ಜ್ಞಾನವಾಪಿ ಮಸೀದಿ ಸಮೀಕ್ಷೆ: ಬಾಬರಿ ಮಸೀದಿ ಧ್ವಂಸ ನೆನಪಿಸಿಕೊಂಡ ಅಸಾದುದ್ದೀನ್ ಓವೈಸಿ
ವಾರಣಾಸಿ, ಆಗಸ್ಟ್. 05: ಮಸೀದಿ ಇರುವ ಜ್ಞಾನವಾಪಿ ಸಂಕೀರ್ಣದ ವಿವಾದಾತ್ಮಕ ವೈಜ್ಞಾನಿಕ ಸಮೀಕ್ಷೆ ನಡೆಯುತ್ತಿದ್ದು, ಅಯೋಧ್ಯೆ ತೀರ್ಪಿನಲ್ಲಿ ಪೂಜಾ ಸ್ಥಳಗಳ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಹೇಳಿಕೆಯನ್ನು ಅವಮಾನ ಮಾಡಬಾರದು ಎಂದು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಶನಿವಾರ ಹೇಳಿದ್ದಾರೆ.
ಜ್ಞಾನವಾಪಿ ಮಸೀದಿ ಸಮೀಕ್ಷೆ ಈ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಅಖಿಲ ಭಾರತ ಮಜಿಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸಂಸದ ಅಸಾದುದ್ದೀನ್ ಓವೈಸಿ, "ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ (ಎಎಸ್ಐ) ನಡೆಸಿದ ಸಮೀಕ್ಷೆಯ ವರದಿಗಳು ಬಹಿರಂಗಗೊಂಡ ನಂತರ ಏನಾಗಲಿದೆ ಎಂಬುದು ಯಾರಿಗೆ ಗೊತ್ತು. "ಡಿಸೆಂಬರ್ 23 ಅಥವಾ ಡಿಸೆಂಬರ್ 6" ಘಟನೆಗಳು ಪುನರಾವರ್ತನೆಯಾಗುವುದಿಲ್ಲ ಎಂಬ ನಂಬಿಕೆ ಒಬ್ಬರದ್ದು" ಎಂದು ಓವೈಸಿ ಹೇಳಿದ್ದಾರೆ.
Once the #Gyanvapi ASI reports are made public, who knows how things will pan out. One hopes that neither 23rd December nor 6th December will repeat. The observation of the Supreme Court in the Ayodhya judgement regarding the sanctity of the Places of Worship Act must not be…
— Asaduddin Owaisi (@asadowaisi) August 5, 2023
1949 ರಲ್ಲಿ ಬಾಬರಿ ಮಸೀದಿಯೊಳಗೆ ರಾಮ್ ಲಲ್ಲಾ (ಬಾಲ ರಾಮ) ಯ ವಿಗ್ರಹವು "ಪ್ರತ್ಯಕ್ಷವಾಯಿತು" ಎನ್ನಲಾಗಿತ್ತು. 1992 ರಲ್ಲಿ ಕರಸೇವಕರು ಮಸೀದಿಯನ್ನು ಬಾಬರಿ ಕೆಡವಿದ್ದರು. ಅಸಾದುದ್ದೀನ್ ಓವೈಸಿ ತಮ್ಮ ಟ್ವೀಟ್ನಲ್ಲಿ ಉಲ್ಲೇಖಿಸಿರುವುದು ಕೂಡ ಇದೇ ದಿನಾಂಕಗಳನ್ನು. ಇವುಗಳ ಜೊತೆಗೆ ಮತ್ತೆ ಆ ಘಟನೆಗಳು ನಡೆಯದಿರಲಿ ಎಂದಿದ್ದಾರೆ.

"ಒಮ್ಮೆ ಜ್ಞಾನವಾಪಿ ಎಎಸ್ಐ ವರದಿಗಳನ್ನು ಸಾರ್ವಜನಿಕಗೊಳಿಸಿದರೆ, ವಿಷಯಗಳು ಹೇಗೆ ಹೊರಹೊಮ್ಮುತ್ತವೆ ಎಂದು ಯಾರಿಗೆ ತಿಳಿದಿದೆ. ಡಿಸೆಂಬರ್ 23 ಅಥವಾ ಡಿಸೆಂಬರ್ 6 ಪುನರಾವರ್ತನೆಯಾಗುವುದಿಲ್ಲ ಎಂದು ಒಬ್ಬರು ಆಶಿಸುತ್ತಿದ್ದಾರೆ. ಆರಾಧನಾ ಸ್ಥಳಗಳ ಕಾಯಿದೆಯ ಪಾವಿತ್ರ್ಯತೆಗೆ ಸಂಬಂಧಿಸಿದಂತೆ ಅಯೋಧ್ಯೆ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ನ ಅವಲೋಕನವನ್ನು ಅವಮಾನಿಸಬಾರದು. ಸಾವಿರ ಬಾಬರಿಗಳಿಗೆ ತೆರೆ ಬೀಳುವುದಿಲ್ಲ ಎಂಬ ಭರವಸೆಯಿದೆ" ಎಂದು ಟ್ವೀಟ್ ಮಾಡಿದ್ದಾರೆ.
ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಮಸೀದಿಯನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀತ ಪುರಾತತ್ವ ಇಲಾಖೆಯ ತಂಡವು ಜ್ಞಾನವಾಪಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸುತ್ತಿದೆ. ಮಸೀದಿಯ ವಝುಖಾನಾದಲ್ಲಿ 'ಶಿವಲಿಂಗ'ದ ರಚನೆಯು ಅಸ್ತಿತ್ವದಲ್ಲಿದೆ ಎಂದು ಹಿಂದೂಗಳು ವಾಸಿದುತ್ತಿದ್ದಾರೆ.

ಈ ಸ್ಥಳದಲ್ಲಿ ಹಿಂದೆ ದೇವಸ್ಥಾನವಿತ್ತು ಮತ್ತು ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ 17 ನೇ ಶತಮಾನದಲ್ಲಿ ಅದನ್ನು ಕೆಡವಲಾಯಿತು ಎಂದು ಹಿಂದೂ ಕಾರ್ಯಕರ್ತರು ಹೇಳುತ್ತಾರೆ. ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ತಡೆಹಿಡಿಯಲು ನಿರಾಕರಿಸಿದೆ. ಮುಸ್ಲಿಂ ಸಮುದಾಯದವರು ಇದು ಹಿಂದಿನ ಗಾಯಗಳನ್ನು ಪುನಃ ಕೆದಕುತ್ತದೆ ಎಂದು ಹೇಳಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು, ಸಮೀಕ್ಷೆಯ ಸಮಯದಲ್ಲಿ ಯಾವುದೇ ಆಕ್ರಮಣಕಾರಿ ಕೃತ್ಯವನ್ನು ನಡೆಸದಂತೆ ಎಎಸ್ಐಗೆ ಸೂಚಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications