Gujarat Election Result 2022 : ನಮ್ಮದೀಗ ರಾಷ್ಟ್ರೀಯ ಪಕ್ಷ ಎಂದ ಅರವಿಂದ್ ಕೇಜ್ರಿವಾಲ್
ನವದೆಹಲಿ, ಡಿಸೆಂಬರ್ 8: ಗುಜರಾತ್ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಈಗಾಗಲೇ ಎಲ್ಲರ ನಿರೀಕ್ಷೆಗಳನ್ನೂ ಮೀರಿ ಗೆಲುವು ಸಾಧಿಸಿದೆ. 156 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ 7ನೇ ಬಾರಿಗೆ ಸರ್ಕಾರ ರಚನೆ ಮಾಡಲಿದೆ.
ಮೊದಲಬಾರಿಗೆ ಗುಜರಾತ್ನಲ್ಲಿ ಸ್ಪರ್ಧೆ ಮಾಡಿದ್ದ ಆಮ್ ಆದ್ಮಿ ಪಕ್ಷ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಒಟ್ಟಾರೆ ಚಲಾವಣೆಯಾದ ಮತಗಳಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಿದ್ದ ಮತಗಳ ಪಾಲು ಶೇಕಡಾ 13ರಷ್ಟಿದೆ. ಅಂದರೆ ಈ ಮಾನದಂಡ ಆಮ್ ಆದ್ಮಿ ಪಕ್ಷವನ್ನು ರಾಷ್ಟ್ರೀಯ ಪಕ್ಷವನ್ನಾಗಿ ಗುರುತಿಸಲು ಸಹಕಾರಿಯಾಗಿದೆ. ಭಾರತೀಯ ಚುನಾವಣಾ ಆಯೋಗ (ಇಸಿಐ) ಇದನ್ನು ಅಧಿಕೃತವಾಗಿ ಘೋಷಿಸಲಿದೆ.
ಅದಕ್ಕೂ ಮುನ್ನವೇ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷವನ್ನು ರಾಷ್ಟ್ರೀಯ ಪಕ್ಷವನ್ನಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

"ಆಮ್ ಆದ್ಮಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಮತ್ತು ಎಲ್ಲಾ ದೇಶವಾಸಿಗಳಿಗೆ ರಾಷ್ಟ್ರೀಯ ಪಕ್ಷವಾಗಲು ಸಹಕಾರ ನೀಡಿದ್ದಕ್ಕೆ ಅಭಿನಂದನೆಗಳು" ಎಂದು ಹೇಳಿದ್ದಾರೆ.
राष्ट्रीय पार्टी बनने पर आम आदमी पार्टी के सभी कार्यकर्ताओं और सभी देशवासियों को बधाई। pic.twitter.com/sba9Q1sz1f
— Arvind Kejriwal (@ArvindKejriwal) December 8, 2022
ಲೋಕಸಭಾ ಚುನಾವಣೆಗೆ ಮುನ್ನ ಹಿನ್ನಡೆ
2017 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಪಡೆದುಕೊಂಡಿದ್ದ ಕಾಂಗ್ರೆಸ್ ಈ ಬಾರಿ ಧೂಳಿಪಟವಾಗಿದೆ. ಅದು ಕೇವಲ 17 ಸ್ಥಾನಗಳಲ್ಲಿ ಮಾತ್ರ ಜಯ ಗಳಿಸಿದೆ. ಒಂದು ವೇಳೆ ಆಪ್ ಈ ಬಾರಿ ಗುಜರಾತ್ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೆ, ಅರವಿಂದ್ ಕೇಜ್ರಿವಾಲ್ ಪ್ರಧಾನಿ ಮೋದಿಗೆ 2024 ರ ಲೋಕಸಭೆ ಚುನಾವಣೆಯಲ್ಲಿ ಸವಾಲು ಹಾಕುವ ಅವಕಾಶ ಇತ್ತು. ಆದರೆ, ಗುಜರಾತ್ ಸೋಲು ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾಗಿದೆ.
ಕಾಂಗ್ರೆಸ್ ಮತ್ತು ಬಿಜೆಪಿ ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳಾಗಿರುವ ಗುಜರಾತ್ನಲ್ಲಿ ಮೊದಲ ಬಾರಿಗೆ ತ್ರಿಕೋನ ಹೋರಾಟವನ್ನು ನೀಡಲು ಎಎಪಿ ಭಾರಿ ಪ್ರಚಾರವನ್ನು ನಡೆಸಿತ್ತು. ದೆಹಲಿ ಮುನ್ಸಿಪಲ್ ಚುನಾವಣೆಯ ಗೆಲುವಿನಿಂದ ಉತ್ತೇಜಿತವಾಗಿರುವ ಎಎಪಿ ತನ್ನ ಕಲ್ಯಾಣ ನೀತಿಯನ್ನು ಗುಜರಾತ್ನಲ್ಲಿ ಜನರು ಒಪ್ಪಿಕೊಳ್ಳುತ್ತಾರೆ ಎಂದು ಭಾವಿಸಿತ್ತು. ಆದರೆ, ಗುಜರಾತ್ ಜನತೆ ಆಮ್ ಆದ್ಮಿ ಪಕ್ಷವನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications