ಗುಜರಾತ್ ನಲ್ಲಿ ಬಿರುಗಾಳಿ ಎಬ್ಬಿಸಿದ ಅಡ್ಡ ಮತದಾನ, ಕಾಂಗ್ರೆಸ್ ಕಂಗಾಲು
ಅಹಮದಾಬಾದ್, ಆಗಸ್ಟ್ 8: ಗುಜರಾತ್ ರಾಜ್ಯಸಭಾ ಚುನಾವಣೆ ಕ್ಷಣಕ್ಷಣಕ್ಕೂ ಕುತೂಹಲ ಹುಟ್ಟಿಸುತ್ತಿದೆ. ಇಬ್ಬರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಮತ ಚಲಾಯಿಸಿದ್ದಾರೆ ಇವರ ಮತಗಳನ್ನು ರದ್ದುಪಡಿಸಬೇಕು ಎಂದು ಕಾಂಗ್ರೆಸ್ ಬಿಗಿ ಪಟ್ಟು ಹಿಡಿದಿದೆ. ಇದರಿಂದ ಮತ ಎಣಿಕೆ ವೇಳೆ ಗುಜರಾತ್ ನಲ್ಲಿ ಬೃಹನ್ನಾಟಕವೇ ಆರಂಭವಾಗಿದೆ.
ಅಡ್ಡ ಮತದಾನ ಮಾಡಿದ ಶಾಸಕರ ಮತಗಳನ್ನು ರದ್ದುಗೊಳಿಸುವಂತೆ ಕಾಂಗ್ರೆಸ್ ನ ರಣದೀಪ್ ಸುರ್ಜೇವಾಲಾ ಮತ್ತು ಆರ್.ಪಿ.ಎಸ್ ಸಿಂಗ್ ಚುನಾವಣಾ ಆಯೋಗಕ್ಕೆ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಮನವಿಯನ್ನು ದೆಹಲಿಗೆ ರವಾನಿಸಲಾಗಿದ್ದು ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ ಬಂದ ನಂತರ ಮತಎಣಿಕೆ ಆರಂಭವಾಗಲಿದೆ. ಸದ್ಯಕ್ಕೆ ಮತ ಎಣಿಕೆ ಕಾರ್ಯ ವಿಳಂವಾಗಿದೆ.

"ಪಕ್ಷದ ಏಜೆಂಟ್ ಅಲ್ಲದವರಿಗೆ ಮತ ಪತ್ರ ತೋರಿಸಿದರೆ ಆ ಮತಗಳು ಅಸಿಂಧುವಾಗುತ್ತವೆ. ಇಬ್ಬರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಮತ ಹಾಕಿದ್ದು ಮತ ಪತ್ರಗಳನ್ನು ಅಮಿತ್ ಶಾಗೆ ತೋರಿಸಿದ್ದಾರೆ. ಇದು ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ," ಎಂದು ಕಾಂಗ್ರೆಸ್ ನಾಯಕ ಶಕ್ತಿ ಸಿನ್ಹಾ ಗೋಹಿಲ್ ಹೇಳಿದ್ದಾರೆ.
"ಅಧಿಕೃತ ದೃಶ್ಯಾವಳಿಗೆ ನಾವು ಮನವಿ ಸಲ್ಲಿಸಲಿದ್ದೇವೆ. ಒಂದೊಮ್ಮೆ ದೃಶ್ಯಾವಳಿ ತಿರುಚಿದರೆ ಸುಪ್ರಿಂ ಕೋರ್ಟ್ ಮೊರೆ ಹೋಗಲಿದ್ದೇವೆ," ಎಂದು ಅವರು ಗುಡುಗಿದ್ದಾರೆ.
ಭೋಲಾ ಭಾಯಿ ಮತ್ತು ರಾಘವ್ ಜೀ ಬಾಯಿ ಬಿಜೆಪಿಗೆ ಮತ ಚಲಾಯಿಸಿದ್ದಾರೆ ಎಂದು ಶಕ್ತಿ ಸಿನ್ಹಾ ಗೋಹಿಲ್ ಹೇಳಿದ್ದಾರೆ. ಇನ್ನು ಎನ್.ಸಿ.ಪಿಯ ಓರ್ವ ಶಾಸಕ ಕೂಡ ಬಿಜೆಪಿ ಪರವಾಗಿ ಮತದಾನ ಮಾಡಿರುವುದು ಬೆಳಕಿಗೆ ಬಂದದೆ. ಈ ಸಂಬಂಧ ಎನ್.ಸಿ.ಪಿ ನಾಯಕ ಶರದ್ ಪವಾರ್ ಮೇಲೆ ಸೋನಿಯಾ ಗಾಂಧಿ ಅಸಮಧಾನಗೊಂಡಿದ್ದಾರೆ ಎಂದೂ ವರದಿಯಾಗಿದೆ.

ಅಡ್ಡ ಮತದಾನ ಮಾಡಿದ ಶಾಸಕ ಖಂಢಲಾ ಜಡೇಜಾ ವಜಾ ಮಾಡುವುದಾಗಿ ಎನ್.ಸಿ.ಪಿಯ ಶರದ್ ಪವಾರ್ ಹೇಳಿದ್ದಾರೆ. ಆದರೆ ಸದ್ಯಕ್ಕೆ ಅವರು ಹಾಕಿರುವ ಮತವನ್ನು ಏನೂ ಮಾಡಲು ಬರುವುದಿಲ್ಲ.
ಇವೆಲ್ಲದರ ಜತೆಗೆ "ನಮ್ಮ ಗುಜರಾತ್ ಶಾಸಕರಿಗೆ ಛೋಟುಬಾಯಿ ವಾಸವಾರಿಗೆ ಬಿಜೆಪಿಗೆ ಮತದಾನ ಮಾಡುವಂತೆ ನಿತೀಶ್ ಕುಮಾರ್ ಹೇಳಿದ್ದರು. ಅದರಂತೆ ಅವರು ಬಿಜೆಪಿ ಮತ ಹಾಕಿದ್ದಾರೆ," ಎಂದು ಜೆಡಿಯು ನಾಯಕ ಕೆಸಿ ತ್ಯಾಗಿ ಹೇಳಿದ್ದು ಅಹ್ಮದ್ ಪಟೇಲ್ ಗೆಲುವಿನ ಮೇಲೆ ಕಾರ್ಮೋಡ ಆವರಿಸಿದೆ.
ಯಾರು ಯಾರಿಗೆ ಮತದಾನ ಮಾಡಿದ್ದಾರೆ ಎಂಬ ದೊಡ್ಡ ಮಟ್ಟದ ಗೊಂದಲಗಳು ಕೊನೆಯ ಕ್ಷಣದಲ್ಲಿ ಹುಟ್ಟಿಕೊಂಡಿವೆ. ಈ ಎಲ್ಲಾ ಅನುಮಾನಗಳಿಗೆ ಇನ್ನು ಕೆಲವೇ ಕ್ಷಣಗಳಲ್ಲಿ ಹೊರ ಬೀಳಲಿರುವ ಅಂತಿಮ ಫಲಿತಾಂಶ ಉತ್ತರ ನೀಡಲಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications