'ಮತದಾನ ಕಡ್ಡಾಯ, ತಪ್ಪಿದ್ದರೆ ಶಿಕ್ಷೆ ಖಚಿತ'
ಗಾಂಧಿನಗರ, ನ.10: ದೇಶದಲ್ಲೇ ಇದೇ ಮೊದಲ ಬಾರಿಗೆ ಗುಜರಾತ್ ಸರ್ಕಾರ ಮತದಾನ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಮೋದಿ ಅವರು ಸಿಎಂ ಆಗಿದ್ದ ಕಾಲದಿಂದಲೂ ನೆನಗುದಿಗೆ ಬಿದ್ದಿದ್ದ ಮಹತ್ವದ ಕಾಯಿದೆಗೆ ಈಗ ಕಾನೂನು ರೂಪ ಪಡೆದಿದೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಹೊಸ ಕಾನೂನು ಜಾರಿಗೆ ಬರಲಿದ್ದು, ತಪ್ಪಿಸಿಕೊಂಡವರಿಗೆ ಶಿಕ್ಷೆ ಖಚಿತ.
ರಾಜ್ಯಪಾಲ ಒ.ಪಿ.ಕೊಯ್ಲಿ ಅವರು ರಾಜ್ಯ ಸರ್ಕಾರದ ಕಡ್ಡಾಯ ಮತದಾನ ಕಾಯ್ದೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರನೂ ಮತ ಚಲಾಯಿಸಲೇಬೇಕು. ಇಲ್ಲದಿದ್ದರೆ ಶಿಕ್ಷೆ ಖಚಿತ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇನ್ನು ಮುಂದೆ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ನೀಡಬೇಕು. ಜತೆಗೆ ಪ್ರತಿಯೊಬ್ಬ ಮತದಾರನು ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಚಾಚೂ ತಪ್ಪದೆ ಕಡ್ಡಾಯವಾಗಿ ಚಲಾಯಿಸಲೇಬೇಕು ಎಂಬ ನಿಯಮಗಳಿವೆ.

ಗುಜರಾತ್ ವಿಧಾನಸಭಾ ಕಾರ್ಯದರ್ಶಿ ಡಿಎಂ ಪಾಟೀಲ್ ಅವರು ಈ ಬಗ್ಗೆ ವಿವರಿಸುತ್ತಾ, 2015ರಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಹಾಗೂ ಮುನ್ಸಿಪಾಲಿಟಿ ಚುನಾವಣೆಯಲ್ಲಿ ಈ ಕಾನೂನು ಜಾರಿಗೆ ಬರಲಿದೆ. ಈ ಮೂಲಕ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕಡ್ಡಾಯ ಮತದಾನದ ಹಕ್ಕು ಜಾರಿ ಮಾಡಿದ ಏಕೈಕ ರಾಜ್ಯ ಗುಜರಾತ್ ಆಗಲಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಈ ಕಾಯ್ದೆಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಒಪ್ಪಿಗೆ ಪಡೆದಿದ್ದರು ಎಂದಿದ್ದಾರೆ.
ಬಳಿಕ ರಾಜ್ಯಪಾಲರ ಸಹಿಗೆ ಕಳುಹಿಸಿಕೊಟ್ಟಿದ್ದರು. ಅಂದಿನ ರಾಜ್ಯಪಾಲರಾದ ಡಾ.ಕಮಲಾ ಬೇನಿವಾಲ್ ಅವರು ಮಸೂದೆಗೆ ಸಹಿ ಹಾಕದೆ ವಾಪಸ್ ಹಿಂತಿರುಗಿಸಿದ್ದರು. ನರೇಂದ್ರ ಮೋದಿ ಮತ್ತು ಕಮಲಾ ಬೇನಿವಾಲ್ ನಡುವಿನ ಮುಸುಕಿನ ಗುದ್ದಾಟ ಈ ಮಸೂದೆ ನೆನೆಗುದಿಗೆ ಬೀಳಲು ಕಾರಣವಾಗಿತ್ತು.
ಈ ಕಾಯಿದೆಗೆ ಅಂಕಿತ ಹಾಕಿದರೆ ಸಂವಿಧಾನದ 21ನೇ ಪರಿಚ್ಛೇದದ ಅನ್ವಯ ನಾಗರಿಕರಿಗೆ ಸಿಗುವ ಸ್ವಾತಂತ್ರ್ಯವನ್ನು ಕಿತ್ತುಕೊಂಡಂತೆ ಆಗುತ್ತದೆ. ಸಂವಿಧಾನ ಉಲ್ಲಂಘನೆಯಾಗುತ್ತದೆ ಎಂದು ಕಮಲಾ ಬೇನಿವಾಲ್ ಹೇಳಿದ್ದರು. ಅದರೆ, ಈಗ ರಾಜ್ಯಪಾಲ ಒ.ಪಿ.ಕೊಯ್ಲಿ ಅವರು ಮಸೂದೆಗೆ ಸಹಿ ಹಾಕಿ ಆದೇಶ ಹೊರಡಿಸಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಡಿ.ಎಂ.ಪಾಟೀಲ್ ತಿಳಿಸಿದ್ದಾರೆ.
ನೂತನ ನಿಯಮದ ಪ್ರಕಾರ ಮತದಾರನು ಕಡ್ಡಾಯವಾಗಿ ಮತ ಹಾಕದಿದ್ದರೆ ಆತನಿಗೆ ಕನಿಷ್ಠ ಪ್ರಮಾಣದ ಶಿಕ್ಷೆ ಇಲ್ಲವೆ ಸರ್ಕಾರದ ಸವಲತ್ತುಗಳನ್ನು ಕಡಿತಗೊಳಿಸುವ ಅಂಶ ಕಾಯ್ದೆಯಲ್ಲಿದೆ. 2015ರ ಅಕ್ಟೋಬರ್ ನಲ್ಲಿ ಗುಜರಾತಿನ 31 ಜಿಲ್ಲಾ ಪಂಚಾಯಿತಿ, 231 ತಾಲೂಕು ಪಂಚಾಯಿತಿ ಹಾಗೂ 53 ನಗರಪಾಲಿಕೆಗಳಿಗೆ ಚುನಾವಣೆ ನಡೆಯಲಿದೆ.
-
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
ಹೊಸ ಮನೆಯಲ್ಲಿ ರಶ್ಮಿಕಾ-ವಿಜಯ್ ಸತ್ಯನಾರಾಯಣ ಪೂಜೆ: ಹುಟ್ಟೂರಿಗೆ ಬಂದ ನವದಂಪತಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ












Click it and Unblock the Notifications