Breaking; ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು
ದಿಸ್ಪುರ್, ಏಪ್ರಿಲ್ 25; ಗುಜರಾತ್ನ ಶಾಸಕ ಜಿಗ್ನೇಶ್ ಮೇವಾನಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಏಪ್ರಿಲ್ 21ರಂದು ಗುಜರಾತ್ನಲ್ಲಿ ಅಸ್ಸಾಂ ಪೊಲೀಸರು ಜಿಗ್ನೇಶ್ ಮೇವಾನಿ ಬಂಧಿಸಿದ್ದರು.
ಗುಜರಾತ್ನಲ್ಲಿ ಜಿಗ್ನೇಶ್ ಮೇವಾನಿ ಬಂಧಿಸಿದ್ದ ಪೊಲೀಸರು ಅಸ್ಸಾಂಗೆ ಕರೆದುಕೊಂಡು ಹೋಗಿದ್ದರು. ಸೋಮವಾರ ಅಸ್ಸಾಂನ ಸ್ಥಳೀಯ ನ್ಯಾಯಾಲಯ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು ಮಾಡಿದೆ.

ಜಿಗ್ನೇಶ್ ಮೇವಾನಿ ಬಂಧನ ಗುಜರಾತ್ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಯಾವ ಕಾರಣಕ್ಕಾಗಿ ಬಂಧಿಸಲಾಗಿದೆ? ಎಂದು ಹಲವರು ಚರ್ಚೆ ನಡೆಸಿದ್ದರು. ಈಗ ಅಸ್ಸಾಂನ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಗುಜರಾತ್ನ ವದ್ಗಂ ಕ್ಷೇತ್ರದ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ತಮ್ಮ ಶಾಸಕ ಸ್ಥಾನ ಕೊನೆಯಾಗುವ ತನಕ ಕಾಂಗ್ರೆಸ್ ಬೆಂಬಲಿಸಲಿದ್ದು, ಬಳಿಕ ಪಕ್ಷ ಸೇರುವುದಾಗಿ ರಾಹುಲ್ ಗಾಂಧಿ ಜೊತೆ ಜಂಟಿ ಪ್ರತಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದರು.
2022ರ ಡಿಸೆಂಬರ್ನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ. ಇಂತಹ ಸಂದರ್ಭದಲ್ಲಿಯೇ ಜಿಗ್ನೇಶ್ ವೇಮಾನಿ ಬಂಧನ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು. ಈ ಕುರಿತು ಚರ್ಚೆಗಳು ನಡೆದಿದ್ದವು.
ಜಿಗ್ನೇಶ್ ಮೇವಾನಿಯನ್ನು ಯಾವ ಕಾರಣಕ್ಕಾಗಿ ಬಂಧಿಸಲಾಗಿದೆ? ಎಂಬುದು ಕುತೂಹಲದ ವಿಚಾರವಾಗಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಗುರಿಯಾಗಿಸಿಕೊಂಡು ಅವರು ಸರಣಿ ಟ್ವೀಟ್ ಮಾಡುತ್ತಿದ್ದರು. ಈ ಹಿನ್ನಲೆಯಲ್ಲಿ ವಿವಿಧ ಕಾಯ್ದೆಗಳಡಿ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.
ಅಸ್ಸಾಂ ಪೊಲೀಸರು ಗುಜರಾತ್ನ ಪಾಲಂಪುರ್ ಸರ್ಕೀಟ್ ಹೌಸ್ನಲ್ಲಿ ಜಿಗ್ನೇಶ್ ವೇವಾನಿ ಬಂಧಿಸಿ ಗುವಾಹಟಿಗೆ ಕರೆದುಕೊಂಡು ಹೋಗಿದ್ದರು. ಈಗ ಅಸ್ಸಾಂನ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications