₹200 ಕೋಟಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ ಜೈನ ದಂಪತಿ
ಸನ್ಯಾಸತ್ವ ಎಂದರೆ ಎಲ್ಲವನ್ನೂ ತ್ಯಾಗ ಮಾಡುವ ಮನಸ್ಥಿತಿ. ಗುಜರಾತ್ನ ಶ್ರೀಮಂತ ದಂಪತಿಗಳು ನೂರಾರು ಕೋಟಿ ರೂಪಾಯಿ ಆಸ್ತಿ ಇದ್ದರೂ ಎಲ್ಲವನ್ನೂ ತ್ಯಾಗ ಮಾಡಿ ಈಗ ಸನ್ಯಾಸತ್ವ ಸ್ವೀಕರಿಸಿದ್ದಾರೆ.
ಜೈನ ದಂಪತಿಗಳು ಸುಮಾರು ₹200 ಕೋಟಿ ದೇಣಿಗೆ ನೀಡಿ ಸನ್ಯಾಸ ಸ್ವೀಕರಿಸಿದ್ದಾರೆ. ಇದೀಗ ಮೋಕ್ಷಕ್ಕಾಗಿ ಪ್ರಯಾಣ ಬೆಳೆಸಲು ಮುಂದಾಗಿದ್ದಾರೆ. ಫೆಬ್ರವರಿಯಲ್ಲಿ ನಡೆದ ಸಮಾರಂಭದಲ್ಲಿ ಭಾವೇಶ್ ಭಂಡಾರಿ ಮತ್ತು ಅವರ ಪತ್ನಿ ತಮ್ಮ ಎಲ್ಲಾ ಸಂಪತ್ತನ್ನು ದಾನ ಮಾಡಿದರು ಮತ್ತು ಈ ತಿಂಗಳ ಕೊನೆಯಲ್ಲಿ ನಡೆಯುವ ಸಮಾರಂಭದಲ್ಲಿ ಅಧಿಕೃತವಾಗಿ ಸನ್ಯಾಸತ್ವ ಸ್ವೀಕರಿಸಲಿದ್ದಾರೆ.

2022ರಲ್ಲಿ ಸನ್ಯಾಸತ್ವ ಸ್ವೀಕರಿಸಿದ ತನ್ನ 19 ವರ್ಷದ ಮಗಳು ಮತ್ತು 16 ವರ್ಷದ ಮಗನಂತೆ ಈಗ ಪೋಷಕರು ಕೂಡ ಸನ್ಯಾಸತ್ವ ಸ್ವೀಕರಿಸಲಿದ್ದಾರೆ. ಕಟ್ಟಡ ನಿರ್ಮಾಣ ಉದ್ಯಮದಲ್ಲಿದ್ದ ಹಿಮ್ಮತ್ನಗರದ ಉದ್ಯಮಿ ಇದಕ್ಕಾಗಿ ಕೋಟಿ ಕೋಟಿ ಸಂಪತ್ತನ್ನು ದಾನ ಮಾಡಿದ್ದಾರೆ.
ಎಲ್ಲಾ ಸಂಬಂಧಗಳನ್ನು ಕಡಿದುಕೊಂಡು ಸನ್ಯಾಸತ್ವ
ಏಪ್ರಿಲ್ 22 ರಂದು ಸನ್ಯಾಸತ್ವ ಪ್ರತಿಜ್ಞೆ ತೆಗೆದುಕೊಂಡ ನಂತರ, ದಂಪತಿಗಳು ಎಲ್ಲಾ ಕುಟುಂಬ ಸಂಬಂಧಗಳನ್ನು ಕಡಿದುಕೊಳ್ಳಬೇಕಾಗುತ್ತದೆ ಮತ್ತು ಯಾವುದೇ 'ಭೌತಿಕ ವಸ್ತುಗಳನ್ನು' ಜೊತೆಯಲ್ಲಿ ಇಟ್ಟುಕೊಳ್ಳಲು ಅನುಮತಿ ಇರುವುದಿಲ್ಲ. ಅವರು ಭಾರತದಾದ್ಯಂತ ಬರಿಗಾಲಿನಲ್ಲಿ ನಡೆಯುತ್ತಾರೆ ಮತ್ತು ಭಿಕ್ಷೆಯಿಂದ ಮಾತ್ರ ಮುಂದಿನ ಬದುಕು ಕಳೆಯುತ್ತಾರೆ.
ಸನ್ಯಾಸಿಗಳಾದ ಬಳಿಕ ಕೇವಲ ಎರಡು ಬಿಳಿ ವಸ್ತ್ರಗಳನ್ನು ಹೊಂದಲು ಅನುಮತಿಸಲಾಗುವುದು, ಭಿಕ್ಷೆಗಾಗಿ ಒಂದು ಬಟ್ಟಲು ಮತ್ತು "ರಾಜೋಹರಣ", (ಬಿಳಿ ಪೊರಕೆ ಜೈನ ಸನ್ಯಾಸಿಗಳು ಅವರು ಕುಳಿತುಕೊಳ್ಳುವ ಮೊದಲು ಒಂದು ಪ್ರದೇಶದಿಂದ ಕೀಟಗಳನ್ನು ದೂರ ತಳ್ಳಲು ಬಳಸುತ್ತಾರೆ) ಮಾತ್ರ ಇರುತ್ತದೆ.
ನೂರಾರು ಕೋಟಿ ಸಂಪತ್ತು ಹೊಂದಿದ ಕುಟುಂಬವೊಂದು ಹೀಗೆ ಎಲ್ಲವನ್ನೂ ದಾನ ಮಾಡಿ ಸನ್ಯಾಸತ್ವ ಸ್ವೀಕಾರ ಮಾಡಿರುವುದು ದೇಶಾದ್ಯಂತ ಜನರ ಗಮನ ಸೆಳೆದಿದೆ.
ಭಂಡಾರಿ ದಂಪತಿಗಳು ಇತರ 35 ಮಂದಿಯೊಂದಿಗೆ ನಾಲ್ಕು ಕಿಲೋಮೀಟರ್ಗಳವರೆಗೆ ಮೆರವಣಿಗೆ ನಡೆಸಿದರು, ತಮ್ಮ ಮೊಬೈಲ್ ಫೋನ್ಗಳು ಮತ್ತು ಹವಾನಿಯಂತ್ರಣಗಳು ಸೇರಿದಂತೆ ಎಲ್ಲಾ ಆಸ್ತಿಯನ್ನು ದಾನ ಮಾಡಿದರು.
-
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications