Gujarat Election Results 2022: ಪತ್ನಿಯ ರೋಡ್ ಶೋನಲ್ಲಿ ಭಾಗಿಯಾದ ಕ್ರಿಕೆಟಿಗ ರವೀಂದ್ರ ಜಡೇಜಾ
ಅಹಮದಾಬಾದ್, ಡಿಸೆಂಬರ್ 8: ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಹುತೇಕ ಮುಕ್ತಾಯ ಹಂತಕ್ಕೆ ಬಂದು ತಲುಪಿದೆ. ಬಿಜೆಪಿ ದಾಖಲೆಯ ಪ್ರಮಾಣದ ಬಹುಮತ ಸಾಧಿಸುವಲ್ಲಿ ಸಫಲವಾಗಿದೆ. ಕಾಂಗ್ರೆಸ್ ದೊಡ್ಡ ನಷ್ಟವನ್ನು ಅನುಭವಿಸಿದೆ. ಎಎಪಿಗೆ ಒಂದಂಕಿಯ ಸೀಟುಗಳು ದೊರೆಯುವುದು ಖಚಿತವಾಗಿದೆ. ಆ ಮೂಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಗುಜರಾತ್ನಲ್ಲಿ ನೆಲೆಕಂಡುಕೊಳ್ಳಲಿದೆ.
ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಜಾಮ್ನಗರ ಉತ್ತರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದರು.
ತಮ್ಮ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಕರ್ಸನ್ ಕರ್ಮುರ್ ಅವರನ್ನು 40,000 ಕ್ಕೂ ಹೆಚ್ಚು ಮತಗಳ ಅಂತರದಿಂದ ರಿವಾಬಾ ಸೋಲಿಸಿದ್ದಾರೆ. ಕಾಂಗ್ರೆಸ್ನ ಭೀಪೇಂದ್ರ ಸಿನ್ಹ ಜಡೇಜಾ ಮೂರನೇ ಸ್ಥಾನದಲ್ಲಿದ್ದಾರೆ.

ಬಿಜೆಪಿ ಬಿಡುಗಡೆ ಮಾಡಿದ್ದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ರಿವಾಬಾ ಜಡೇಜಾ ಹೆಸರಿತ್ತು. ಹಾಲಿ ಶಾಸಕ ಧರ್ಮೇಂದ್ರ ಜಡೇಜಾ ಅವರನ್ನು ಪಕ್ಷವು ಕೈಬಿಟ್ಟ ನಂತರ ರಿವಾಬಾ ಅವರಿಗೆ ಟಿಕೆಟ್ ನೀಡಲಾಯಿತು.
ಧರ್ಮೇಂದ್ರ ಜಡೇಜಾ ಅವರು 2012 ರಲ್ಲಿ ಕಾಂಗ್ರೆಸ್ ಟಿಕೆಟ್ನಲ್ಲಿ ಗೆದ್ದು ನಂತರ ಬಿಜೆಪಿ ಸೇರಿದ್ದರು. ಅವರು 2017 ರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಜಯಗಳಿಸಿದ್ದರು.
40,000 ಮತಗಳ ದೊಡ್ಡ ಪ್ರಮಾಣದ ಅಂತರದಲ್ಲಿ ಜಯಗಳಿಸಿರುವ ರಿವಾಬಾ ಅವರು ಜಾಮ್ನಗರದಲ್ಲಿ ರೋಡ್ ಶೋ ನಡೆಸಿದ್ದಾರೆ. ರಿವಾಬಾ ಅವರ ಗೆಲುವನ್ನು ಸಂಭ್ರಮಿಸಲು ಸಾವಿರಾರು ಬೆಂಬಲಿಗರು ರಸ್ತೆಯ ಇಕ್ಕೆಲಗಳಲ್ಲಿ ಕಾದು ನಿಂತಿದ್ದರು. ರಿವಾಬಾ ಅವರಿಗೆ ಶುಭಾಶಯ ಕೋರಿದರು.

ರಿವಾಬಾ ರೋಡ್ ಶೋನಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜ ಸಹ ಭಾಗಿಯಾಗಿದ್ದರು. ಅವರು ತೆರೆದ ವಾಹನದಲ್ಲಿ ಪತ್ನಿಯ ಹಿಂದೆ ನಿಂತು ಜನರತ್ತ ಕೈಬೀಸಿದರು. ಕೆಲ ಕ್ರಿಕೆಟ್ ಅಭಿಮಾನಿಗಳು ರಿವಾಬಾ ಹಾಗೂ ರವೀಂದ್ರ ಜಡೇಜಾ ಅವರ ಫೋಟೊಗಳನ್ನು ಹಿಡಿದುಕೊಂಡು ಜೈಕಾರ ಕೂಗಿದರು. ಹಿಂದೆ ನಿಂತಿದ್ದ ಜಡೇಜಾ ಅವರನ್ನು ಮುಂದೆ ಬಂದು ನಿಲ್ಲುವಂತೆ ರಿವಾಬಾ ಮನವಿ ಮಾಡಿದರು. ಈ ಎಲ್ಲ ಕ್ಷಣಗಳು ಕ್ಯಾಮಾರಾದಲ್ಲಿ ಸೆರೆಯಾಗಿವೆ.
ರಿವಾಬಾ ಜಡೇಜಾ ಈ ಹಿಂದೆ ಕರ್ನಿ ಸೇನಾದ ಸಂಘಟಕಿಯಾಗಿ ಕಾರ್ಯಾನಿರ್ವಹಿಸಿದ್ದಾರೆ. ವಿಪರ್ಯಾಸವೆಂದರೆ, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ತಂದೆ ಹಾಗೂ ಸಹೋದರಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications