ಯುದ್ಧೋನ್ಮಾದ ಪೂರ್ವ ಲಡಾಖ್ನಲ್ಲಿ ಎಚ್ಎಎಲ್ನ ಲಘು ಯುದ್ಧ ಹೆಲಿಕಾಪ್ಟರ್ ಕಾರ್ಯಾಚರಣೆ
ಬೆಂಗಳೂರು, ಆಗಸ್ಟ್ 12: ಚೀನಾಗಡಿ ಪ್ರದೇಶ ಪೂರ್ವ ಲಡಾಖ್ನಲ್ಲಿ ಯುದ್ಧೋನ್ಮಾದ ಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ವಿಶ್ವದ ಅತ್ಯಂತ ಲಘು ಯು್ಧ ಹೆಲಿಕಾಪ್ಟರನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.
Recommended Video
ಎಚ್ಎಎಲ್ ನಿಂದ ನಿರ್ಮಾಣವಾಗಿರುವ ಸ್ವದೇಶಿ ವಿಮಾನ ಎಲ್ಸಿಎಚ್ನ್ನು ಇಂದು ಅಧಿಕೃತವಾಗಿ ಕಾರ್ಯಾಚರಣೆಗೆ ಲಡಾಖ್ನಲ್ಲಿ ನಿಯೋಜಿಸಲಾಗಿದೆ.
ಹಗಲು ಹಾಗೂ ರಾತ್ರಿ ಕಾರ್ಯಾರಚರಣ ನಡೆಸಬಹುದಾಗಿರುವ ಈ ಎಲ್ಸಿಎಚ್ನಲ್ಲಿ ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯಬಹುದಾಗಿದೆ.ಹಾಗೂ ಹವಾಮಾನ ವೈಪರಿತ್ಯದ ಸಂದರ್ಭದಲ್ಲಿಯೂ ಶಸ್ತ್ರಾಸ್ತ್ರಗಳನ್ನು ಉಪಯೋಗಿಸಲು ಅವಕಾಶವಿದೆ. ಶತೃಗಳನ್ನು ಗುರಿಯಾಗಿಸಿಕೊಂಡು ಈ ಹೆಲಿಕಾಪ್ಟರ್ ನಲ್ಲಿ ಶಸ್ತ್ರಾಸ್ತ್ರಗಳ ಪ್ರಯೋಗ ನಡೆಸಲಾಗುತ್ತದೆ.

ಭಾರತೀಯ ಭೂ ಸೇನೆ ಹಾಗೂ ವಾಯುಸೇನೆಗೆ 110 ಎಲ್ಸಿಎಚ್ಗಳ ಅಗತ್ಯವಿದ್ದು, ಈಗಾಗಲೇ 15 ಎಲ್ಸಿಎಚ್ ನಿರ್ಮಾಣಕ್ಕೆ ಆದೇಶ ಹೊರಡಿಸಲಾಗಿದೆ.
ಆರಂಭಿಕ ಹಂತವಾಗಿ ಎರಡು ಎಲ್ಸಿಎಎಚ್ಗಳನ್ನು ಸೇನೆಗೆ ನೀಡಲಾಗಿದೆ. ಈ ಕುರಿತು ಮಾತನಾಡಿರುವ ಎಚ್ಎಎಲ್ ಸಿಎಂಡಿ ಮಾಧವನ್, ಸೇನೆಯ ಅಗತ್ಯತೆಗೆ ತಕ್ಕಂತೆ ವಿಶ್ವದ ಅತ್ಯಂತ ಲಘು ಹೆಲಿಕಾಪ್ಟರ್ ನಿರ್ಮಿಸಲಾಗಿದೆ. ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತವನ್ನು ಸಾಕಾರಗೊಳಿಸುವ ಉದ್ದೇಶ ಹೊಂದಲಾಗಿದೆ.
ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯಲ್ಲಿ ಉದ್ವಿಗ್ನ ಸ್ಥಿತಿಯನ್ನು ಜೀವಂತವಾಗಿಡಲು ಚೀನಾ ಯತ್ನಿಸುತ್ತಿದೆ ಎಂದು ಹೇಳಿರುವ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ದೀರ್ಘಾವಧಿಯ ಯುದ್ಧ ಸ್ಥಿತಿಯ ವಾತಾವರಣವನ್ನು ಎದುರಿಸಲು ಭಾರತೀಯ ಸೇನೆ ಸಜ್ಜಾಗಿದೆ ಎಂದು ಅರೆಸೇನಾಪಡೆ ತಂಡಕ್ಕೆ ಹೇಳಿದ್ದಾರೆ.
ದೇಶದ ಅರೆಸೇನಾಪಡೆ ತಂಡಕ್ಕೆ ಗಡಿಯಲ್ಲಿನ ಇಂದಿನ ಪರಿಸ್ಥಿತಿ ಬಗ್ಗೆ ವಿವರಿಸಿದ ಅವರು, ಗಡಿಯಿಂದ ಸೇನೆಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವ ಪ್ರಕ್ರಿಯೆಗೆ ಸಮಯ ಹಿಡಿಯಬಹುದು. ಅವಕಾಶದ ಕ್ಷಣಕ್ಕಾಗಿ ಚೀನಾ ಎದುರು ನೋಡುತ್ತಿರುವುದರಿಂದ ಸೇನೆ ನಿಲುಗಡೆ ಮುಂದೆ ಹೋಗಲೂಬಹುದು.
ಚೀನಾದ ಸೇನಾಪಡೆಯನ್ನು ಬೃಹತ್ ಪ್ರಮಾಣದಲ್ಲಿ ಅಲ್ಲಲ್ಲಿ ನಿಯೋಜಿಸಿರುವುದರಿಂದ ಮತ್ತು ಸೇನಾಪಡೆಯನ್ನು ಹಿಂತೆಗೆದುಕೊಳ್ಳುವ ಮಾತುಕತೆಯಲ್ಲಿ ತನ್ನ ಬೇಡಿಕೆಗಳು ಈಡೇರದಿರುವುದರಿಂದ ಚೀನಾ ಈ ತಕ್ಷಣವೇ ಸೇನೆಯನ್ನು ವಾಪಸ್ ಪಡೆಯಬಹುದು ಎಂದು ಹೇಳಲು ಸಾಧ್ಯವಿಲ್ಲ ಎಂದು ರಕ್ಷಣಾ ಪಡೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications