ಪಟೇಲ್ ದೇಶದ ಮೊದಲ ಪ್ರಧಾನಿ ಆಗಬೇಕಾಗಿತ್ತು : ಮೋದಿ
ಅಹ್ಮದಾಬಾದ್, ಅ. 29 : "ಉಕ್ಕಿನ ಮನುಷ್ಯನೆಂದೇ ಖ್ಯಾತರಾಗಿದ್ದ ಸರದಾರ ಪಟೇಲರು ಭಾರತದ ಸ್ವಾತಂತ್ರ್ಯಾನಂತರ ಮೊದಲ ಪ್ರಧಾನಿಯಾಗಿದ್ದರೆ ದೇಶದ ಹಣೆಬರಹವೇ ವಿಭಿನ್ನವಾಗಿರುತ್ತಿತ್ತು" ಎಂದು ಪ್ರಧಾನಿ ಡಾ. ಮನಮೋಹನ ಸಿಂಗ್ ಎದುರಿಗೇ ಕಾಂಗ್ರೆಸ್ ಪಕ್ಷವನ್ನು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಕೆಣಕಿದ್ದಾರೆ.
ಶ್ರೀ ವಲ್ಲಭಭಾಯಿ ಪಟೇಲ್ ಸ್ಮೃತಿ ಸ್ಮಾರಕದ ಉದ್ಘಾಟನೆಯ ಸಂದರ್ಭದಲ್ಲಿ ಮನಮೋಹನ ಸಿಂಗ್ ಅವರೊಂದಿಗೆ ವೇದಿಕೆಯನ್ನು ಹಂಚಿಕೊಂಡಿದ್ದ ನರೇಂದ್ರ ಮೋದಿ ಅವರು, ದೇಶದ ಮೊದಲ ಗೃಹಮಂತ್ರಿ ಪಟೇಲರು ದೇಶವನ್ನು ಒಗ್ಗೂಡಿಸಿದ್ದರು ಎಂದು ಶ್ಲಾಘಿಸಿದರು. ಆದರೆ, ಅದೇ ಐಕ್ಯತೆಗೆ ಭಯೋತ್ಪಾದನೆ ಮತ್ತು ಮಾವೋವಾದಿ ದಾಳಿಗಳಿಂದಾಗಿ ಧಕ್ಕೆಯುಂಟಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
"ಸರದಾರ ಪಟೇಲರು ಮೊದಲ ಪ್ರಧಾನಿ ಆಗದಿದ್ದಕ್ಕೆ ಇಂದಿಗೂ ಕೂಡ ಎಲ್ಲ ಭಾರತೀಯರಲ್ಲಿಯೂ ಅಸಮಾಧಾನವಿದೆ. ಅಂದು ಅವರು ಪ್ರಧಾನಿಯಾಗಿದ್ದಿದ್ದರೆ ಇಂದಿನ ಭಾರತದ ಹಣೆಬರಹ ವಿಭಿನ್ನವಾಗಿರುತ್ತಿತ್ತು" ಎಂದು ಹೇಳಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಮೇಲೆ ಮೋದಿ ಆಕ್ರಮಣ ಮಾಡಿದ್ದಾರೆ.

ನರೇಂದ್ರ ಮೋದಿ ಅವರ ಮಾತಿನ ಏಟಿಗೆ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರು ವೇದಿಕೆಯ ಮೇಲೆಯೇ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. "ಸರದಾರ ಪಟೇಲ್ ಅವರು ಜಾತ್ಯತೀತರಾಗಿದ್ದರು. ಗಾಂಧಿ ಆಗಲಿ, ನೆಹರೂ ಆಗಲಿ ಅವರ ಅಭಿಪ್ರಾಯಗಳನ್ನು ಗೌರವಿಸುತ್ತಿದ್ದರು. ಅವರಲ್ಲಿ ಪರಸ್ಪರ ಗೌರವ ಭಾವನೆ ಇತ್ತು. ಅಂತಹ ಪಕ್ಷವನ್ನು ನಾನಿಂದು ಪ್ರತಿನಿಧಿಸುತ್ತಿದ್ದೇನೆ" ಎಂದು ತೀಕ್ಷ್ಣ ಉತ್ತರ ನೀಡಿದ್ದಾರೆ ಸಿಂಗ್.
"ನಮ್ಮನಮ್ಮಲ್ಲೇ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದರೂ ಒಬ್ಬರನ್ನೊಬ್ಬರು ಗೌರವಿಸುವುದನ್ನು ಮಹಾತ್ಮಾ ಗಾಂಧೀಜಿ, ಮೌಲಾನಾ ಅಬ್ದುಲ್ ಕಲಾಂ ಆಝಾದ್, ಸರದಾರ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ ಅವರು ನಮಗೆ ಕಲಿಸಿಕೊಟ್ಟಿದ್ದಾರೆ. ಆದರೆ, ವಿಪರ್ಯಾಸವೆಂದರೆ, ಇಂದು ಅಂತಹ ಮೌಲ್ಯಗಳು ಕಣ್ಮರೆಯಾಗುತ್ತಿವೆ. ಈ ವೇದಿಕೆಯ ಮೇಲೆ ಇರುವ ಎಲ್ಲರೂ ತಮ್ಮನ್ನು ತಾವು ವಿಮರ್ಶೆ ಮಾಡಿಕೊಳ್ಳಬೇಕು" ಎಂದು ಮೋದಿ ಅವರಿಗೆ ಮನಮೋಹನ ಅವರು ಮೋಹಕ ಪ್ರತ್ಯುತ್ತರ ನೀಡಿದರು.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications