Gujarat Election Results 2022: ರಾಜ್ಯ ಬಿಜೆಪಿ ಕಚೇರಿಗೆ ತೆರಳಿದ ಭೂಪೇಂದ್ರ ಪಟೇಲ್
ಅಹಮದಾಬಾದ್, ಡಿಸೆಂಬರ್ 08: ಗುಜರಾತ್ ವಿಧಾನಸಭೆ ಚುನಾವಣೆಯ ಮತ ಎಣಿಕೆ(Gujarat Election Results 2022) ಪ್ರಕ್ರಿಯೆ ಇಂದು ನಡೆಯುತ್ತಿದೆ. 2017ರ ಚುನಾವಣೆಯಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್ ತೀವ್ರ ನಷ್ಟವನ್ನು ಅನುಭವಿಸಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಒಂದಂಕಿಯ ಸ್ಥಾನಗಳನ್ನು ಗಳಿಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿದೆ. ಒಟ್ಟಾರೆಯಾಗಿ, ಗುಜರಾತ್ ಚುನಾವಣೆ ಫಲಿತಾಂಶ ಬಿಜೆಪಿಯ ನಾಗಲೋಟವನ್ನು ಮುಂದುವರಿಸುವ ಎಲ್ಲ ಲಕ್ಷಣಗಳನ್ನೂ ಹೊಂದಿದೆ.
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಘಟ್ಲೋಡಿಯಾದಿಂದ 50000 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ನ ಡಾ.ಅಮೀ ಯಾಜ್ನಿಕ್ ಅವರನ್ನು ಸೋಲಿಸಿದ್ದಾರೆ
Recommended Video
ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿಯ ಪ್ರಕಾರ, ಪಟೇಲ್ ಅವರು ಶೇಕಡಾ 80.86 ರಷ್ಟು ಮತಗಳನ್ನು ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಮಿಬೆನ್ ಯಾಗ್ನಿಕ್ ಅವರು ಪಡೆದ ಶೇಕಡಾ 9.81 ರಷ್ಟು ಮತಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮತ್ತೊಂದೆಡೆ, ಎಎಪಿ ಅಭ್ಯರ್ಥಿ ವಿಜಯ್ ಪಟೇಲ್ ಶೇ 6.73 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ಗೆದ್ದು ಬೀಗಿರುವ ಭೂಪೇಂದ್ರ ಪಟೇಲ್ ರಾಜ್ಯ ಬಿಜೆಪಿ ಕಚೇರಿಯತ್ತ ತೆರಳಿದ್ದಾರೆ. ಅಲ್ಲಿ ನೆರೆದಿರುವ ಕಾರ್ಯಕರ್ತರ ಸಂಭ್ರಮಾಚಣೆಯಲ್ಲಿ ಪಾಲ್ಗೊಂಡಿದ್ದಾರೆ
ಗಾಂಧಿನಗರ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಪಾಟಿದಾರ್ ಪ್ರಾಬಲ್ಯದ ಘಟ್ಲೋಡಿಯಾ ಗುಜರಾತ್ಗೆ ಇಬ್ಬರು ಮುಖ್ಯಮಂತ್ರಿಗಳನ್ನು ನೀಡಿದೆ. ಭೂಪೇಂದ್ರ ಪಟೇಲ್ ಮತ್ತು ಆನಂದಿಬೆನ್ ಪಟೇಲ್ ಅವರು ಗುಜರಾತ್ನ ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದಾರೆ. ಇದು ಬಿಜೆಪಿಯ ಭದ್ರಕೋಟೆಯಾಗಿದೆ.

ಭೂಪೇಂದ್ರ ಪಟೇಲ್ ಅವರು, 2017 ರಲ್ಲಿ 1.17 ಲಕ್ಷ ಮತಗಳ ಭಾರೀ ಅಂತರದಿಂದ ಇಲ್ಲಿ ಗೆದ್ದಿದ್ದರು. ಈ ಚುನಾವಣೆಯ ನಂತರ ಪಟೇಲ್ ಅವರಿಗೆ ಮತ್ತೆ ಸಿಎಂ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ.
ಸುಮಾರು 3.70 ಲಕ್ಷ ಮತದಾರರನ್ನು ಘಟ್ಲೋಡಿಯಾ ಕ್ಷೇತ್ರ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್ನಲ್ಲಿ ಬಿಜೆಪಿ ಗೆಲ್ಲುವುದು ಬಹುಮುಖ್ಯವಾಗಿತ್ತು. ಚುನಾವಣೋತ್ತರ ಸಮೀಕ್ಷೆಗಳೂ ಸಹ ಬಿಜೆಪಿ ಗೆಲುವಿನ ಬಗ್ಗೆ ಹೇಳಿದ್ದವು. ಗುಜರಾತಿನ ಗೆಲುವು 2024 ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಬಿಜೆಪಿ ನಾಯಕರು ಪ್ರತಿಪಾದಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications