ಪಟೇಲ್ ದೇಶದ ಮೊದಲ ಪ್ರಧಾನಿ ಆಗಬೇಕಾಗಿತ್ತು : ಮೋದಿ
ಅಹ್ಮದಾಬಾದ್, ಅ. 29 : "ಉಕ್ಕಿನ ಮನುಷ್ಯನೆಂದೇ ಖ್ಯಾತರಾಗಿದ್ದ ಸರದಾರ ಪಟೇಲರು ಭಾರತದ ಸ್ವಾತಂತ್ರ್ಯಾನಂತರ ಮೊದಲ ಪ್ರಧಾನಿಯಾಗಿದ್ದರೆ ದೇಶದ ಹಣೆಬರಹವೇ ವಿಭಿನ್ನವಾಗಿರುತ್ತಿತ್ತು" ಎಂದು ಪ್ರಧಾನಿ ಡಾ. ಮನಮೋಹನ ಸಿಂಗ್ ಎದುರಿಗೇ ಕಾಂಗ್ರೆಸ್ ಪಕ್ಷವನ್ನು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಕೆಣಕಿದ್ದಾರೆ.
ಶ್ರೀ ವಲ್ಲಭಭಾಯಿ ಪಟೇಲ್ ಸ್ಮೃತಿ ಸ್ಮಾರಕದ ಉದ್ಘಾಟನೆಯ ಸಂದರ್ಭದಲ್ಲಿ ಮನಮೋಹನ ಸಿಂಗ್ ಅವರೊಂದಿಗೆ ವೇದಿಕೆಯನ್ನು ಹಂಚಿಕೊಂಡಿದ್ದ ನರೇಂದ್ರ ಮೋದಿ ಅವರು, ದೇಶದ ಮೊದಲ ಗೃಹಮಂತ್ರಿ ಪಟೇಲರು ದೇಶವನ್ನು ಒಗ್ಗೂಡಿಸಿದ್ದರು ಎಂದು ಶ್ಲಾಘಿಸಿದರು. ಆದರೆ, ಅದೇ ಐಕ್ಯತೆಗೆ ಭಯೋತ್ಪಾದನೆ ಮತ್ತು ಮಾವೋವಾದಿ ದಾಳಿಗಳಿಂದಾಗಿ ಧಕ್ಕೆಯುಂಟಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
"ಸರದಾರ ಪಟೇಲರು ಮೊದಲ ಪ್ರಧಾನಿ ಆಗದಿದ್ದಕ್ಕೆ ಇಂದಿಗೂ ಕೂಡ ಎಲ್ಲ ಭಾರತೀಯರಲ್ಲಿಯೂ ಅಸಮಾಧಾನವಿದೆ. ಅಂದು ಅವರು ಪ್ರಧಾನಿಯಾಗಿದ್ದಿದ್ದರೆ ಇಂದಿನ ಭಾರತದ ಹಣೆಬರಹ ವಿಭಿನ್ನವಾಗಿರುತ್ತಿತ್ತು" ಎಂದು ಹೇಳಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಮೇಲೆ ಮೋದಿ ಆಕ್ರಮಣ ಮಾಡಿದ್ದಾರೆ.

ನರೇಂದ್ರ ಮೋದಿ ಅವರ ಮಾತಿನ ಏಟಿಗೆ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರು ವೇದಿಕೆಯ ಮೇಲೆಯೇ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. "ಸರದಾರ ಪಟೇಲ್ ಅವರು ಜಾತ್ಯತೀತರಾಗಿದ್ದರು. ಗಾಂಧಿ ಆಗಲಿ, ನೆಹರೂ ಆಗಲಿ ಅವರ ಅಭಿಪ್ರಾಯಗಳನ್ನು ಗೌರವಿಸುತ್ತಿದ್ದರು. ಅವರಲ್ಲಿ ಪರಸ್ಪರ ಗೌರವ ಭಾವನೆ ಇತ್ತು. ಅಂತಹ ಪಕ್ಷವನ್ನು ನಾನಿಂದು ಪ್ರತಿನಿಧಿಸುತ್ತಿದ್ದೇನೆ" ಎಂದು ತೀಕ್ಷ್ಣ ಉತ್ತರ ನೀಡಿದ್ದಾರೆ ಸಿಂಗ್.
"ನಮ್ಮನಮ್ಮಲ್ಲೇ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದರೂ ಒಬ್ಬರನ್ನೊಬ್ಬರು ಗೌರವಿಸುವುದನ್ನು ಮಹಾತ್ಮಾ ಗಾಂಧೀಜಿ, ಮೌಲಾನಾ ಅಬ್ದುಲ್ ಕಲಾಂ ಆಝಾದ್, ಸರದಾರ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ ಅವರು ನಮಗೆ ಕಲಿಸಿಕೊಟ್ಟಿದ್ದಾರೆ. ಆದರೆ, ವಿಪರ್ಯಾಸವೆಂದರೆ, ಇಂದು ಅಂತಹ ಮೌಲ್ಯಗಳು ಕಣ್ಮರೆಯಾಗುತ್ತಿವೆ. ಈ ವೇದಿಕೆಯ ಮೇಲೆ ಇರುವ ಎಲ್ಲರೂ ತಮ್ಮನ್ನು ತಾವು ವಿಮರ್ಶೆ ಮಾಡಿಕೊಳ್ಳಬೇಕು" ಎಂದು ಮೋದಿ ಅವರಿಗೆ ಮನಮೋಹನ ಅವರು ಮೋಹಕ ಪ್ರತ್ಯುತ್ತರ ನೀಡಿದರು.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications