ಮೋಹನ್ ಲಾಲ್ ಫ್ಯಾನ್ಸ್ ನಿಂದ ಕನ್ನಕ್ಕೆ ಪ್ರತಿ ಗುನ್ನ
ತಿರುವನಂತಪುರ, ಅ.9: ದಕ್ಷಿಣ ಭಾರತದ ಜನಪ್ರಿಯ ನಟ ಮೋಹನ್ಲಾಲ್ ಅವರ ಅಧಿಕೃತ ವೆಬ್ಸೈಟ್ ಮಂಗಳವಾರ ಹ್ಯಾಕ್ ಆಗಿದ್ದ ಸುದ್ದಿ ಗೊತ್ತೇ ಇದೆ. ಯಾರೋ ದುಷ್ಕರ್ಮಿಗಳು ವೆಬ್ ಸೈಟ್ ಹ್ಯಾಕ್ ಮಾಡಿ ಕಾಶ್ಮೀರ ಪ್ರತ್ಯೇಕಾವಾದಿಗಳ ಪರ ಹೇಳಿಕೆಗಳನ್ನು ಹಾಕಿದ್ದರು. ನಂತರ ವೆಬ್ ಸೈಟ್ ಸರಿ ಮಾಡಲಾಗಿತ್ತು. ಅದರೆ, ಇದರಿಂದ ಸಿಟ್ಟಿಗೆದ್ದ ಲಾಲೆಟ್ಟನ ಫ್ಯಾನ್ಸ್ ಲಾಹೋರ್ ವಿವಿಯ ವೆಬ್ ತಾಣಕ್ಕೆ ಕನ್ನ ಹಾಕಿದ ಘಟನೆ ನಡೆದಿದೆ.
ಕಾಶ್ಮೀರದ ಪ್ರತ್ಯೇಕತಾವಾದಿಗಳು ಮೋಹನ್ ಲಾಲ್ ಅವರ ವೆಬ್ ತಾಣಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದರಿಂದ ಕೋಪಗೊಂಡ ಅವರ ಅಭಿಮಾನಿಗಳ ಗುಂಪೊಂದು ಪಾಕಿಸ್ತಾನದ ರಾಷ್ಟ್ರೀಯ ಅಧುನಿಕ ಭಾಷಾ ವಿಶ್ವ ವಿದ್ಯಾಲಯದ ಅಧಿಕೃತ ವೆಬ್ ತಾಣಕ್ಕೆ ಕನ್ನ ಹಾಕಿದ್ದಾರೆ.
ವೆಬ್ ತಾಣದ ಮುಖಪುಟದಲ್ಲಿ ಮೋಹನ್ ಲಾಲ್ ಭಾವಚಿತ್ರ ಹಾಗೂ ಅವರ ಚಿತ್ರಗಳ ಪೋಸ್ಟರ್ ಗಳನ್ನು ಹಾಕಲಾಗಿದೆ. ಜೊತೆಗೆ ಮಲೆಯಾಳಂ ಭಾಷೆಯಲ್ಲಿ ಏನೋ ಬರೆದಿದ್ದಾರೆ. ಈ ಬಗ್ಗೆ ಲಾಹೋರ್ ವಿವಿಯಿಂದ ಯಾವುದೇ ಪ್ರತಿಕ್ರಿಯೆ ಕಂಡು ಬಂದಿಲ್ಲ.[ಲಾಲ್ ವೆಬ್ ಸೈಟಿಗೆ ಪಾಕಿಗಳ ಕನ್ನ]

ಮಂಗಳವಾರ ತಮ್ಮ ವೆಬ್ ತಾಣವನ್ನು ದುಷ್ಕರ್ಮಿಗಳು ಪ್ರವೇಶಿಸಿದ ಕೂಡಲೇ ಎಚ್ಚೆತ್ತುಕೊಂಡ ಮೋಹನ್ ಲಾಲ್ ಅವರು ಮೊದಲಿಗೆ ವೆಬ್ ತಾಣವನ್ನು ದುರಸ್ಥಿಗೊಳಿಸಿದ್ದರು. ಬುಧವಾರ ಸಮೀಪದ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ದಾಖಲಿಸಿದ್ದರು.ಮೋಹನ್ ಲಾಲ್ ಅವರ ವೆಬ್ ಸೈಟ್ ಹ್ಯಾಕ್ ಆಗಿದ್ದ ಸಂದರ್ಭದಲ್ಲಿ ಹಾಕಲಾಗಿದ್ದ ಸಂದೇಶಗಳ ಆಧಾರದ ಮೇಲೆ ಇದು ಕಾಶ್ಮೀರ ಪ್ರತ್ಯೇಕತಾವಾದಿಗಳ ಕೃತ್ಯ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿತ್ತು. ಅದರೆ, ಈ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿಲ್ಲ.
ಬ್ಲಾಗರ್ ಆಗಿ ಕೂಡಾ ಇತ್ತೀಚೆಗೆ ಗುರುತಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪರ ಇತ್ತೀಚೆಗೆ ಬ್ಲಾಗ್ ಪೋಸ್ಟ್ ವೊಂದರಲ್ಲಿ ಹೊಗಳಿಕೆ ಮಾತುಗಳನ್ನು ಬರೆದಿದ್ದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications