H3N2 virus Deaths: ಕರ್ನಾಟಕ, ಹರಿಯಾಣದಲ್ಲಿ ಎಚ್3ಎನ್2 ವೈರಸ್ನಿಂದಾಗಿ 2 ಸಾವು- ವರದಿ
ದೇಶದಲ್ಲಿ ಆತಂಕವನ್ನು ಸೃಷ್ಟಿ ಮಾಡಿದ ಎಚ್3ಎನ್2 ವೈರಸ್ನಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ಶುಕ್ರವಾರ ತಿಳಿಸಿವೆ. ಹರಿಯಾಣದಲ್ಲಿ ಓರ್ವ ವ್ಯಕ್ತಿ ಮೃತಪಟ್ಟರೆ, ಮತ್ತೊಬ್ಬರು ಕರ್ನಾಟಕದಲ್ಲಿ ಎಚ್3ಎನ್2ನಿಂದಾಗಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ದೇಶದಲ್ಲಿ ಸುಮಾರು 90 ಎಚ್3ಎನ್2 ಪ್ರಕರಣಗಳು ದಾಖಲಾಗಿವೆ. ಜೊತೆಗೆ ಎಚ್1ಎನ್1 ವೈರಸ್ನ ಎಂಟು ಪ್ರಕರಣಗಳು ವರದಿಯಾಗಿವೆ.
In the view of increasing cases of seasonal flu, guidelines have been issued by state health department to prevent and control the spread of viral infection.
— Dr Sudhakar K (@mla_sudhakar) March 6, 2023
I urge people to follow precautionary measures, visit doctor in case of any symptoms and strictly avoid self-medication. pic.twitter.com/LJyu9gVATE
ಗಮನಾರ್ಹವಾಗಿ ಕಳೆದ ಹಲವಾರು ದಿನಗಳಿಂದ ದೇಶದಲ್ಲಿ ಜ್ವರ ಪ್ರಕರಣಗಳು ಹೆಚ್ಚುತ್ತಿವೆ. ಹೆಚ್ಚಿನ ಸೋಂಕುಗಳು ಎಚ್3ಎನ್2 (H3N2) ವೈರಸ್ನಿಂದ ಉಂಟಾಗುತ್ತವೆ. ಇದನ್ನು 'ಹಾಂಗ್ ಕಾಂಗ್ ಫ್ಲೂ' ಎಂದೂ ಕರೆಯುತ್ತಾರೆ. ಭಾರತದಲ್ಲಿ ಇದುವರೆಗೆ ಎಚ್3ಎನ್2 ಮತ್ತು ಎಚ್1ಎನ್1 ಸೋಂಕುಗಳು ಮಾತ್ರ ಪತ್ತೆಯಾಗಿವೆ. ಈ ಸೋಂಕಿನ ಲಕ್ಷಣಗಳೆಂದರೆ ಜ್ವರ, ಶೀತ, ಕೆಮ್ಮು, ಉಸಿರಾಟದ ತೊಂದರೆ ಆಗಿದೆ.

ತಜ್ಞರ ಪ್ರಕಾರ, ವೈರಸ್ ಹೆಚ್ಚು ಸಾಂಕ್ರಾಮಿಕವಾಗಿದೆ. ಕೆಮ್ಮುವಿಕೆ, ಸೀನುವಿಕೆ ಮತ್ತು ಸೋಂಕಿತ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕದ ಮೂಲಕ ಹರಡುತ್ತದೆ.
ಕೈ ಮತ್ತು ಮಾಸ್ಕ್ಗಳನ್ನು ನಿಯಮಿತವಾಗಿ ತೊಳೆಯುವುದು ಸೇರಿದಂತೆ ಕೋವಿಡ್ ತರಹದ ಮುನ್ನೆಚ್ಚರಿಕೆಗಳನ್ನು ವೈದ್ಯರು ಸಲಹೆ ನೀಡಿದ್ದಾರೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಸೀನುವಾಗ ಮತ್ತು ಕೆಮ್ಮುವಾಗ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳುವಂತೆ ಸಾರ್ವಜನಿಕರಿಗೆ ಸೂಚಿಸಿದೆ. ಪದೇ ಪದೇ ಕಣ್ಣು ಮತ್ತು ಮೂಗನ್ನು ಸ್ಪರ್ಶಿಸುವುದನ್ನು ತಪ್ಪಿಸಿ. ಜ್ವರ ಮತ್ತು ದೇಹದ ನೋವು ಹೆಚ್ಚಾದಲ್ಲಿ ವೈದ್ಯರನ್ನು ಸಂಪರ್ಕಿಸಿ ಎಂದಿದ್ದಾರೆ.
ದೀರ್ಘಕಾಲದ ವೈದ್ಯಕೀಯ ಸಮಸ್ಯೆಗಳಿಂದಾಗಿ ದುರ್ಬಲಗೊಂಡ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೊಂದಿರುವ ಜನರಲ್ಲದೆ, ವಯಸ್ಸಾದ ವಯಸ್ಕರು ಮತ್ತು ಕಿರಿಯ ಮಕ್ಕಳನ್ನು ಈ ವೈರಸ್ ಬಾದಿಸುತ್ತದೆ.

ಕರ್ನಾಟಕದಲ್ಲಿ ಓರ್ವ ಎಚ್3ಎನ್2 ವೈರಸ್ಗೆ ಸಾವು
ಈ ಸೋಂಕಿನಿಂದ ಕರ್ನಾಟಕದ ಹಾಸನ ಜಿಲ್ಲೆಯ ಆಲೂರಿನಲ್ಲಿ 78 ವರ್ಷದ ವೃದ್ಧ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಾರ್ಚ್ 1 ರಂದು ಇವರು ಮೃತಪಟ್ಟಿದ್ದು, ಇವರಿಗೆ ಎಚ್3 ಎನ್2 ವೈರಸ್ ದೃಢ ಆಗಿರುವ ಬಗ್ಗೆ ವೈದ್ಯರು ಇಂದು ಮಾಹಿತಿ ನೀಡಿದ್ದಾರೆ. ಗಂಟಲು ನೋವು, ಕೆಮ್ಮಿನಿಂದ ಬಳಲುತ್ತಿದ್ದರಿಂದ ವೃದ್ಧ ಆಸ್ಪತ್ರೆಗೆ ಸೇರಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಕೆಮ್ಮು, ಜ್ವರ ಹಾಗೂ ಕೋವಿಡ್ ರೀತಿಯ ರೋಗಲಕ್ಷಣದ ಎಚ್3ಎನ್2 26 ಪ್ರಕರಣಗಳು ಪತ್ತೆಯಾಗಿವೆ. ಇದರ ಬೆನ್ನಲ್ಲೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಸಭೆ ನಡೆಸಿದ್ದು, ಸೋಮವಾರ ವಿಸ್ತೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್












Click it and Unblock the Notifications