Gujarat: ಅಕ್ರಮ ದರ್ಗಾ ತೆರವಿಗೆ ನೋಟಿಸ್ ಜಾರಿಯಿಂದ ಘರ್ಷಣೆ: ಓರ್ವ ಸಾವು, 3 ಪೊಲೀಸರಿಗೆ ಗಾಯ!
ದರ್ಗಾವನ್ನು ಕೆಡವಲು ನಾಗರಿಕ ಮಂಡಳಿಯ ಅಧಿಕಾರಿಗಳ ತಂಡವು ನೋಟಿಸ್ ನೀಡಿದ ಪರಿಣಾಮ ಸಂಭವಿಸಿದ ಗಲಾಟೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಪೊಲೀಸರು ಗಾಯಗೊಂಡ ಘಟನೆ ಗುಜರಾತಿನ ಜುನಾಗಢ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಅಕ್ರಮ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ನಾಗರಿಕ ಮಂಡಳಿಯ ಅಧಿಕಾರಿಗಳ ತಂಡ ನೋಟಿಸ್ ನೀಡಿತ್ತು. ಇದರಿಂದ ಶುಕ್ರವಾರ ಸಂಜೆ ದರ್ಗಾದ ಸುತ್ತಲೂ ಕನಿಷ್ಠ 200-300 ಜನರು ಜಮಾಯಿಸಿದ್ದರು. ಈ ವೇಳೆ ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವರು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿರುವುದು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಿಸುತ್ತದೆ.
#WATCH | Stones pelted, cops injured after a mob protest against the anti-encroachment drive in Gujarat's Junagadh last night
— ANI (@ANI) June 17, 2023
(Note: Abusive language) pic.twitter.com/8wRw0YgO3z
ಮಾತ್ರವಲ್ಲದೆ ಉದ್ರಿಕ್ತ ಗುಂಪು ಪೊಲೀಸ್ ಪೋಸ್ಟ್ ಅನ್ನು ಧ್ವಂಸಗೊಳಿಸಿದೆ ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದೆ. ದಾಳಿಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ಪೊಲೀಸರು 174 ಜನರನ್ನು ಬಂಧಿಸಿದ್ದಾರೆ.

ಜನಸಮೂಹ ಪೊಲೀಸರ ಮೇಲೆ ಕಲ್ಲು ತೂರಾಟವನ್ನು ಪ್ರಾರಂಭಿಸಿದಾಗ, ಪೊಲೀಸ್ ಅಧಿಕಾರಿಗಳು ಉದ್ರಿಕ್ತ ಗುಂಪಿನ ಮೇಲೆ ಅಶ್ರುವಾಯು ಶೆಲ್ಗಳನ್ನು ಹಾರಿಸುವ ಮೂಲಕ ಪ್ರತೀಕಾರ ತೀರಿಸಿದರು.
ಗಲಾಟೆಗೆ ಕಾರಣವೇನು?
ಧಾರ್ಮಿಕ ರಚನೆಯಾದ ದರ್ಗಾವನ್ನು "ಕಾನೂನುಬಾಹಿರವಾಗಿ" ನಿರ್ಮಿಸಲಾಗಿದೆ ಎಂದು ಜುನಾಗಢ್ ಮುನ್ಸಿಪಲ್ ಕಾರ್ಪೊರೇಶನ್ನ ಪದಚ್ಯುತಿ ನೋಟೀಸ್ನಲ್ಲಿ ತಿಳಿಸಲಾಗಿತ್ತು. ಇದರಿಂದಾಗಿ ಗಲಾಟೆ ಶುರುವಾಗಿದೆ. ದರ್ಗಾವನ್ನು ಕಾನೂನಾತ್ಮಕವಾಗಿ ನಿರ್ಮಿಸಲಾಗಿದೆ ಎಂಬುದಕ್ಕೆ ಸಾಕ್ಷ್ಯಾಧಾರಗಳನ್ನು ಸಲ್ಲಿಸಲು ಐದು ದಿನಗಳ ಗಡುವು ನೀಡಲಾಗಿತ್ತು. ಇಲ್ಲದಿದ್ದರೆ ಅದನ್ನು ಕೆಡವಲಾಗುವುದು ಎಂದು ಹೇಳಲಾಗಿತ್ತು. ಅದರ ವೆಚ್ಚವನ್ನು ಆಡಳಿತ ಮಂಡಳಿಯೇ ಭರಿಸುತ್ತದೆ ಎಂದು ಹೇಳಲಾಗಿದೆ.
"ನಾವು 174 ಜನರನ್ನು ವಶಕ್ಕೆ ಪಡೆದಿದ್ದೇವೆ. ನಮ್ಮ ತಂಡಗಳು ಇಡೀ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದವು. ಜನಸಮೂಹವು ಕಲ್ಲು ತೂರಾಟವನ್ನು ಪ್ರಾರಂಭಿಸಿದಾಗ, ನಾವು ಅಶ್ರುವಾಯು ಶೆಲ್ಗಳನ್ನು ಹಾರಿಸಬೇಕಾಯಿತು. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಶಂಕಿತರನ್ನು ಬಂಧಿಸಲಾಗಿದೆ. ಈಗ ದರ್ಗಾವನ್ನು ಯಾವಾಗ ಕೆಡವಬೇಕು ಎಂಬುದನ್ನು ಮಹಾನಗರ ಪಾಲಿಕೆ ನಿರ್ಧರಿಸಲಿದೆ,'' ಎಂದು ಪೊಲೀಸರು ತಿಳಿಸಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications