ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ : ಭೋಪಾಲ್ ಅತ್ಯಾಚಾರ ಸಂತ್ರಸ್ತೆ
ಭೋಪಾಲ್, ನವೆಂಬರ್ 05 : "ಅತ್ಯಾಚಾರಿಗಳನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಬಾರದು. ಅವರನ್ನು ಬೀದಿಯಲ್ಲಿ ಸಾರ್ವಜನಿಕರೆದಿರುವ ಗಲ್ಲಿಗೇರಿಸಬೇಕು" ಎಂದು 19 ವರ್ಷದ ಅತ್ಯಾಚಾರ ಸಂತ್ರಸ್ತೆ ಆಕ್ರೋಶ ವ್ಯಕ್ತಪಡಿಸಿದ್ದಾಳೆ.
ಯುಪಿಎಸ್ಸಿ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯುವತಿಯ ಕೈಕಾಲು ಕಟ್ಟಿಹಾಕಿ, ಆಕೆಯನ್ನು ವಿವಸ್ತ್ರಗೊಳಿಸಿ, ಸೇತುವೆಯ ಕೆಳಗಡೆಯಲ್ಲಿ ನಾಲ್ವರು ಕಾಮುಕರು ಸತತ ಮೂರು ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರವೆಸಗಿದ್ದರು.
ಮಧ್ಯಪ್ರದೇಶ ಅಮೆರಿಕ, ಯುನೈಟೆಡ್ ಕಿಂಗಡಂಗಿಂತ ಉತ್ತಮವಾಗಿದೆ ಎಂದು ಜಂಬ ಕೊಚ್ಚಿಕೊಳ್ಳುತ್ತಿರುವ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಈ ಪ್ರಕರಣ ಭಾರೀ ಸವಾಲಿನದಾಗಿ ಪರಿಣಮಿಸಿದೆ ಮತ್ತು ಸಾಕಷ್ಟು ಮುಖಭಂಗ ಉಂಟು ಮಾಡಿದೆ.

ಈ ಘಟನೆಯ ಬಗ್ಗೆ ಮತ್ತಷ್ಟು ವಿವರ ಕೊಟ್ಟಿರುವ ಯುವತಿ, ಪೊಲೀಸರ ವರ್ತನೆ ತುಂಬಾ ಕೆಟ್ಟದಾಗಿತ್ತು. ನಾವು ದೂರು ನೀಡಲು ಒಂದು ಪೊಲೀಸ್ ಠಾಣೆಯಿಂದ ಮತ್ತೊಂದಕ್ಕೆ ಅಲೆದೆವು. ಹಬೀಬ್ಗಂಜ್ ಸಬ್ ಇನ್ಸ್ಪೆಕ್ಟರ್ ಹೊರತಾಗಿ ಯಾರೂ ಸಹಕರಿಸಲಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ಅಂದು ಆಗಿದ್ದೇನು? : ಭೋಪಾಲ್ ನಲ್ಲಿ ಯುಪಿಎಸ್ಸಿ ತರಬೇತಿ ಮುಗಿಸಿಕೊಂಡು ಸಂಜೆ 7 ಗಂಟೆಯ ಸಮಯದಲ್ಲಿ ಮನೆಗೆ ತೆರಳುತ್ತಿದ್ದಾಗ ನಾಲ್ವರು ಆಕೆಯನ್ನು ಎತ್ತಿಹಾಕಿಕೊಂಡು ಸೇತುವೆ ಕೆಳಗಡೆಯಲ್ಲಿ ಒಬ್ಬರಾದನಂತರ ಮತ್ತೊಬ್ಬರು ಆಕೆಯ ಮೇಲೆ ಎರಗಿದ್ದರು.
ಯುವತಿಯ ಪೋಷಕರು ಪೊಲೀಸ್ ಇಲಾಖೆಯಲ್ಲಿದ್ದರೂ ಅತ್ಯಾಚಾರದ ಬಗ್ಗೆ ದೂರು ನೀಡಲು ಹೋದಾಗ, 'ನೀನು ಸಿನೆಮಾ ಕಥೆ ಹೇಳುತ್ತಿದ್ದೀಯಾ' ಎಂದು ಹೇಷವರದಿಂದ ನಕ್ಕಿದ್ದ ಪೊಲೀಸರು ಆಕೆ ಕೊಟ್ಟ ದೂರು ಸ್ವೀಕರಿಸಿರಲಿಲ್ಲ.
ಕೊನೆಗೆ, ಆಕೆಯೇ ಧೈರ್ಯ ಮಾಡಿ ಇಬ್ಬರನ್ನು ಹಿಡಿದುಕೊಡುವಲ್ಲಿ ಯಶಸ್ವಿಯಾಗಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಮೂವರನ್ನು ಬಂಧಿಸಲಾಗಿದ್ದು, ಮತ್ತೋರ್ವ ತಲೆಮರೆಸಿಕೊಂಡಿದ್ದಾನೆ.
ಅತ್ಯಾಚಾರಿಗಳಿಗೆ ಅತ್ಯುಗ್ರ ಶಿಕ್ಷೆ ನೀಡುವುದಾಗಿ ಮುಖ್ಯಮಂತ್ರಿ ಚೌಹಾಣ್ ಅವರು ಕೂಡ ವಾಗ್ದಾನ ನೀಡಿದ್ದಾರೆ. ಯುವತಿ ದೂರು ನೀಡಲು ಹೋದರೂ ದೂರು ಸ್ವೀಕರಿಸಿದ ಸಬ್ ಇನ್ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ.
ಆದರೆ, ಈ ಪ್ರಕರಣಕ್ಕೆ ಸಾರ್ವಜನಿಕರ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಅತ್ಯಾಚಾರಿಗಳು ಬಂಧಿತರಾದರೇನಂತೆ, ಅವರಿಗೆ ಬೇಗನೆ ಜಾಮೀನು ಸಿಗುತ್ತಿದೆ. ಮೊದಲಿಗೆ ನಮ್ಮ ಕಾನೂನು ಬದಲಾಗಬೇಕು, ಅತ್ಯಾಚಾರಿಗಳನ್ನು ಗಲ್ಲಿಯಲ್ಲಿ ನಿಲ್ಲಿಸಿ ಗಲ್ಲಿಗೆ ಹಾಕಬೇಕು ಎಂದು ಜನರು ಕಿಡಿ ಕಾರುತ್ತಿದ್ದಾರೆ.
ಅತ್ಯಾಚಾರಿಗಳ ಮುಖವನ್ನೇಕೆ ಮುಚ್ಚುತ್ತೀರಿ? ಅವರ ಹೊಸಲು ಮುಖವನ್ನು ಬಹಿರಂಗಪಡಿಸಿ. ಅವರು ಯಾರೆಂದು ತಿಳಿಯಲು ನಮಗೆ ಸಂಪೂರ್ಣ ಅಧಿಕಾರವಿದೆ. ಅವರನ್ನು ಬಹಿರಂಗವಾಗಿ ನಿಲ್ಲಿಸಿ ಅವರನ್ನು ಅವಮಾನಿಸಿದರೆ ಇಂಥ ಹೀನ ಕೃತ್ಯಗಳು ನಿಲ್ಲುತ್ತವೆ ಎಂದು ಮತ್ತೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications