Gujarat Election Results 2022: ಗುಜರಾತ್ನಲ್ಲಿ ಮೊದಲ ಬಾರಿಗೆ ಖಾತೆ ತೆರೆದ ಸಮಾಜವಾದಿ ಪಕ್ಷ
ಅಹಮದಾಬಾದ್, ಡಿಸೆಂಬರ್ 08: ಗುಜರಾತ್ ವಿಧಾನಸಭೆ ಚುನಾವಣೆಯ ಮತ ಎಣಿಕೆ(Gujarat Election Results 2022) ಪ್ರಕ್ರಿಯೆ ನಡೆಯುತ್ತಿದೆ. ಹೊರಬರುತ್ತಿರುವ ಫಲಿತಾಂಶಗಳ ಪ್ರಕಾರ, ಗುಜರಾತ್ನಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರ ಬರಲಿದೆ. ಭಾರೀ ಬಹುಮತ ಗಳಿಸುವ ಸಾಧ್ಯತೆ ನಿಚ್ಚಳವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸುವುದು ನಿಚ್ಚಳವಾಗಿದೆ. ಎಎಪಿ ತನ್ನ ನೆಲೆಯಲ್ಲಿ ಕಂಡುಕೊಳ್ಳುವತ್ತ ಮುನ್ನುಗ್ಗುತ್ತಿದೆ. ಅಚ್ಚರಿಯ ಬೆಳವಣಿಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು ಮೊದಲ ಬಾರಿಗೆ ಗುಜರಾತ್ನಲ್ಲಿ ಖಾತೆ ತೆರೆಯಲಿದೆ.
ಸೌರಾಷ್ಟ್ರದ ಪೋರಬಂದರ್ ಜಿಲ್ಲೆಯ ಕುಟಿಯಾನಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಕಂದಲ್ ಜಡೇಜಾ ಭಾರೀ ಅಂತರದಿಂದ ಮುನ್ನಡೆ ಸಾಧಿಸಿ, ಗುಜರಾತ್ ವಿಧಾನಸಭೆ ಪ್ರವೇಶಿಸಲು ಸಜ್ಜಾಗಿದೆ.
Recommended Video
ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಬೆಳಿಗ್ಗೆ 12 ಗಂಟೆಗೆ ಎಸ್ಪಿ ಅಭ್ಯರ್ಥಿ ಜಡೇಜಾ ಅವರು ಭಾರತೀಯ ಜನತಾ ಪಕ್ಷದ ಧೆಲಿಬೆನ್ ಒಡೆದಾರರಿಗಿಂತ ಸುಮಾರು 6,500 ಮತಗಳ ಮುನ್ನಡೆ ಸಾಧಿಸಿ, ಗೆಲುವಿಗೆ ಹತ್ತಿರವಾಗಿದ್ದಾರೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಿಂದ (ಎನ್ಸಿಪಿ) ಎರಡು ಬಾರಿ ಶಾಸಕರಾಗಿದ್ದ ಜಡೇಜಾ ಅವರಿಗೆ ಟಿಕೆಟ್ ನಿರಾಕರಿಸಲಾಯಿತು. ನಂತರ ಅವರು ಶರದ್ ಪವಾರ್ ನೇತೃತ್ವದ ಪಕ್ಷವನ್ನು ತೊರೆದು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷಕ್ಕೆ ಸೇರಿದ್ದರು.
ಕುಟಿಯಾನಾದಿಂದ ಎನ್ಸಿಪಿ ಅಭ್ಯರ್ಥಿಯಾಗಿ, ಜಡೇಜಾ 2012 ಮತ್ತು 2017 ರಲ್ಲಿ ಕ್ರಮವಾಗಿ 18,474 ಮತ್ತು 23,709 ರಲ್ಲಿ ಭಾರೀ ಅಂತರದಿಂದ ಗೆದ್ದಿದ್ದರು. 2012ರಲ್ಲಿ ಕುಟಿಯಾನಾದಲ್ಲಿ ಶೇ.64.36 ಮತ್ತು 2017ರಲ್ಲಿ ಶೇ.59.16ರಷ್ಟು ಮತದಾನವಾಗಿದ್ದು, ಈ ಬಾರಿ ಶೇ.56.58ರಷ್ಟು ಮತದಾನವಾಗಿದೆ

2012 ಮತ್ತು 2017 ರ ಚುನಾವಣೆಗಳಲ್ಲಿ ಕಾಂಗ್ರೆಸ್ ಜೊತೆ ಎನ್ಸಿಪಿ ಮೈತ್ರಿ ಮಾಡಿಕೊಂಡಿತ್ತು. ಆದರೆ, ಈ ಬಾರಿ ಎನ್ಸಿಪಿ-ಕಾಂಗ್ರೆಸ್ ಚುನಾವಣಾ ಮೈತ್ರಿಯು ಕುಟಿಯಾನ ಕ್ಷೇತ್ರವನ್ನು ಒಳಗೊಂಡಿರಲಿಲ್ಲ. ಬದಲಿಗೆ ಎರಡು ಪಕ್ಷಗಳು ನರೋಡಾ, ಉಮ್ರೇತ್ ಮತ್ತು ದೇವಗಧಬರಿಯಾ ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಂಡಿವೆ.
ಗುಜರಾತ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಖಾತೆ ತೆರೆಯಲು ಸಮಾಜವಾದಿ ಪಕ್ಷ ಸಿದ್ಧವಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications