ದೆಹಲಿಯಲ್ಲಿ ಸಾರ್ವಜನಿಕರಿಗೆ ಸ್ಪುಟ್ನಿಕ್ ವಿ ಲಸಿಕೆ ಆರಂಭ
ನವದೆಹಲಿ, ಜೂನ್ 28: ದೇಶದಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದುಕೊಂಡಿರುವ "ಸ್ಪುಟ್ನಿಕ್ ವಿ" ಲಸಿಕೆಯನ್ನು ಗುರುಗ್ರಾಮದ ಫೋರ್ಟಿಸ್ ಸಂಶೋಧನಾ ಕೇಂದ್ರದಲ್ಲಿ ಸಾರ್ವಜನಿಕರಿಗೆ ನೀಡಲು ಆರಂಭಿಸಲಾಗಿದೆ.
ರಷ್ಯಾ ಮೂಲದ ಈ ಲಸಿಕೆಯನ್ನು ಇಲ್ಲಿನ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ವಿತರಣೆ ಮಾಡುತ್ತಿದ್ದು, ಇಂದಿನಿಂದ ದೆಹಲಿಯಲ್ಲಿ ಇದನ್ನು ಸಾರ್ವಜನಿಕರಿಗೆ ನೀಡಲು ಆರಂಭಿಸಲಾಗಿದೆ. ಶೀಘ್ರವೇ ಇತರೆ ನಗರಗಳಲ್ಲಿಯೂ ಸಾರ್ವಜನಿಕರಿಗೆ ಲಸಿಕೆ ಲಭ್ಯವಾಗುವ ನಿರೀಕ್ಷೆಯಿದೆ.

ಏಪ್ರಿಲ್ನಲ್ಲಿ ಭಾರತದಲ್ಲಿ ಸ್ಪುಟ್ನಿಕ್ ಲಸಿಕೆಗೆ ಅನುಮೋದನೆ ದೊರೆತಿತ್ತು. ಈ ಮೂಲಕ ದೇಶದಲ್ಲಿ ಅನುಮೋದನೆ ಪಡೆದುಕೊಂಡ ಮೂರನೇ ಲಸಿಕೆ ಇದಾಗಿತ್ತು. ಸರ್ಕಾರ ಸ್ಪುಟ್ನಿಕ್ ಲಸಿಕೆಯ ಎರಡು ಡೋಸ್ಗೆ 1145 ಗರಿಷ್ಠ ಬೆಲೆ ನಿಗದಿಗೊಳಿಸಿದ್ದು, ಇದರಲ್ಲಿ ಆಸ್ಪತ್ರೆ ಶುಲ್ಕವೂ ಸೇರಿದೆ.
ಡೆಲ್ಟಾ ರೂಪಾಂತರಕ್ಕೆ ಸ್ಪುಟ್ನಿಕ್ ಲಸಿಕೆ ಬೇರೆಲ್ಲಾ ಲಸಿಕೆಗಳಿಗಿಂತ ಪರಿಣಾಮಕಾರಿಯಾಗಿದೆ ಎಂದು ಗಮಾಲೆಯಾ ಇನ್ಸ್ಟಿಟ್ಯೂಟ್ ಅಧ್ಯಯನ ತಿಳಿಸಿತ್ತು. ಕೊರೊನಾ ಸೋಂಕಿನ ವಿರುದ್ಧ ರಷ್ಯಾ ಮೂಲದ ಸ್ಫುಟ್ನಿಕ್ ವಿ ಲಸಿಕೆಯ ದಕ್ಷತೆ ಹಾಗೂ ಲಸಿಕೆ ನೀಡಿದ ನಂತರದ ಪರಿಣಾಮಗಳ ಕುರಿತು ಅರ್ಜೆಂಟಿನಾದ ಬ್ಯೂನೊಸ್ ಏರ್ಸ್ ಆರೋಗ್ಯ ಸಚಿವಾಲಯ ಅಧ್ಯಯನ ನಡೆಸಿದ್ದು, ಈ ಲಸಿಕೆ ಇತರೆ ಎಲ್ಲಾ ಲಸಿಕೆಗಳಿಗಿಂತಲೂ ಸುರಕ್ಷಿತ ಎಂದು ವರದಿ ನೀಡಿತ್ತು.
28 ನಗರಗಳಿಗೆ ಈ ಲಸಿಕೆ ಶೀಘ್ರವಾಗಿಯೇ ಲಭ್ಯವಾಗುವುದು ಎಂದು ಡಾ. ರೆಡ್ಡೀಸ್ ಲ್ಯಾಬೊರೇಟರಿ ತಿಳಿಸಿದೆ.
Recommended Video
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications