ಗುಲ್ಬರ್ಗ್ ಹತ್ಯಾಕಂಡ ಪ್ರಕರಣ: 36 ಮಂದಿ ದೋಷಮುಕ್ತ, 11 ಮಂದಿಗೆ ಜೀವಾವಧಿ
ಅಹಮದಾಬಾದ್, ಜೂನ್ 14: ಗೋಧ್ರಾ ಹಿಂಸಾಚಾರದ ಬಳಿಕ ಸಂಭವಿಸಿದ 2002ರ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣದ ಅಂತಿಮ ತೀರ್ಪು ಶುಕ್ರವಾರ (ಜೂನ್ 17) ಪ್ರಕಟಗೊಂಡಿದೆ. ಅಹಮದಾಬಾದ್ ವಿಶೇಷ ನ್ಯಾಯಾಲಯವು ಪ್ರಕಟಿಸಿದ ತೀರ್ಪಿನಂತೆ ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ 66 ಮಂದಿ ಆರೋಪಿಗಳ ಪೈಕಿ ಅಪರಾಧಿಗಳಾದ 24 ಮಂದಿಯ ಪೈಕಿ 11 ಜನರಿಗೆ ಸಾಯುವ ತನಕ ಜೀವಾವಧಿ ಶಿಕ್ಷೆ ಘೋಷಿಸಲಾಗಿದೆ.
ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾ.ಪಿಬಿ ದೇಸಾಯಿ ಅವರು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಬಿಜೆಪಿ ಕಾರ್ಪೋರೇಟರ್ ಬಿಪಿನ್ ಪಟೇಲ್, ವಿಎಎಚ್ ಪಿ ನಾಯಕ ಅತುಲ್ ವೈದ್ಯ ಸೇರಿ 36 ಮಂದಿಯನ್ನು ಖುಲಾಸೆಗೊಳಿಸಿ ಜೂನ್ 02 ರಂದು ಆದೇಶ ಹೊರಡಿಸಲಾಗಿತ್ತು.

ಶಿಕ್ಷೆ ಪ್ರಮಾಣ ಪ್ರಕಟ: 24 ಮಂದಿ ಅಪರಾಧಿಗಳ ಪೈಕಿ 11 ಜನರಿಗೆ ಸಾಯುವ ತನಕ ಜೀವಾವಧಿ ಶಿಕ್ಷೆ, 12 ಮಂದಿಗೆ 7 ವರ್ಷಗಳ ಸಜೆ, ಒಬ್ಬ ವ್ಯಕ್ತಿಗೆ 10 ವರ್ಷಗಳ ಶಿಕ್ಷೆ ನೀಡಲಾಗಿದೆ.
ಮಾಜಿ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಅವರ ಪ್ರತಿಕ್ರಿಯೆ ಟ್ವೀಟ್ ನಲ್ಲಿ ಓದಿ
So many people, all being violent. How did court pick out those for lesser sentence?: Zakia Jafri #GulbargVerdict pic.twitter.com/LuM9NON8pN
— ANI (@ANI_news) June 17, 2016
ಪ್ರಕರಣದ ಹಿನ್ನಲೆ: ಗೋದ್ರಾ ಹತ್ಯಾಕಾಂಡದ ಪ್ರತೀಕಾರವಾಗಿ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ನಡೆದಿದ್ದು, 2002 ಫೆ.28ರಂದು ನಡೆದ ಹತ್ಯಾಕಾಂಡದಲ್ಲಿ 10 ಅಪಾರ್ಟ್ಮೆಂಟ್, 29 ಬಂಗಲೆಗಳ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು, ಕಾಂಗ್ರೆಸ್ ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಸೇರಿದಂತೆ ಸುಮಾರು 69 ಮಂದಿಯನ್ನು ಹತ್ಯೆ ಮಾಡಿದ್ದರು.
ಗುಲ್ಬರ್ಗ್ ಹತ್ಯಾಕಂಡ ಪ್ರಕರಣ:24 ಮಂದಿಗೆ ಶಿಕ್ಷೆ ಪ್ರಕಟ
ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ನಡೆಸಿತ್ತು. ಎಸ್ಐಟಿ ಸಲ್ಲಿಸಿದ್ದ ಆರೋಪ ಪಟ್ಟಿಯಲ್ಲಿ ಹೆಸರಿಸಿದ್ದ ಆರೋಪಿಗಳ ಪೈಕಿ 9 ಮಂದಿ 14 ವರ್ಷಗಳಿಂದ ಜೈಲಿನಲ್ಲಿದ್ದರು. ಉಳಿದವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
Court said this 2002 incident was the darkest day in civil society: RC Kodekar, Public Prosecutor #GulbargVerdict pic.twitter.com/kqRx0UpDiq
— ANI (@ANI_news) June 17, 2016
ಹಿಂಸಾಚಾರದಲ್ಲಿ ಅಂದಿನ ಗುಜರಾತ್ ಸಿಎಂ ನರೇಂದ್ರ ಮೋದಿ ಭಾಗಿಯಾಗಿದ್ದಾರೆ ಎಂಬುದನ್ನು ದೃಢಪಡಿಸುವ ನಿಟ್ಟಿನಲ್ಲಿ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಅಂದಿನ ಎಸ್ ಐಟಿ ಮುಖ್ಯಸ್ಥ ರಾಘವನ್ ಅವರು ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications