Gyanvapi Mosque Survey: ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಆಗಸ್ಟ್ 3ರ ವರೆಗೂ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್
ಅಲಹಾಬಾದ್, ಜುಲೈ 27: ಜ್ಞಾನವಾಪಿ ಮಸೀದಿ ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ವಾರಣಾಸಿ ಜಿಲ್ಲಾ ನ್ಯಾಯಾಲಯ ಸೂಚಿಸಿತ್ತು. ಈ ಆದೇಶದ ವಿರುದ್ಧದ ಅರ್ಜಿಯ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ಕಾಯ್ದಿರಿಸಿದೆ.
ಸಮೀಕ್ಷೆ ಮೇಲಿನ ತಡೆಯಾಜ್ಞೆ ಆಗಸ್ಟ್ 3 ರ ವರೆಗೆ ಮುಂದುವರಿಯಲಿದೆ. ಇದೇ ದಿನದಂದು ಜಿಲ್ಲಾ ನ್ಯಾಯಾಲಯದ ಆದೇಶದ ಕುರಿತು ಅಲಹಾಬಾದ್ ನ್ಯಾಯಾಲವು ತೀರ್ಪು ನೀಡಲಿದೆ.

ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಮನವಿಯ ಮೇರೆಗೆ ಅಲಹಾಬಾದ್ ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪ್ರಿಟಿಂಕರ್ ದಿವಾಕರ್ ಅವರು ಇಂದು ವಿಚಾರಣೆಯನ್ನು ಪುನರಾರಂಭಿಸಿದ್ದಾರೆ.
ಈ ವೇಳೆ, ಮಸೀದಿ ಸಮಿತಿಯ ಪರ ವಕೀಲ ಎಸ್ಎಫ್ಎ ನಖ್ವಿ ಅವರು ತಮ್ಮ ವಾದವನ್ನು ಮಂಡಿಸಿದ್ದಾರೆ. ಐವರು ಫಿರ್ಯಾದಿದಾರರು ಸುಪ್ರೀಂ ಕೋರ್ಟ್ನಲ್ಲಿ ದಾವೆ ಹೂಡಿದ್ದಾರೆ. ಮಸೀದಿ ನಿರ್ವಹಣೆಗೆ ಸಂಬಂಧಿಸಿದ ದಾವೆಯು ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಉಳಿದಿದೆ ಎಂದು ಹೇಳಿದರು.
ಜ್ಞಾನವಾಪಿ ಮಸೀದಿಯನ್ನು ದೇವಾಲಯದ ಮೇಲೆ ಕಟ್ಟಲಾಗಿದೆ ಎಂಬ ಆರೋಪವಿದೆ. ಈ ವಿಚಾರವಾಗಿ ದೇಶದ ವಿವಿಧ ಭಾಗಗಳ ಜನರು ಪ್ರತ್ಯೇಕ ಮೊಕದ್ದಮೆಗಳನ್ನು ಹೂಡಿದ್ದಾರೆ. ಇದರ ಬದಲು ದೇವಾಲಯದ ಟ್ರಸ್ಟ್ ಅಥವಾ ಉಸ್ತುವಾರಿಗಳು ಮೊಕದ್ದಮೆಯನ್ನು ಹೂಡಿಲ್ಲ. ಇದು ಹಲವು ಗೊಂದಲಗಳಿವೆ ಎಡೆ ಮಾಡಿಕೊಟ್ಟಿದೆ ಎಂದು ನಖ್ವಿ ಹೇಳಿದ್ದಾರೆ.

ಮಸೀದಿ ಆವರಣವನ್ನು ತಲುಪಿದಾಗ ಎಎಸ್ಐ ಹೊಂದಿದ್ದ ವಿವಿಧ ಅಗೆಯುವ ಸಲಕರಣೆಗಳ ಫೋಟೊಗಳನ್ನು ನಾವು ಲಗತ್ತಿಸಿದ್ದೇವೆ. ಅವರು ಸ್ಥಳವನ್ನು ಅಗೆಯುವ ಉದ್ದೇಶವನ್ನು ಹೊಂದಿದ್ದರು ಎಂಬುದನ್ನು ಇದು ತೋರಿಸುತ್ತದೆ ಎಂದು ನಖ್ವಿ ನ್ಯಾಯಾಲಯಕ್ಕೆ ತಿಳಿಸಿದರು.
ಬುಧವಾರ ನಡೆದ ವಿಚಾರಣೆ ವೇಳೆ ಹಿರಿಯ ಎಎಸ್ಐ ಅಧಿಕಾರಿಯೊಬ್ಬರು ನ್ಯಾಯಾಲಯದಲ್ಲಿ ಹಾಜರಾಗಿದ್ದರು. ಎಎಸ್ಐ ತಂಡವು ಯಾವುದೇ ರೀತಿಯಲ್ಲಿ ಮಸೀದಿಯ ರಚನೆಯನ್ನು ನಾಶಮಾಡಲು ಮುಂದಾಗಿಲ್ಲ ಎಂದು ಅಧಿಕಾರಿ ನ್ಯಾಯಾಲಯಕ್ಕೆ ತಿಳಿಸಿದರು.
ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಮಸೀದಿಯ ಎಎಸ್ಐ ಸಮೀಕ್ಷೆಗೆ ಸಲ್ಲಿಸಿದ ಅರ್ಜಿಯನ್ನು ಓದಿದರು. ಪ್ರಸ್ತುತ ಕಟ್ಟಡದ ಗೋಡೆಗಳ ಮೇಲೆ ಹಿಂದೂ ಧರ್ಮದ ವಿವಿಧ ಚಿಹ್ನೆಗಳು ಇವೆ. ಮಸೀದಿಯ ಒಳಗೆ ಮತ್ತು ಪಶ್ಚಿಮ ಗೋಡೆಯ ಮೇಲೆ ಹಲವಾರು ಹಿಂದೂ ಕಲಾಕೃತಿಗಳಿವೆ ಎಂದು ಜೈನ್ ಹೇಳಿದರು.

ಮೊಘಲ್ ಚಕ್ರವರ್ತಿ ಔರಂಗಜೇಬ್ ದೇವಾಲಯವನ್ನು ಕೆಡವಿ ಹೊಸದಾಗಿ ಮಸೀದಿಯನ್ನು ನಿರ್ಮಿಸಿಲ್ಲ. ಹಳೆಯ ದೇವಾಲಯದ ಅವಶೇಷಗಳ ಮೇಲೆ ಮಸೀದಿಯನ್ನು ಕಟ್ಟಿದ್ದಾರೆ ಎಂದು ತಿಳಿಸಿದರು.
ಎಎಸ್ಐನ ಹೆಚ್ಚುವರಿ ನಿರ್ದೇಶಕ ಅಲೋಕ್ ತ್ರಿಪಾಠಿ ಅವರು ಸರ್ವೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications