ಜಿಗ್ನೇಶ್ ಮೆವಾನಿ ಎನ್ ಕೌಂಟರ್ ಹತ್ಯೆಗೆ ಸಂಚು ರೂಪಿಸಲಾಗಿದೆಯಾ..?!
Recommended Video

ವಡ್ಗಾಂ, ಫೆಬ್ರವರಿ 24: ದಲಿತ ಪರ ಹೋರಾಟದ ಮೂಲಕ ರಾಷ್ಟ್ರದ ಪ್ರಭಾವಿ ನಾಯಕರಲ್ಲೊಬ್ಬರಾಗಿ ಬೆಳೆದು ನಿಂತ ವಡ್ಗಾಂ ಶಾಸಕ ಜಿಗ್ನೇಶ್ ಮೆವಾನಿ ಅವರನ್ನು ಎನ್ ಕೌಂಟರ್ ಮೂಲಕ ಹತ್ಯೆಗೈಯ್ಯಲು ಸಂಚು ರೂಪಿಸಲಾಗಿತ್ತು ಎಂಬ ಸ್ಫೋಟಕ ವಿಷಯವನ್ನು ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ!
ಗುಜರಾತ್ ಪೊಲೀಸರ whatsapp ಗ್ರೂಪ್ ವೊಂದರಲ್ಲಿ ತನ್ನ ಎನ್ ಕೌಂಟರ್ ಹತ್ಯೆಯ ಕುರಿತು ಸಂಚು ರೂಪಿಸಲಾಗಿತ್ತು ಎಂದಿರುವ ಜಿಗ್ನೇಶ್ ಮೆವಾನಿ ಅದರ whatsapp ಗುಂಪಿನಲ್ಲಿ ನಡೆದ ಚರ್ಚೆಯ ಸ್ಕ್ರೀನ್ ಶಾಟ್ ನ ಲಿಂಕ್ ಅನ್ನೂ ತಮ್ಮ ಟ್ವೀಟ್ ನಲ್ಲಿ ನೀಡಿದ್ದಾರೆ.
'ಮೇರಾಸುದ್ದಿ' ಎಂಬ ವೆಬ್ ಪೋರ್ಟಲ್ ನಲ್ಲಿ ಈ whatsapp ಸ್ಕ್ರೀನ್ ಶಾಟ್ ನ ಫೋಟೋ ಪ್ರಕಟವಾಗಿದ್ದು, ಇದು ಗುಜರಾತಿ ಭಾಷೆಯಲ್ಲಿದೆ. ಈ ಗ್ರೂಪ್ ನಿಜಕ್ಕೂ ಗ ಉಜರಾತ್ ಪೊಲೀಸರಿಗೇ ಸಂಬಂಧಿಸಿದ್ದಾ ಎ
|
ಇಲ್ಲಿದೆ ನೋಡಿ ಲಿಂಕ್!
ಜಿಗ್ನೇಶ್ ಮೆವಾನಿ ಎನ್ ಕೌಂಟರ್!? ಗುಜರಾತಿ ವೆಬ್ ಪೋರ್ಟಲ್ ವೊಂದು ಪ್ರಕಟಿಸಿದ ಲಿಂಕ್ ಇಲ್ಲಿದೆ ನೋಡಿ, ಈ ಸುದ್ದಿಯಲ್ಲಿ ಗುಜರಾತ್ ಪೊಲೀಸ್ ಗೆ ಸಂಬಂಧಿಸಿದ whatsapp ಗ್ರೂಪ್ ವೊಂದರಲ್ಲಿ ನನ್ನ ಎನ್ ಕೌಂಟರ್ ಬಗ್ಗೆ ಚರ್ಚೆ ನಡೆದಿರುವ ಸ್ಕ್ರೀನ್ ಶಾಟ್ ನೀಡಲಾಗಿದೆ. ಇಬ್ಬರು ಪೊಲೀಸರು ನನ್ನ ಎನ್ ಕೌಂಟರ್ ಹತ್ಯೆಯ ಬಗ್ಗೆ ಹೀಗೆ ಚರ್ಚೆ ಮಾಡುತ್ತಾರೆ ಎಂದರೆ ನೀವು ನಂಬುತ್ತೀರಾ? ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ ಮೆವಾನಿ.
|
ಈ ಸೂಚನೆ ಎಲ್ಲಿಂದ ಬಂದಿದೆ?
ಇದು ನಿಜಕ್ಕೂ ಅತ್ಯಂತ ಗಂಭೀರ ವಿಷಯ. ಪೊಲೀಸರು ನನ್ನ ಎನ್ ಕೌಂಟರ್ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಅಷ್ಟಕ್ಕೂ ಯಾರ ಸೂಚನೆಯ ಮೇಲೆ ಅವರು ನನ್ನ ಹತ್ಯೆಗೆ ಸಂಚು ರೂಪಿಸುತ್ತಿದ್ದಾರೆ? ಸೂಚನೆ ಬಂದಿದ್ದು ಗಾಂಧಿನಗರದಿಂದಲಾ? ದೆಹಲಿಯಿಂದಲಾ ಎಂದು ಪ್ರಶ್ನಿಸಿದ್ದಾರೆ ಜಿಗ್ನೇಶ್!

ಯಾವ whatsapp ಗ್ರೂಪ್?
ADR Police & Media ಎಂಬ whatsapp ಗ್ರೂಪಿನಲ್ಲಿ ಈ ಚರ್ಚೆ ನಡೆದಿದೆ. ಸದ್ಯಕ್ಕೆ ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇದರ ಸತ್ಯಾಸತ್ಯತೆಯ ಬಗ್ಗೆ ನಿಖತರ ಮಾಹಿತಿ ಲಭ್ಯವಿಲ್ಲ.

ಅಲ್ಪಸಮಯದಲ್ಲೇ ನಾಯಕನಾಗಿ ಬೆಳೆದ ಜಿಗ್ನೇಶ್
ಯುವ, ದಲಿತ ನಾಯಕರಾಗಿ ಅಲ್ಪ ಸಮಯದಲ್ಲೇ ಬೆಳೆದು ನಿಂತ 38 ವರ್ಷದ ಜಿಗ್ನೇಶ್ ಮೆವಾನಿ, ಕಳೆದ ಡಿಸೆಂಬರ್ ನಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ವಡ್ಗಾಮ್ ಕ್ಷೇತ್ರದಿಂದ ಜಯಗಳಿಸಿದ್ದರು(ಒಟ್ಟು ಮತ: 63,471 ). ಬಿಜೆಪಿಯ ವಿಜಯ ಕುಮಾರ್ ಚಕ್ರವರ್ತಿ ಅವರನ್ನು 21,042 ಮತಗಳ ಅಂತರದಿಂಮದ ಸೋಲಿಸಿದ್ದ ಅವರು ಸದ್ಯಕ್ಕೆ ರಾಷ್ಟ್ರದ ಪ್ರಮುಖ ದಲಿತ ನಾಯಕರಲ್ಲೊಬ್ಬರಾಗಿ ಹೊರಹೊಮ್ಮಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications