Breaking: ಜ್ಞಾನವಾಪಿ ವಿವಾದ- ತೀರ್ಪು ಮುಂದೂಡಿದ ನ್ಯಾಯಾಲಯ
ವಾರಣಾಸಿ, ನ. 08: ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಪತ್ತೆಯಾಗಿದ್ದು, ಇದಕ್ಕೆ ಪೂಜೆ ಸಲ್ಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ವಾರಣಾಸಿಯ ತ್ವರಿತ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿಲ್ಲ.
ಅರ್ಜಿ ವಿಚಾರಣೆ ನಡೆಸಿದ್ದ ವಾರಣಾಸಿಯ ತ್ವರಿತ ನ್ಯಾಯಾಲಯ ಮಂಗಳವಾರ ತೀರ್ಪು ನೀಡಬೇಕಿತ್ತು. ಆದರೆ, ತೀರ್ಪಿ ದಿನಾಂಕವನ್ನು ಮತ್ತೆ ನವೆಂಬರ್ 14 ಕ್ಕೆ ಮುಂದೂಡಲಾಗಿದೆ.
ಸ್ವಯಂಭೂ ಜ್ಯೋತಿರ್ಲಿಂಗ ಭಗವಾನ್ ವಿಶ್ವೇಶ್ವರನ ಪ್ರಾರ್ಥನೆಗೆ ತಕ್ಷಣದ ಅನುಮತಿ, ಸಂಪೂರ್ಣ ಜ್ಞಾನವಾಪಿ ಸಂಕೀರ್ಣವನ್ನು ಹಿಂದೂಗಳಿಗೆ ಹಸ್ತಾಂತರಿಸುವುದು ಮತ್ತು ಜ್ಞಾನವಾಪಿ ಸಂಕೀರ್ಣದ ಆವರಣದೊಳಗೆ ಮುಸ್ಲಿಮರ ಪ್ರವೇಶ ನಿಷೇಧಿಸುವುದು ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳ ಅರ್ಜಿಯನ್ನು ಸಿವಿಲ್ ನ್ಯಾಯಾಧೀಶ ಹಿರಿಯ ವಿಭಾಗ ತ್ವರಿತ ನ್ಯಾಯಾಲಯವು ವಿಚಾರಣೆ ನಡೆಸಿತ್ತು. ಆದರೆ, ತೀರ್ಪು ನೀಡಿಲ್ಲ.

ಹಿಂದೂ ಅರ್ಜಿದಾರರು ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 22 ರಂದು ಅರ್ಜಿಯನ್ನು ಸಲ್ಲಿಸಿದ್ದು, ಶಿವಲಿಂಗದಂತಹ ರಚನೆಯ ಕಾರ್ಬನ್ ಡೇಟಿಂಗ್ ಮತ್ತು ಇತರ ವೈಜ್ಞಾನಿಕ ಪರೀಕ್ಷೆಗೊಳಪಡಿಸಲು ಒತ್ತಾಯಿಸಿದ್ದರು. ಮಸೀದಿ ಆವರಣದಲ್ಲಿ ಸಿಕ್ಕಿರುವ ರಚನೆಯು ಕಾರಂಜಿ ಎಂದು ಮುಸ್ಲಿಂ ಅರ್ಜಿದಾರರು ವಾದಿಸಿದ್ದರು.
ಅಕ್ಟೋಬರ್ನಲ್ಲಿ ನಡೆದ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ವಾರಣಾಸಿ ನ್ಯಾಯಾಲಯವು ಶಿವಲಿಂಗದ ವೈಜ್ಞಾನಿಕ ತನಿಖೆಗೆ ಅನುಮತಿ ನೀಡಲು ನಿರಾಕರಿಸಿತ್ತು. ಶಿವಲಿಂಗದ ವೈಜ್ಞಾನಿಕ ತನಿಖೆಗೆ ಅನುಮತಿ ನಿರಾಕರಿಸಿದ ವಾರಣಾಸಿ ನ್ಯಾಯಾಲಯದ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ನ ಮೊರೆ ಹೋಗುವುದಾಗಿ ಹಿಂದೂ ಅರ್ಜಿದಾರರು ಹೇಳಿದ್ದಾರೆ.
ಜ್ಞಾನವಾಪಿ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಜೈನ್, "ಕಾರ್ಬನ್ ಡೇಟಿಂಗ್ ಕೋರುವ ನಮ್ಮ ಬೇಡಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಈ ಆದೇಶದ ವಿರುದ್ಧ ನಾವು ಸುಪ್ರೀಂ ಕೋರ್ಟ್ಗೆ ಹೋಗುತ್ತೇವೆ. ಅಲ್ಲಿ ಅದನ್ನು ಪ್ರಶ್ನಿಸುತ್ತೇವೆ. ನಾನು ಈಗಲೇ ದಿನಾಂಕವನ್ನು ಘೋಷಿಸಲು ಸಾಧ್ಯವಿಲ್ಲ, ಆದರೆ ನಾವು ಶೀಘ್ರದಲ್ಲೇ ಈ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುತ್ತೇನೆ" ಎಂದಿದ್ದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications