ಗುಲ್ಬರ್ಗ್ ಹತ್ಯಾಕಂಡ ಪ್ರಕರಣ: 36 ಮಂದಿ ದೋಷಮುಕ್ತ, 11 ಮಂದಿಗೆ ಜೀವಾವಧಿ
ಅಹಮದಾಬಾದ್, ಜೂನ್ 14: ಗೋಧ್ರಾ ಹಿಂಸಾಚಾರದ ಬಳಿಕ ಸಂಭವಿಸಿದ 2002ರ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣದ ಅಂತಿಮ ತೀರ್ಪು ಶುಕ್ರವಾರ (ಜೂನ್ 17) ಪ್ರಕಟಗೊಂಡಿದೆ. ಅಹಮದಾಬಾದ್ ವಿಶೇಷ ನ್ಯಾಯಾಲಯವು ಪ್ರಕಟಿಸಿದ ತೀರ್ಪಿನಂತೆ ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ 66 ಮಂದಿ ಆರೋಪಿಗಳ ಪೈಕಿ ಅಪರಾಧಿಗಳಾದ 24 ಮಂದಿಯ ಪೈಕಿ 11 ಜನರಿಗೆ ಸಾಯುವ ತನಕ ಜೀವಾವಧಿ ಶಿಕ್ಷೆ ಘೋಷಿಸಲಾಗಿದೆ.
ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾ.ಪಿಬಿ ದೇಸಾಯಿ ಅವರು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಬಿಜೆಪಿ ಕಾರ್ಪೋರೇಟರ್ ಬಿಪಿನ್ ಪಟೇಲ್, ವಿಎಎಚ್ ಪಿ ನಾಯಕ ಅತುಲ್ ವೈದ್ಯ ಸೇರಿ 36 ಮಂದಿಯನ್ನು ಖುಲಾಸೆಗೊಳಿಸಿ ಜೂನ್ 02 ರಂದು ಆದೇಶ ಹೊರಡಿಸಲಾಗಿತ್ತು.

ಶಿಕ್ಷೆ ಪ್ರಮಾಣ ಪ್ರಕಟ: 24 ಮಂದಿ ಅಪರಾಧಿಗಳ ಪೈಕಿ 11 ಜನರಿಗೆ ಸಾಯುವ ತನಕ ಜೀವಾವಧಿ ಶಿಕ್ಷೆ, 12 ಮಂದಿಗೆ 7 ವರ್ಷಗಳ ಸಜೆ, ಒಬ್ಬ ವ್ಯಕ್ತಿಗೆ 10 ವರ್ಷಗಳ ಶಿಕ್ಷೆ ನೀಡಲಾಗಿದೆ.
ಮಾಜಿ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಾಕಿಯಾ ಅವರ ಪ್ರತಿಕ್ರಿಯೆ ಟ್ವೀಟ್ ನಲ್ಲಿ ಓದಿ
So many people, all being violent. How did court pick out those for lesser sentence?: Zakia Jafri #GulbargVerdict pic.twitter.com/LuM9NON8pN
— ANI (@ANI_news) June 17, 2016
ಪ್ರಕರಣದ ಹಿನ್ನಲೆ: ಗೋದ್ರಾ ಹತ್ಯಾಕಾಂಡದ ಪ್ರತೀಕಾರವಾಗಿ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ನಡೆದಿದ್ದು, 2002 ಫೆ.28ರಂದು ನಡೆದ ಹತ್ಯಾಕಾಂಡದಲ್ಲಿ 10 ಅಪಾರ್ಟ್ಮೆಂಟ್, 29 ಬಂಗಲೆಗಳ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು, ಕಾಂಗ್ರೆಸ್ ನ ಮಾಜಿ ಸಂಸದ ಎಹ್ಸಾನ್ ಜಾಫ್ರಿ ಸೇರಿದಂತೆ ಸುಮಾರು 69 ಮಂದಿಯನ್ನು ಹತ್ಯೆ ಮಾಡಿದ್ದರು.
ಗುಲ್ಬರ್ಗ್ ಹತ್ಯಾಕಂಡ ಪ್ರಕರಣ:24 ಮಂದಿಗೆ ಶಿಕ್ಷೆ ಪ್ರಕಟ
ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ನಡೆಸಿತ್ತು. ಎಸ್ಐಟಿ ಸಲ್ಲಿಸಿದ್ದ ಆರೋಪ ಪಟ್ಟಿಯಲ್ಲಿ ಹೆಸರಿಸಿದ್ದ ಆರೋಪಿಗಳ ಪೈಕಿ 9 ಮಂದಿ 14 ವರ್ಷಗಳಿಂದ ಜೈಲಿನಲ್ಲಿದ್ದರು. ಉಳಿದವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
Court said this 2002 incident was the darkest day in civil society: RC Kodekar, Public Prosecutor #GulbargVerdict pic.twitter.com/kqRx0UpDiq
— ANI (@ANI_news) June 17, 2016
ಹಿಂಸಾಚಾರದಲ್ಲಿ ಅಂದಿನ ಗುಜರಾತ್ ಸಿಎಂ ನರೇಂದ್ರ ಮೋದಿ ಭಾಗಿಯಾಗಿದ್ದಾರೆ ಎಂಬುದನ್ನು ದೃಢಪಡಿಸುವ ನಿಟ್ಟಿನಲ್ಲಿ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಅಂದಿನ ಎಸ್ ಐಟಿ ಮುಖ್ಯಸ್ಥ ರಾಘವನ್ ಅವರು ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications