Gujarat Election Results 2022: ಪತ್ನಿಯ ರೋಡ್ ಶೋನಲ್ಲಿ ಭಾಗಿಯಾದ ಕ್ರಿಕೆಟಿಗ ರವೀಂದ್ರ ಜಡೇಜಾ
ಅಹಮದಾಬಾದ್, ಡಿಸೆಂಬರ್ 8: ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಹುತೇಕ ಮುಕ್ತಾಯ ಹಂತಕ್ಕೆ ಬಂದು ತಲುಪಿದೆ. ಬಿಜೆಪಿ ದಾಖಲೆಯ ಪ್ರಮಾಣದ ಬಹುಮತ ಸಾಧಿಸುವಲ್ಲಿ ಸಫಲವಾಗಿದೆ. ಕಾಂಗ್ರೆಸ್ ದೊಡ್ಡ ನಷ್ಟವನ್ನು ಅನುಭವಿಸಿದೆ. ಎಎಪಿಗೆ ಒಂದಂಕಿಯ ಸೀಟುಗಳು ದೊರೆಯುವುದು ಖಚಿತವಾಗಿದೆ. ಆ ಮೂಲಕ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಗುಜರಾತ್ನಲ್ಲಿ ನೆಲೆಕಂಡುಕೊಳ್ಳಲಿದೆ.
ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಜಾಮ್ನಗರ ಉತ್ತರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದರು.
ತಮ್ಮ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಕರ್ಸನ್ ಕರ್ಮುರ್ ಅವರನ್ನು 40,000 ಕ್ಕೂ ಹೆಚ್ಚು ಮತಗಳ ಅಂತರದಿಂದ ರಿವಾಬಾ ಸೋಲಿಸಿದ್ದಾರೆ. ಕಾಂಗ್ರೆಸ್ನ ಭೀಪೇಂದ್ರ ಸಿನ್ಹ ಜಡೇಜಾ ಮೂರನೇ ಸ್ಥಾನದಲ್ಲಿದ್ದಾರೆ.

ಬಿಜೆಪಿ ಬಿಡುಗಡೆ ಮಾಡಿದ್ದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ರಿವಾಬಾ ಜಡೇಜಾ ಹೆಸರಿತ್ತು. ಹಾಲಿ ಶಾಸಕ ಧರ್ಮೇಂದ್ರ ಜಡೇಜಾ ಅವರನ್ನು ಪಕ್ಷವು ಕೈಬಿಟ್ಟ ನಂತರ ರಿವಾಬಾ ಅವರಿಗೆ ಟಿಕೆಟ್ ನೀಡಲಾಯಿತು.
ಧರ್ಮೇಂದ್ರ ಜಡೇಜಾ ಅವರು 2012 ರಲ್ಲಿ ಕಾಂಗ್ರೆಸ್ ಟಿಕೆಟ್ನಲ್ಲಿ ಗೆದ್ದು ನಂತರ ಬಿಜೆಪಿ ಸೇರಿದ್ದರು. ಅವರು 2017 ರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಜಯಗಳಿಸಿದ್ದರು.
40,000 ಮತಗಳ ದೊಡ್ಡ ಪ್ರಮಾಣದ ಅಂತರದಲ್ಲಿ ಜಯಗಳಿಸಿರುವ ರಿವಾಬಾ ಅವರು ಜಾಮ್ನಗರದಲ್ಲಿ ರೋಡ್ ಶೋ ನಡೆಸಿದ್ದಾರೆ. ರಿವಾಬಾ ಅವರ ಗೆಲುವನ್ನು ಸಂಭ್ರಮಿಸಲು ಸಾವಿರಾರು ಬೆಂಬಲಿಗರು ರಸ್ತೆಯ ಇಕ್ಕೆಲಗಳಲ್ಲಿ ಕಾದು ನಿಂತಿದ್ದರು. ರಿವಾಬಾ ಅವರಿಗೆ ಶುಭಾಶಯ ಕೋರಿದರು.

ರಿವಾಬಾ ರೋಡ್ ಶೋನಲ್ಲಿ ಕ್ರಿಕೆಟಿಗ ರವೀಂದ್ರ ಜಡೇಜ ಸಹ ಭಾಗಿಯಾಗಿದ್ದರು. ಅವರು ತೆರೆದ ವಾಹನದಲ್ಲಿ ಪತ್ನಿಯ ಹಿಂದೆ ನಿಂತು ಜನರತ್ತ ಕೈಬೀಸಿದರು. ಕೆಲ ಕ್ರಿಕೆಟ್ ಅಭಿಮಾನಿಗಳು ರಿವಾಬಾ ಹಾಗೂ ರವೀಂದ್ರ ಜಡೇಜಾ ಅವರ ಫೋಟೊಗಳನ್ನು ಹಿಡಿದುಕೊಂಡು ಜೈಕಾರ ಕೂಗಿದರು. ಹಿಂದೆ ನಿಂತಿದ್ದ ಜಡೇಜಾ ಅವರನ್ನು ಮುಂದೆ ಬಂದು ನಿಲ್ಲುವಂತೆ ರಿವಾಬಾ ಮನವಿ ಮಾಡಿದರು. ಈ ಎಲ್ಲ ಕ್ಷಣಗಳು ಕ್ಯಾಮಾರಾದಲ್ಲಿ ಸೆರೆಯಾಗಿವೆ.
ರಿವಾಬಾ ಜಡೇಜಾ ಈ ಹಿಂದೆ ಕರ್ನಿ ಸೇನಾದ ಸಂಘಟಕಿಯಾಗಿ ಕಾರ್ಯಾನಿರ್ವಹಿಸಿದ್ದಾರೆ. ವಿಪರ್ಯಾಸವೆಂದರೆ, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ತಂದೆ ಹಾಗೂ ಸಹೋದರಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications