ಮೆಹ್ಸಾನಾ ಪ್ರವೇಶಿಸಲು ಹಾರ್ದಿಕ್ ಪಟೇಲ್ಗೆ ಸಿಕ್ತು ಅನುಮತಿ
ನವದೆಹಲಿ, ನವೆಂಬರ್ 12: ವಿರಾಮಗಾಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಪಾಟಿದಾರ್ ಅನಾಮತ್ ಆಂದೋಲನ ಸಮಿತಿಯ (ಪಿಎಎಎಸ್) ಮಾಜಿ ಸಂಚಾಲಕ ಹಾರ್ದಿಕ್ ಪಟೇಲ್ ಅವರು ಮೆಹ್ಸಾನಾ ಜಿಲ್ಲೆಗೆ ಪ್ರವೇಶಿಸಲು ಗುಜರಾತ್ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.
ಈ ಹಿಂದೆ ವಿಧಿಸಿದ್ದ ನಿರ್ಬಂಧವನ್ನು ತೆಗೆದುಹಾಕಿದರೆ ಯಾವುದೇ ಅಭ್ಯಂತರವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ವರ್ಷ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಂತರ ಹಾರ್ದಿಕ್ ವಿರಾಮಗಮ್ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಜನಾದೇಶ ಪಡೆದರು.
ಹಾರ್ದಿಕ್ ಪಟೇಲ್ ಅರ್ಜಿಯ ಕುರತು ರಾಜ್ಯ ಸರ್ಕಾರದಿಂದ ಬದಲಾಗಿರುವ ನಿಲುವನ್ನು ಆಲಿಸಿದ ನ್ಯಾಯಮೂರ್ತಿ ಎಸ್ ಎಚ್ ವೋರಾ, ನಿಮ್ಮ ಸರ್ಕಾರದ ನಿಲುವು ಎಂದಾದರೂ ಖಚಿತವಾಗಿದೆಯೇ?," ಎಂದು ಟೀಕಿಸಿದರು.

ನಿಲುವು ಬದಲಿಸಿದ್ದು ಏಕೆ ಬಿಜೆಪಿ ಸರ್ಕಾರ?
ಗುಜರಾತ್ ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಬಿಜೆಪಿಯು ಹಾರ್ದಿಕ್ ಪಟೇಲ್ ಕುರಿತಾಗಿ ತನ್ನ ನಿಲುವನ್ನು ಹೇಗೆ ಬದಲಿಸಿಕೊಂಡಿತು ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದರು. ಈ ಕುರಿತು ಪ್ರಶ್ನೆ ಮಾಡುತ್ತಿದ್ದಂತೆ ಕೋರ್ಟ್ ಆವರಣದಲ್ಲಿ ಕುಳಿತವರ ಮುಖದಲ್ಲಿ ನಗು ಮೂಡಿಸಿತು. ಈ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನವಾದ ಡಿಸೆಂಬರ್ 8ರಂದು ಸರ್ಕಾರಕ್ಕೆ ಏನಾಗಬೇಕೆಂಬುದು ನಿರ್ಧಾರವಾಗಲಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿದರು.

ಮೆಹ್ಸಾನಾ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ
ಕಳೆದ 2018ರಲ್ಲಿ ಹಾರ್ದಿಕ್ ಪಟೇಲ್ ರಿಗೆ ನೀಡಿದ್ದ ಷರತ್ತುಬದ್ಧ ಜಾಮೀನಿನಲ್ಲಿ ಮೆಹ್ಸಾನಾ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು. ಕ್ರಿಮಿನಲ್ ಮೊಕದ್ದಮೆಯೊಂದರಲ್ಲಿ ವಿಸ್ನಗರ ನ್ಯಾಯಾಲಯವು ಈ ಷರತ್ತಿನ ಮೇಲೆ ಅವರಿಗೆ ಜಾಮೀನು ನೀಡಿತ್ತು, ಇದರಲ್ಲಿ ಅವರು ತಪ್ಪಿತಸ್ಥರು ಎಂದು ಹೇಳಿತ್ತು. ಅಲ್ಲದೇ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ಪ್ರಕರಣವು 2015 ರಲ್ಲಿ ಪಾಟಿದಾರ್ ಯುವಕರ ಮೆರವಣಿಗೆಯಲ್ಲಿ ಪ್ರಸ್ತುತ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಕಚೇರಿಯ ಮೇಲೆ ದಾಳಿಗೆ ಸಂಬಂಧಿಸಿತ್ತು. ಪಾಟಿದಾರ್ ಸಮುದಾಯಕ್ಕೆ ಒಬಿಸಿ ಮೀಸಲಾತಿಗಾಗಿ ಒತ್ತಾಯಿಸಿದ ಹಾರ್ದಿಕ್ ಪಟೇಲ್, ಅವರ ನಾಯಕರಾಗಿ ಹೊರಹೊಮ್ಮಿದ್ದರು. ಆದರೆ 2018ರಲ್ಲಿ ಶಿಕ್ಷೆಗೊಳಗಾದ ಹಾರ್ದಿಕ್ ಪಟೇಲ್, ಈ ಶಿಕ್ಷೆಯಿಂದಾಗಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ತಪ್ಪಿಸಿಕೊಂಡರು.

ಹಾರ್ದಿಕ್ ಪಟೇಲ್ ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ
2022ರ ಎಪ್ರಿಲ್ನಲ್ಲಿ ಸುಪ್ರೀಂ ಕೋರ್ಟ್ ಹಾರ್ದಿಕ್ ಪಟೇಲ್ ಶಿಕ್ಷೆಗೆ ತಡೆ ನೀಡುವ ಮೂಲಕ ಚುನಾವಣೆಗೆ ಸ್ಪರ್ಧಿಸಲು ದಾರಿ ಮಾಡಿಕೊಟ್ಟಿತು. ಬಿಜೆಪಿ ಸೇರುವುದಕ್ಕಾಗಿ ಹಾರ್ದಿಕ್ ಪಟೇಲ್, ಗುಜರಾತ್ ಕಾಂಗ್ರೆಸ್ನ ಕಾರ್ಯಾಧ್ಯಕ್ಷ ಸ್ಥಾನವನ್ನು ತ್ಯಜಿಸಿದರು. ಇತ್ತೀಚೆಗೆ ಅವರ ತವರು ಪಟ್ಟಣವಾದ ವಿರಾಮ್ಗಮ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡರು. 2018 ರಿಂದ ಹಾರ್ದಿಕ್ ಮೆಹ್ಸಾನಾ ಜಿಲ್ಲೆಗೆ ಪ್ರವೇಶಿಸಲು ನಿರ್ಬಂಧವನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದ್ದರು. ಶಿಕ್ಷೆಯನ್ನು ಪ್ರಶ್ನಿಸುವ ಸಂದರ್ಭದಲ್ಲಿ, ಅವರು ಈ ಷರತ್ತನ್ನು ಶಾಶ್ವತವಾಗಿ ಅಳಿಸಲು ಹೈಕೋರ್ಟ್ಗೆ ವಿನಂತಿಸಿದರು. ಈ ಅರ್ಜಿ ಬಾಕಿ ಉಳಿದಿದ್ದು, 2023ರ ಜನವರಿಯಲ್ಲಿ ಹೈಕೋರ್ಟ್ ವಿಚಾರಣೆ ನಡೆಸಲಿದೆ.

ನವೆಂಬರ್ ತಿಂಗಳ ಆರಂಭದಲ್ಲಿ ಮತ್ತೊಂದು ಅರ್ಜಿ
ಈ ತಿಂಗಳ ಆರಂಭದಲ್ಲಿ ವಕೀಲ ರಫೀಕ್ ಲೋಖಂಡ್ವಾಲಾ ಮೂಲಕ ಹಾರ್ದಿಕ್ ಪಟೇಲ್ ಮತ್ತೊಂದು ಅರ್ಜಿಯನ್ನು ಸಲ್ಲಿಸಿದರು. ನವೆಂಬರ್ 7, 2023ರವರೆಗೆ ಒಂದು ವರ್ಷದ ಅವಧಿಸಿಗೆ ವಿಧಿಸಿದ ಷರತ್ತುಗಳನ್ನು ಅಮಾನತುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಹಿಂದೆ ಮೆಹ್ಸಾನಾ ಪ್ರವೇಶಿಸಲು ಅನುಮತಿಗಾಗಿ ಹಾರ್ದಿಕ್ ಸಲ್ಲಿಸಿದ ಅರ್ಜಿಗಳನ್ನು ತೀವ್ರವಾಗಿ ವಿರೋಧಿಸುತ್ತಿದ್ದ ರಾಜ್ಯ ಸರ್ಕಾರವು ತನ್ನ ನಿಲುವು ಬದಲಿಸಿತು.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications