Hajj 2023: ಕೇಂದ್ರದ ಮಹತ್ವದ ನಿರ್ಧಾರ, ಹಜ್ ಯಾತ್ರೆಯ ವಿಐಪಿ ಕೋಟಾಗೆ ಬ್ರೇಕ್
ನವದೆಹಲಿ, ಜ. 11: ಹಜ್ ಯಾತ್ರೆಯ ಬಗ್ಗೆ ಮಹತ್ವದ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರ ಹಜ್ ಯಾತ್ರಿಕರ ವಿಐಪಿ ಕೋಟಾವನ್ನು ಬುಧವಾರ ರದ್ದುಗೊಳಿಸಿದೆ. ವಿಐಪಿ ಯಾತ್ರಿಕರು ಇನ್ನು ಮುಂದೆ ಸಾಮಾನ್ಯ ಹಜ್ ಭಕ್ತರಂತೆ ಪ್ರಯಾಣಿಸಬೇಕಾಗಿದೆ.
ಈ ವಿಐಪಿ ಕೋಟಾವನ್ನು ಪ್ರಧಾನ ಮಂತ್ರಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಅಲ್ಪಸಂಖ್ಯಾತ ಸಚಿವರು ಹಾಗೂ ಭಾರತದ ಹಜ್ ಸಮಿತಿಗೆ ನೀಡಲಾಗಿತ್ತು. ಪ್ರಸ್ತುತ 500 ಸೀಟುಗಳನ್ನು ವಿಐಪಿಗಳಿಗೆ ಮೀಸಲಿಡಲಾಗಿತ್ತು.
ಇತ್ತೀಚೆಗೆ, ಸರ್ಕಾರ ಮತ್ತು ಸೌದಿ ಅರೇಬಿಯಾ ಹಜ್ 2023 ಗಾಗಿ ಒಪ್ಪಂದಕ್ಕೆ ಸಹಿ ಹಾಕಿದವು. ಇದರಲ್ಲಿ 1,75,000 ಭಾರತೀಯ ಯಾತ್ರಾರ್ಥಿಗಳಿಗೆ ವಾರ್ಷಿಕ ಪ್ರಯಾಣವನ್ನು ಮಾಡಲು ಅವಕಾಶ ನೀಡಲಾಗುತ್ತದೆ.

"2023 ರ ಹಜ್ ಯಾತ್ರೆಗಾಗಿ ಸೌದಿ ಅರೇಬಿಯಾದೊಂದಿಗೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ವರ್ಷ ಭಾರತದಿಂದ 1,75,025 ಯಾತ್ರಿಕರು ಹಜ್ ಯಾತ್ರೆ ಕೈಗೊಳ್ಳಲಿದ್ದಾರೆ" ಎಂದು ಭಾರತದ ಹಜ್ ಸಮಿತಿ ಸದಸ್ಯ ಎರ್ ಐಜಾಜ್ ಹುಸೇನ್ ಹೇಳಿದ್ದಾರೆ. ಭಾರತದಿಂದ ಸುಮಾರು ಎರಡು ಲಕ್ಷ ಯಾತ್ರಿಕರು ಹಜ್ ಯಾತ್ರೆಗೆ ಹೋಗುತ್ತಿರುವುದು ಇದೇ ಮೊದಲು ಎನ್ನಲಾಗಿದೆ.
ಈವರೆಗೆ, ಅತ್ಯಧಿಕವೆಂದರೆ ಭಾರತದಿಂದ 2019 ರಲ್ಲಿ 1.4 ಲಕ್ಷ ಯಾತ್ರಿಕರು ಹಜ್ ತೀರ್ಥಯಾತ್ರೆ ಮಾಡಿದ್ದರು. ನಂತರದ ವರ್ಷದಲ್ಲಿ ಈ ಸಂಖ್ಯೆಯನ್ನು 1.25 ಲಕ್ಷಕ್ಕೆ ಇಳಿಸಲಾಯಿತು. ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ 2020 ರಲ್ಲಿ ಹಜ್ ಯಾತ್ರೆಯನ್ನು ರದ್ದುಗೊಳಿಸಲಾಯಿತು. 2022 ರಲ್ಲಿ 79,237 ಭಾರತೀಯ ಯಾತ್ರಿಕರು ಹಜ್ ಪ್ರಯಾಣ ಮಾಡಿದ್ದರು.

2022 ರಲ್ಲಿ, 7, 79,919 ವಿದೇಶಿ ಯಾತ್ರಾರ್ಥಿಗಳು ಮತ್ತು 1,19,434 ದೇಶೀಯ ಯಾತ್ರಾರ್ಥಿಗಳು ಸೇರಿದಂತೆ ಒಟ್ಟು ಹಜ್ ಯಾತ್ರಿಕರ ಸಂಖ್ಯೆ 8,99,353 ಕ್ಕೆ ಮುಟ್ಟಿತ್ತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications