ಮೋರ್ಬಿ ಸೇತುವೆ ದುರಂತ: ಮೃತರ ಕುಟುಂಬಕ್ಕೆ ಹೆಚ್ಚುವರಿಯಾಗಿ 10 ಲಕ್ಷ ಪರಿಹಾರ
ಮೋರ್ಬಿ, ಡಿಸೆಂಬರ್ 12: ಕಳೆದ ಅಕ್ಟೋಬರ್ನಲ್ಲಿ ಮೊರ್ಬಿ ಸೇತುವೆ ಕುಸಿದ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರವನ್ನು ನೀಡಲಾಗುವುದು ಎಂದು ರಾಜ್ಯ ಸರ್ಕಾರ ಸೋಮವಾರ ಹೈಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಿಳಿಸಿದೆ.
ರಾಜ್ಯ ಸರ್ಕಾರವು ತನ್ನ ಅಫಿಡವಿಟ್ನಲ್ಲಿ ಮೃತರ ಕುಟುಂಬಕ್ಕೆ ಒಟ್ಟು 10 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಮತ್ತು ಸೇತುವೆ ಕುಸಿತದ ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಹೇಳಿದೆ.
ಈ ಸಂಬಂಧ ಮೊರ್ಬಿ ನಗರ ಪಾಲಿಕೆ ಮತ್ತು ರಾಜ್ಯ ಸರ್ಕಾರವು ಹೈಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ. ಗುಜರಾತ್ನ ಮೊರ್ಬಿಯ ಮಚ್ಚು ನದಿಗೆ ಶತಮಾನದಷ್ಟು ಹಳೆಯದಾದ ತೂಗುಸೇತುವೆ ಬಿದ್ದ ಪರಿಣಾಮ ಒಟ್ಟು 134 ಮಂದಿ ಪ್ರಾಣ ಕಳೆದುಕೊಂಡಿದ್ದರು.

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಕಳೆದ ನವೆಂಬರ್ 7 ರಂದು ಗುಜರಾತ್ ಹೈಕೋರ್ಟ್ ಮೊರ್ಬಿ ಅಪಘಾತವನ್ನು ಸ್ವಯಂಪ್ರೇರಿತವಾಗಿ ತೆಗೆದುಕೊಂಡಿತು. ಗೃಹ ಇಲಾಖೆ ಸೇರಿದಂತೆ ಅಧಿಕಾರಿಗಳಿಗೆ ಒಂದು ವಾರದೊಳಗೆ ವರದಿ ನೀಡುವಂತೆ ನೋಟಿಸ್ ಜಾರಿ ಮಾಡಿತು. "ನಾವು ರಾಜ್ಯ ಸರ್ಕಾರದಿಂದ ಕಠಿಣ ಕ್ರಮವನ್ನು ನಿರೀಕ್ಷಿಸುತ್ತೇವೆ" ಎಂದು ಹೈಕೋರ್ಟ್ ಆದೇಶಿಸಿತ್ತು. ಮೊರ್ಬಿ ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಗುಜರಾತ್ ಹೈಕೋರ್ಟ್ ಈ ವಿಷಯವನ್ನು ಸ್ವಯಂಪ್ರೇರಿತವಾಗಿ ತೆಗೆದುಕೊಂಡಿತು.

ಹೈಕೋರ್ಟ್ಗೆ ಸೂಚನೆ ನೀಡಿದ್ದ ಸುಪ್ರೀಂ ಕೋರ್ಟ್
ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ ಮೊರ್ಬಿ ಸೇತುವೆ ಕುಸಿದ ಘಟನೆಯು 'ಅಗಾಧ ದುರಂತ' ಎಂದು ಹೇಳಿತು, ಏಕೆಂದರೆ ಈ ಪ್ರಕರಣದಲ್ಲಿ ಈಗಾಗಲೇ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸುತ್ತಿರುವ ಗುಜರಾತ್ ಹೈಕೋರ್ಟ್ಗೆ ನಿಯತಕಾಲಿಕವಾಗಿ ವಿಚಾರಣೆಗಳನ್ನು ನಡೆಸುವಂತೆ ಸೂಚಿಸಿತು.

ಮೊರ್ಬಿ ಸೇತುವೆ ಕುಸಿತದ ಕುರಿತು ತನಿಖೆ ವೇಳೆ ತಿಳಿದಿದ್ದೇನು?
* ಈ ಸೇತುವೆಯ ನಿರ್ವಹಣೆಗೆ ಓರೆವಾ ಗ್ರೂಪ್ ನಿಗದಿಪಡಿಸಿದ 2 ಕೋಟಿ ರೂ.ಗಳಲ್ಲಿ ಕೇವಲ 12 ಲಕ್ಷ ರೂಪಾಯಿ ಅನ್ನು ಬಳಸಿಕೊಂಡಿದೆ
* ಓರೆವಾ ಗ್ರೂಪ್ ದುರಸ್ತಿ ಕಾರ್ಯವನ್ನು ಧ್ರಂಗಧ್ರ ಮೂಲದ ಸಂಸ್ಥೆ ದೇವಪ್ರಕಾಶ್ ಸೊಲ್ಯೂಷನ್ಸ್ಗೆ ಉಪ ಗುತ್ತಿಗೆ ನೀಡಿತ್ತು
* ಒರೆವಾದಂತೆ, ದೇವಪ್ರಕಾಶ್ ಸೊಲ್ಯೂಷನ್ಸ್ ಕೂಡ ಅಂತಹ ಕೆಲಸಕ್ಕೆ ಅಗತ್ಯವಾದ ತಾಂತ್ರಿಕ ಜ್ಞಾನವನ್ನು ಹೊಂದಿರುವುದಿಲ್ಲ
* ಮೊರ್ಬಿ ನಗರ ಪಾಲಿಕೆಯ ಮುಖ್ಯ ಅಧಿಕಾರಿ ಸಂದೀಪ್ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಲಾಗಿದೆ
* ರಿಪೇರಿ ಮಾಡಲಾದ ಸೇತುವೆಯನ್ನು ಒರೆವಾ ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ಭಾಯ್ ಪಟೇಲ್ ಉದ್ಘಾಟಿಸಿದ್ದಾರೆ ಎಂದು ವರದಿಯಾಗಿದೆ
* ಈ ಸೇತುವೆಯನ್ನು ಸಾರ್ವಜನಿಕರಿಗೆ ತೆರೆಯಲು ಓರೆವಾಗೆ ಅನುಮತಿ ಇಲ್ಲ ಎಂದು ಗುಜರಾತ್ ಅಧಿಕಾರಿಗಳು ಹೇಳಿದ್ದಾರೆ
* ಮೊರ್ಬಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಓರೆವಾ ಗ್ರೂಪ್ನ ಮೂಲ ಕಂಪನಿಯಾದ ಅಜಂತಾ ಮ್ಯಾನುಫ್ಯಾಕ್ಚರಿಂಗ್ ಪ್ರೈವೇಟ್ ಲಿಮಿಟೆಡ್ ನಡುವೆ 15 ವರ್ಷಗಳ ನಿರ್ವಹಣಾ ಒಪ್ಪಂದಕ್ಕೆ ಮಾರ್ಚ್ 2022 ರಲ್ಲಿ ಸಹಿ ಹಾಕಲಾಯಿತು, ಅದು 2037 ರವರೆಗೆ ಮಾನ್ಯವಾಗಿತ್ತು.

ಮೊರ್ಬಿ ಸೇತುವೆ ದುರಂತದ ಬಗ್ಗೆ ಮಾಹಿತಿ
ಕಳೆದ ಅಕ್ಟೋಬರ್ 30ರ ಭಾನುವಾರ ಮಚ್ಚು ನದಿಗೆ ವ್ಯಾಪಿಸಿರುವ ತೂಗು ಸೇತುವೆ ಕುಸಿದು ಸೇತುವೆಯ ಮೇಲಿದ್ದ ಎಲ್ಲರೂ ನೀರಿನಲ್ಲಿ ಮುಳುಗಿದ್ದು, 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಈ ಸೇತುವೆ ಮೇಲೆ ನಿಂತಿದ್ದ ಜನರು ಕ್ಷಣಮಾತ್ರದಲ್ಲಿ ಮುಳುಗಿಹೋದರು. ವರದಿಗಳ ಪ್ರಕಾರ, ವಡೋದರಾದಿಂದ 300 ಕಿಮೀ ದೂರದಲ್ಲಿರುವ 150 ವರ್ಷಗಳಷ್ಟು ಹಳೆಯದಾದ ಸೇತುವೆಯು ಕೇವಲ 125 ಜನರ ತೂಕವನ್ನು ತೆಗೆದುಕೊಳ್ಳುತ್ತದೆ, ಆದರೆ ಘಟನೆ ಸಂಭವಿಸಿದಾಗ ಸೇತುವೆಯ ಮೇಲೆ ಸುಮಾರು 400 ಜನರು ಇದ್ದರು.
ಈ ದುರಂತಂದಲ್ಲಿ ಮೃತಪಟ್ಟವರಿಗೆ ತಲಾ 4 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಪ್ರಧಾನಮಂತ್ರಿ ವಿತ್ತೀಯ ನೆರವು ಘೋಷಿಸಿದ್ದು, ಸಂತ್ರಸ್ತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಿದ್ದರು. ಸುಮಾರು 7 ತಿಂಗಳ ಹಿಂದೆ ಕಾರ್ಯಾಚರಣೆಯ ಬಳಕೆಗಾಗಿ ಸೇತುವೆಯನ್ನು ಮುಚ್ಚಲಾಗಿತ್ತು. ಓರೆವಾ ಗ್ರೂಪ್ (ಅಜಂತಾ ಮ್ಯಾನುಫ್ಯಾಕ್ಚರಿಂಗ್ ಪ್ರೈವೇಟ್ ಲಿಮಿಟೆಡ್) ಹೆಸರಿನ ಖಾಸಗಿ ಕಂಪನಿಗೆ ಈ ವರ್ಷದ ಮಾರ್ಚ್ನಲ್ಲಿ ಸೇತುವೆಯನ್ನು ನವೀಕರಿಸಲು ಮತ್ತು ನಿರ್ವಹಿಸಲು ಗುತ್ತಿಗೆ ನೀಡಲಾಯಿತು. ಜುಲ್ತಾ ಪುಲ್ ಎಂದೂ ಕರೆಯಲ್ಪಡುವ ತೂಗು ಸೇತುವೆಯನ್ನು ಈ ವರ್ಷ ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ದಿನದಂದು ಸೇತುವೆಯ ನವೀಕರಣ ಕಾರ್ಯ ಪೂರ್ಣಗೊಂಡ ನಂತರ ಮತ್ತೆ ತೆರೆಯಲಾಗಿತ್ತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications