ಗುಜರಾತ್ ಚುನಾವಣೆ : ಸಮೀಕ್ಷೆಯಲ್ಲಿ ಜನರು ಹೇಳಿದ್ದೇನು?
ಅಹಮದಾಬಾದ್, ಅಕ್ಟೋಬರ್ 25 : ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಇಂದು ಘೋಷಣೆಯಾಗಲಿದೆ. ಚುನಾವಣೆಯಲ್ಲಿ ಯಾವ ವಿಚಾರಕ್ಕೆ ರಾಜಕೀಯ ಪಕ್ಷಗಳು ಆದ್ಯತೆ ನೀಡಬೇಕು? ಎಂಬುದು ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.
ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ನಡೆಸಿದ ಸಮೀಕ್ಷೆಯಲ್ಲಿ ಉದ್ಯೋಗ ಸೃಷ್ಟಿ ಮತ್ತು ವಲಸೆ ತಪ್ಪಿಸಲು ಆದ್ಯತೆ ನೀಡಬೇಕು ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ. ಶೇ 31ರಷ್ಟು ಜನರು ವಲಸೆ ರಾಜ್ಯದ ಬಹುದೊಡ್ಡ ಸಮಸ್ಯೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಮೀಕ್ಷಯಲ್ಲಿ ಪಾಲ್ಗೊಂಡಿದ್ದ ಶೇ 24ರಷ್ಟು ಜನರು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ 16ರಷ್ಟು ಜನರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಮಾತನಾಡುತ್ತಿರುವ ಅಭಿವೃದ್ಧಿ ವಿಚಾರವನ್ನು ಒಪ್ಪಿದ್ದಾರೆ.
ಇತರ ವಿಷಯಗಳು : ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಶೇ 9ರಷ್ಟು ಜನರು ರಸ್ತೆ, ಶೇ 6ರಷ್ಟು ಜನರು ನೀರು, ಶೇ 4ರಷ್ಟು ಜನರು ಕೃಷಿ ಸೌಕರ್ಯಗಳು, ಶೇ 3ರಷ್ಟು ಜನರು ವಿದ್ಯುತ್, ಶೇ 1ರಷ್ಟು ಜನರು ಕಾನೂನು ಸುವ್ಯವಸ್ಥೆ, ಶೇ 1ರಷ್ಟು ಜನರು ಆರೋಗ್ಯ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ಬುಧವಾರ ಮಧ್ಯಾಹ್ನ 1 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದು, ಗುಜರಾತ್ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆ ಮಾಡಲಿದೆ.












Click it and Unblock the Notifications