ಪುಲ್ವಾಮಾ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ, ಸಂಘರ್ಷ ಜಾರಿ
ಪುಲ್ವಾಮಾ ಜಿಲ್ಲೆಯ ಪಡ್ಗಂಪೊರಾ ಎಂಬ ಪ್ರಾಂತ್ಯದಲ್ಲಿನ ಮನೆಯೊಂದರಲ್ಲಿ ಅಡಗಿ ಕುಳಿತಿರುವ ಉಗ್ರರು. ಮೂವರು ಅಥವಾ ನಾಲ್ವರು ಉಗ್ರರು ಅಡಗಿರಬಹುದಾದ ಶಂಕೆ.
ಶ್ರೀನಗರ, ಮಾರ್ಚ್ 9: ಲಕನೌದಲ್ಲಿ ಉಗ್ರ ಸೈಫುಲ್ಲಾ ಜತೆಗಿನ 12 ಗಂಟೆಗಳ ಕಾದಾಟ ಮುಕ್ತಾಯವಾದ ಬೆನ್ನಿಗೇ, ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಡ್ಗಂಪೊರಾ ಎಂಬ ಪ್ರಾಂತ್ಯದಲ್ಲಿನ ಮನೆಯೊಂದರಲ್ಲಿ ಅಡಗಿ ಕುಳಿತಿರುವ ಉಗ್ರರ ಜತೆ ಭದ್ರತಾ ಪಡೆಗಳ ಕಾದಾಟ ಶುರುವಾಗಿದೆ.
ಲಷ್ಕರ್ ತೊಯ್ಬಾ ಸಂಘಟನೆಗೆ ಸೇರಿದ ಉಗ್ರರು ಈ ಮನೆಯಲ್ಲಿ ಅಡಗಿದ್ದಾರೆಂದು ಹೇಳಲಾಗಿದ್ದು, ಈವರೆಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆಂದು ತಿಳಿದುಬಂದಿದೆ. ಮನೆಯಲ್ಲಿ ಇನ್ನುಳಿದ ಉಗ್ರರ ಜತೆಗೆ ಭದ್ರತಾ ಪಡೆಗಳ ಗುಂಡಿನ ಕಾಳಗ ಮುಂದುವರಿದಿದೆ.

ಉಗ್ರರು ಮನೆಯೊಂದರಲ್ಲಿ ಅಡಗಿರುವ ಖಚಿತ ಸುಳಿವಿನ ಮೇರೆಗೆ ಭದ್ರತಾ ಪಡೆಗಳು ಗುರುವಾರ ನಸುಕಿನಲ್ಲೇ ಮನೆಯನ್ನು ಸುತ್ತುವರಿದಿದ್ದವು. ಭದ್ರತಾ ಪಡೆಗಳು ಆಗಮಿಸಿದ್ದನ್ನು ಅರಿತ ಉಗ್ರರು ಗುಂಡಿನ ದಾಳಿ ಶುರು ಮಾಡಿದ್ದರು. ಇದಕ್ಕೆ ಭದ್ರತಾ ಪಡೆಗಳು ಪ್ರತಿದಾಳಿ ಆರಂಭಿಸಿರುವುದರಿಂದ ಗುಂಡಿನ ಚಕಮಕಿ ಆರಂಭವಾಯಿತು ಎನ್ನಲಾಗಿದೆ.
ಮನೆಯಲ್ಲಿ ಸುಮಾರು ಮೂರರಿಂದ ನಾಲ್ವರು ಉಗ್ರರು ಅಡಗಿರು ಶಂಕೆಯಿದೆ ಎಂದು ಭದ್ರತಾ ಮೂಲಗಳು ಬೆಳಗ್ಗೆಯೇ ತಿಳಿಸಿದ್ದವು.
ಈ ಪ್ರಾಂತ್ಯದಲ್ಲಿ ಕಳೆದ ಐದು ದಿನಗಳಲ್ಲಿ ಹೀಗೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಯುತ್ತಿರುವುದು ಇದು 2ನೇ ಬಾರಿ. ಭಾನುವಾರವಷ್ಟೇ ಇದೇ ಪ್ರಾಂತ್ಯದ ಮತ್ತೊಂದು ಮನೆಯಲ್ಲಿ ಅಡಗಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಆದರೆ, ಆ ಹೋರಾಟದಲ್ಲಿ ಜಮ್ಮು ಕಾಶ್ಮೀರ ಪೊಲೀಸ್ ಪಡೆಯ ಪೇದೆಯೊಬ್ಬರು ಹುತಾತ್ಮರಾಗಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications