ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ, 24 ಮಂದಿಗೆ ಜೀವಾವಧಿ
ಅಹಮದಾಬಾದ್, ಜೂನ್ 02: ಗೋಧ್ರಾ ಹಿಂಸಾಚಾರದ ಬಳಿಕ ಸಂಭವಿಸಿದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣ ತೀರ್ಪು ಪ್ರಕಟಗೊಂಡಿದೆ. ಅಹಮದಾಬಾದ್ ವಿಶೇಷ ನ್ಯಾಯಾಲಯವು ಗುರುವಾರ ಪ್ರಕಟಿಸಿದ ತೀರ್ಪಿನಂತೆ ಪ್ರಕರಣದಲ್ಲಿ ಬಂಧನಕ್ಕೊಳಗಾದ 66 ಮಂದಿ ಆರೋಪಿಗಳ ಪೈಕಿ 24 ಮಂದಿಯ ಮೇಲಿನ ಆರೋಪ ಸಾಬೀತಾಗಿದೆ. 36 ಮಂದಿಗೆ ಖುಲಾಸೆ ಸಿಕ್ಕಿದೆ.
ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾ.ಪಿಬಿ ದೇಸಾಯಿ ಅವರು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಬಿಜೆಪಿ ಕಾರ್ಪೋರೇಟರ್ ಬಿಪಿನ್ ಪಟೇಲ್, ವಿಎಎಚ್ ಪಿ ನಾಯಕ ಅತುಲ್ ವೈದ್ಯ ಸೇರಿ 36 ಮಂದಿಯನ್ನು ಖುಲಾಸೆಗೊಳಿಸಲಾಗಿದೆ. 24 ಮಂದಿ ಮೇಲೆ ಆರೋಪ ಸಾಬೀತಾಗಿದೆ, ಜೂನ್ 06ರಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿದ್ದಾರೆ.

24 ಮಂದಿಗಳ ಪೈಕಿ 11 ಜನರ ಮೇಲೆ ಕೊಲೆ ಆರೋಪ ಸಾಬೀತಾಗಿದ್ದರೆ, ಉಳಿದ 13 ಮಂದಿ ಮೇಲೆ ಇತರ ಆರೋಪಗಳು ಸಾಬೀತಾಗಿದೆ. ಕೊಲೆ ಆರೋಪದಲ್ಲಿ ದೋಷಿಗಳಾಗಿರುವ 13 ಮಂದಿ ಜೀವಾವಧಿ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿದೆ. ಇತರೆ ಆರೋಪ ಸಾಬೀತಾದ 13 ಮಂದಿಗೆ ಸಾಮಾನ್ಯ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿದೆ.[ಗುಜರಾತ್ ಹಿಂಸಾಚಾರ: ಮೋದಿಗೆ ಎಸ್ಐಟಿ ಕ್ಲೀನ್ಚಿಟ್]
ಪ್ರಕರಣದ ಹಿನ್ನಲೆ: ಗೋದ್ರಾ ಹತ್ಯಾಕಾಂಡದ ಪ್ರತೀಕಾರವಾಗಿ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ನಡೆದಿದ್ದು, 2002 ಫೆ.28ರಂದು ನಡೆದ ಹತ್ಯಾಕಾಂಡದಲ್ಲಿ 10 ಅಪಾರ್ಟ್ಮೆಂಟ್, 29ಬಂಗಲೆಗಳ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು, ಕಾಂಗ್ರೆಸ್ ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಸೇರಿದಂತೆ ಸುಮಾರು 69 ಮಂದಿಯನ್ನು ಹತ್ಯೆ ಮಾಡಿದ್ದರು.
ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ, 36 ಮಂದಿಗೆ ಖುಲಾಸೆ
ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ನಡೆಸಿತ್ತು. ಎಸ್ಐಟಿ ಸಲ್ಲಿಸಿದ್ದ ಆರೋಪ ಪಟ್ಟಿಯಲ್ಲಿ ಹೆಸರಿಸಿದ್ದ ಆರೋಪಿಗಳ ಪೈಕಿ 9 ಮಂದಿ 14 ವರ್ಷಗಳಿಂದ ಜೈಲಿನಲ್ಲಿದ್ದರು. ಉಳಿದವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಹಿಂಸಾಚಾರದಲ್ಲಿ ಅಂದಿನ ಗುಜರಾತ್ ಸಿಎಂ ನರೇಂದ್ರ ಮೋದಿ ಭಾಗಿಯಾಗಿದ್ದಾರೆ ಎಂಬುದನ್ನು ದೃಢಪಡಿಸುವ ನಿಟ್ಟಿನಲ್ಲಿ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಅಂದಿನ ಎಸ್ ಐಟಿ ಮುಖ್ಯಸ್ಥ ರಾಘವನ್ ಅವರು ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications