅಧಿಕಾರಕ್ಕಾಗಿ ಅಲ್ಲ, ಈ ಚುನಾವಣೆಗಳು ಸಂಬಂಧ ಮತ್ತು ನಂಬಿಕೆಗಾಗಿ ನಡೆದಿವೆ. ಈ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದಿದೆ' ಎಂದು ಅವರು ಹೇಳಿದರು.
ಗುಜರಾತ್ನಲ್ಲಿ ಸತತ ಏಳನೇ ಬಾರಿ ಬಿಜೆಪಿ ಅಧಿಕಾರ ಹಿಡಿದಿದೆ. ಗುಜರಾತ್ನ 182 ಸ್ಥಾನಗಳ ಪೈಕಿ 156 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಕಾಂಗ್ರೆಸ್ ಕೇವಲ 11 ಸ್ಥಾನಗಳಲ್ಲಿ ಜಯ ಗಳಿಸಿದೆ. ಎಎಪಿ ಐದು ಸ್ಥಾನಗಳನ್ನು ಪಡೆದುಕೊಂಡಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications