ದೆಹಲಿಗೆ ಹೊರಟ ಯೋಧ ಹನುಮಂತಪ್ಪ ಕುಟುಂಬದವರು
ನವದೆಹಲಿ, ಫೆಬ್ರವರಿ 09 : ಸಿಯಾಚಿನ್ನಲ್ಲಿ ಪವಾಡ ಸದೃಶ್ಯ ರೀತಿಯಲ್ಲಿ ಬದುಕುಳಿದ ಕರ್ನಾಟಕದ ಯೋಧ ಹನುಮಂತಪ್ಪ ಕೊಪ್ಪದ ಅವರು ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಯೋಧನ ಕುಟುಂಬ ಸದಸ್ಯರು ಧಾರವಾಡದಿಂದ ಹೊರಟಿದ್ದು, ಸಂಜೆಯ ವೇಳೆಗೆ ದೆಹಲಿ ತಲುಪುವ ನಿರೀಕ್ಷೆ ಇದೆ.
ಆರು ದಿನಗಳಿಂದ 25 ಅಡಿ ಆಳದ ಹಿಮದಲ್ಲಿ ಸಿಲುಕಿದ್ದ ಹನುಮಂತಪ್ಪ ಕೊಪ್ಪದ ಅವರನ್ನು ಸೋಮವಾರ ಪತ್ತೆ ಹಚ್ಚಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಅವರರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಆರ್.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. [ಹನುಮಂತಪ್ಪ ಆರೋಗ್ಯ ವಿಚಾರಿಸಿದ ಮೋದಿ]
ದೆಹಲಿಗೆ ಹೊರಟ ಕುಟುಂಬ ಸದಸ್ಯರು : ಹನುಮಂತಪ್ಪ ಕೊಪ್ಪದ ಅವರ ಪತ್ನಿ, ಪುತ್ರಿ ಸೇರಿದಂತೆ ಐವರು ಕುಟುಂಬ ಸದಸ್ಯರು ದೆಹಲಿಗೆ ಆಗಮಿಸಲಿದ್ದಾರೆ. ಹನುಮಂತಪ್ಪ ಕೊಪ್ಪದ ಅವರ ಸಂಬಂಧಿಕರಾದ ಈಶ್ವರ ಕೊಪ್ಪದ ಅವರು ಈ ಕುರಿತು ಒನ್ ಇಂಡಿಯಾ ಜೊತೆ ಮಾತನಾಡಿದ್ದು, ಧಾರವಾಡದ ಶಾಸಕರು ಕುಟುಂಬ ಸದಸ್ಯರು ದೆಹಲಿಗೆ ತೆರಳಲು ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. [ಸಿಯಾಚಿನ್ ಪವಾಡ: ಹನುಮಂತಪ್ಪ ಬಗ್ಗೆ ಅವರ ಅವ್ವ ಹೇಳಿದ್ದೇನು?]
Wife of Lance Naik Hanumanthappa (found in Siachen after 6 days of avalanche) goes to a temple in Dharwad, Karnataka pic.twitter.com/pCEKP0zPUy
— ANI (@ANI_news) February 9, 2016
'ಹನುಮಂತಪ್ಪ ಕೊಪ್ಪದ ಅವರ ಪತ್ನಿ, ಪುತ್ರಿ ನೇತ್ರಾ ಅವರು ಧಾಡವಾಡಕ್ಕೆ ಆಗಮಿಸುತ್ತಿದ್ದು, ಅಲ್ಲಿಂದ ಕಾರಿನ ಮೂಲಕ ಗೋವಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿಂದ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ. ಸಂಜೆ ವೇಳೆಗೆ ಅವರು ದೆಹಲಿ ತಲುಪುವ ಸಾಧ್ಯತೆ ಇದೆ' ಎಂದು ಈಶ್ವರ ಕೊಪ್ಪದ ಹೇಳಿದ್ದಾರೆ.['ಅಮರ' ಯೋಧ ಹನುಮಂತಪ್ಪನ ಅಂತಿಮ ಯಾತ್ರೆಯ ಚಿತ್ರಗಳು]
Family members of Lance Naik Hanumanthappa (found in Siachen after 6 days of the avalanche) in Dharwad, Karnataka. pic.twitter.com/WD3x26C449
— ANI (@ANI_news) February 9, 2016
ಟ್ವಿಟ್ ಮಾಡಿ ರಕ್ಷಣಾ ಸಚಿವ : ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಅವರು ಟ್ವಿಟ್ ಮಾಡಿದ್ದು, 'ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ, ನನ್ನ ಹಾರೈಕೆ ಅವರಿಗೆ ಇದೆ' ಎಂದು ತಿಳಿಸಿದ್ದಾರೆ.
My prayers are with Lance Naik Hanumanthappa who miraculously survived the avalanche at Siachen.
— Manohar Parrikar (@manoharparrikar) February 9, 2016
ಹಿಮಪಾತ ಸಂಭವಿಸಿತ್ತು : ಫೆ.3ರಂದು ಮದ್ರಾಸ್ ರೆಜಿಮೆಂಟ್ಗೆ ಸೇರಿದ 10 ಯೋಧರು 19 ಸಾವಿರ ಅಡಿಗಳ ಎತ್ತರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಭಾರೀ ಹಿಮಪಾತ ಸಂಭವಿಸಿತ್ತು. ಆಗ ಅಲ್ಲಿದ್ದ ಯೋಧರು ಹಿಮದಲ್ಲಿ ಸಿಲುಕಿದ್ದರು. ಕರ್ನಾಟಕದ ಹಾಸನದ ತೇಜೂರಿನ ಟಿ.ಟಿ ನಾಗೇಶ್, ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಪಿ.ಎನ್. ಮಹೇಶ್ ಮತ್ತು ಧಾರವಾಡದ ಹನುಮಂತಪ್ಪ ಕೊಪ್ಪದ ಅವರು ಈ ಹಿಮಪಾತದಲ್ಲಿ ಸಿಲುಕಿದ್ದರು. ಇವರ ಪೈಕಿ ನಾಗೇಶ್ ಮತ್ತು ಮಹೇಶ್ ಮೃತಪಟ್ಟಿದ್ದಾರೆ.
-
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ













Click it and Unblock the Notifications