ಗುಜರಾತಿನ ವಡೋದರಾ ಶಾಲೆಯಲ್ಲಿ ಪ್ರದ್ಯುಮ್ನ ಮಾದರಿ ಹತ್ಯೆ
ವಡೋದರಾ, ಜೂನ್ 23: ದೇಶವನ್ನು ಬೆಚ್ಚಿಬೀಳಿಸಿದ್ದ ಗುರ್ಗಾಂವ್ ಶಾಲೆಯ ಪ್ರದ್ಯುಮ್ನ ಹತ್ಯೆಯ ಮಾದರಿಯಲ್ಲಿಯೇ ಗುಜರಾತಿನ ವಡೋದರಾ ಶಾಲೆಯಲ್ಲಿಯೂ ವಿದ್ಯಾರ್ಥಿಯೋರ್ವನನ್ನು ಹತ್ಯೆಗೈಯ್ಯಲಾಗಿದೆ.
9 ನೇ ತರಗತಿ ಓದುತ್ತಿದ್ದ ದೇವ್ ಭಗ್ವಾನ್ ದಾಸ್ ತದ್ವಿ(14) ಎಂಬ ವಿದ್ಯಾರ್ಥಿಯೋರ್ವನನ್ನು ಆತನ ಶಾಲೆಯ ವಿದ್ಯಾರ್ಥಿಯೇ ಕೊಲೆ ಮಾಡಿದ್ದಾನೆಂಬ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ಆತನ ಶವ ಶಾಲೆಯ ಶೌಚಾಲಯದಲ್ಲಿ ಪತ್ತೆಯಾಗಿತ್ತು.
ಪ್ರದ್ಯುಮ್ನ ಕೊಲೆ : ಗುರ್ಗಾಂವ್ ಕೋರ್ಟ್ ನಿಂದ ಜಾಮೀನು ನಿರಾಕರಣೆ
10 ನೇ ತರಗತಿಯ ವಿದ್ಯಾರ್ಥಿಯೇ ಈ ಕೃತ್ಯ ಎಸಗಿದ್ದಾನೆಂಬ ಶಂಕೆ ವ್ಯಕ್ತವಾಗಿದ್ದು, ಇದುವರೆಗೂ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ. ಮಧ್ಯಾಹ್ನ ಸುಮಾರು 12 ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದ್ದು, ತನಿಖೆಯ ನಂತರವೇ ಪ್ರತಿಕ್ರಿಯೆ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹರ್ಯಾಣದ ಗುರ್ಗಾಂವ್ ನಲ್ಲಿರುವ ರಾಯನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ಪ್ರದ್ಯುಮ್ನ ಠಾಕೂರ್ ಎಂಬ ವಿದ್ಯಾರ್ಥಿಯನ್ನು ಸೆಪ್ಟೆಂಬರ್ 8, 2017 ರಂದು ಶಾಲೆಯ ಶೌಚಾಲಯದಲ್ಲಿ ಕತ್ತು ಸೀಳಿ ಹತ್ಯೆಗೈಯಲಾಗಿತ್ತು. ಈ ಸಂಬಂಧ , ಇದೇ ಶಾಲೆಯಲ್ಲಿ11 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ.