ಯುದ್ಧೋನ್ಮಾದ ಪೂರ್ವ ಲಡಾಖ್ನಲ್ಲಿ ಎಚ್ಎಎಲ್ನ ಲಘು ಯುದ್ಧ ಹೆಲಿಕಾಪ್ಟರ್ ಕಾರ್ಯಾಚರಣೆ
ಬೆಂಗಳೂರು, ಆಗಸ್ಟ್ 12: ಚೀನಾಗಡಿ ಪ್ರದೇಶ ಪೂರ್ವ ಲಡಾಖ್ನಲ್ಲಿ ಯುದ್ಧೋನ್ಮಾದ ಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ವಿಶ್ವದ ಅತ್ಯಂತ ಲಘು ಯು್ಧ ಹೆಲಿಕಾಪ್ಟರನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.
Recommended Video
ಎಚ್ಎಎಲ್ ನಿಂದ ನಿರ್ಮಾಣವಾಗಿರುವ ಸ್ವದೇಶಿ ವಿಮಾನ ಎಲ್ಸಿಎಚ್ನ್ನು ಇಂದು ಅಧಿಕೃತವಾಗಿ ಕಾರ್ಯಾಚರಣೆಗೆ ಲಡಾಖ್ನಲ್ಲಿ ನಿಯೋಜಿಸಲಾಗಿದೆ.
ಹಗಲು ಹಾಗೂ ರಾತ್ರಿ ಕಾರ್ಯಾರಚರಣ ನಡೆಸಬಹುದಾಗಿರುವ ಈ ಎಲ್ಸಿಎಚ್ನಲ್ಲಿ ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯಬಹುದಾಗಿದೆ.ಹಾಗೂ ಹವಾಮಾನ ವೈಪರಿತ್ಯದ ಸಂದರ್ಭದಲ್ಲಿಯೂ ಶಸ್ತ್ರಾಸ್ತ್ರಗಳನ್ನು ಉಪಯೋಗಿಸಲು ಅವಕಾಶವಿದೆ. ಶತೃಗಳನ್ನು ಗುರಿಯಾಗಿಸಿಕೊಂಡು ಈ ಹೆಲಿಕಾಪ್ಟರ್ ನಲ್ಲಿ ಶಸ್ತ್ರಾಸ್ತ್ರಗಳ ಪ್ರಯೋಗ ನಡೆಸಲಾಗುತ್ತದೆ.

ಭಾರತೀಯ ಭೂ ಸೇನೆ ಹಾಗೂ ವಾಯುಸೇನೆಗೆ 110 ಎಲ್ಸಿಎಚ್ಗಳ ಅಗತ್ಯವಿದ್ದು, ಈಗಾಗಲೇ 15 ಎಲ್ಸಿಎಚ್ ನಿರ್ಮಾಣಕ್ಕೆ ಆದೇಶ ಹೊರಡಿಸಲಾಗಿದೆ.
ಆರಂಭಿಕ ಹಂತವಾಗಿ ಎರಡು ಎಲ್ಸಿಎಎಚ್ಗಳನ್ನು ಸೇನೆಗೆ ನೀಡಲಾಗಿದೆ. ಈ ಕುರಿತು ಮಾತನಾಡಿರುವ ಎಚ್ಎಎಲ್ ಸಿಎಂಡಿ ಮಾಧವನ್, ಸೇನೆಯ ಅಗತ್ಯತೆಗೆ ತಕ್ಕಂತೆ ವಿಶ್ವದ ಅತ್ಯಂತ ಲಘು ಹೆಲಿಕಾಪ್ಟರ್ ನಿರ್ಮಿಸಲಾಗಿದೆ. ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತವನ್ನು ಸಾಕಾರಗೊಳಿಸುವ ಉದ್ದೇಶ ಹೊಂದಲಾಗಿದೆ.
ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯಲ್ಲಿ ಉದ್ವಿಗ್ನ ಸ್ಥಿತಿಯನ್ನು ಜೀವಂತವಾಗಿಡಲು ಚೀನಾ ಯತ್ನಿಸುತ್ತಿದೆ ಎಂದು ಹೇಳಿರುವ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ದೀರ್ಘಾವಧಿಯ ಯುದ್ಧ ಸ್ಥಿತಿಯ ವಾತಾವರಣವನ್ನು ಎದುರಿಸಲು ಭಾರತೀಯ ಸೇನೆ ಸಜ್ಜಾಗಿದೆ ಎಂದು ಅರೆಸೇನಾಪಡೆ ತಂಡಕ್ಕೆ ಹೇಳಿದ್ದಾರೆ.
ದೇಶದ ಅರೆಸೇನಾಪಡೆ ತಂಡಕ್ಕೆ ಗಡಿಯಲ್ಲಿನ ಇಂದಿನ ಪರಿಸ್ಥಿತಿ ಬಗ್ಗೆ ವಿವರಿಸಿದ ಅವರು, ಗಡಿಯಿಂದ ಸೇನೆಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವ ಪ್ರಕ್ರಿಯೆಗೆ ಸಮಯ ಹಿಡಿಯಬಹುದು. ಅವಕಾಶದ ಕ್ಷಣಕ್ಕಾಗಿ ಚೀನಾ ಎದುರು ನೋಡುತ್ತಿರುವುದರಿಂದ ಸೇನೆ ನಿಲುಗಡೆ ಮುಂದೆ ಹೋಗಲೂಬಹುದು.
ಚೀನಾದ ಸೇನಾಪಡೆಯನ್ನು ಬೃಹತ್ ಪ್ರಮಾಣದಲ್ಲಿ ಅಲ್ಲಲ್ಲಿ ನಿಯೋಜಿಸಿರುವುದರಿಂದ ಮತ್ತು ಸೇನಾಪಡೆಯನ್ನು ಹಿಂತೆಗೆದುಕೊಳ್ಳುವ ಮಾತುಕತೆಯಲ್ಲಿ ತನ್ನ ಬೇಡಿಕೆಗಳು ಈಡೇರದಿರುವುದರಿಂದ ಚೀನಾ ಈ ತಕ್ಷಣವೇ ಸೇನೆಯನ್ನು ವಾಪಸ್ ಪಡೆಯಬಹುದು ಎಂದು ಹೇಳಲು ಸಾಧ್ಯವಿಲ್ಲ ಎಂದು ರಕ್ಷಣಾ ಪಡೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications