ದೆಹಲಿಗೆ ಹೊರಟ ಯೋಧ ಹನುಮಂತಪ್ಪ ಕುಟುಂಬದವರು
ನವದೆಹಲಿ, ಫೆಬ್ರವರಿ 09 : ಸಿಯಾಚಿನ್ನಲ್ಲಿ ಪವಾಡ ಸದೃಶ್ಯ ರೀತಿಯಲ್ಲಿ ಬದುಕುಳಿದ ಕರ್ನಾಟಕದ ಯೋಧ ಹನುಮಂತಪ್ಪ ಕೊಪ್ಪದ ಅವರು ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಯೋಧನ ಕುಟುಂಬ ಸದಸ್ಯರು ಧಾರವಾಡದಿಂದ ಹೊರಟಿದ್ದು, ಸಂಜೆಯ ವೇಳೆಗೆ ದೆಹಲಿ ತಲುಪುವ ನಿರೀಕ್ಷೆ ಇದೆ.
ಆರು ದಿನಗಳಿಂದ 25 ಅಡಿ ಆಳದ ಹಿಮದಲ್ಲಿ ಸಿಲುಕಿದ್ದ ಹನುಮಂತಪ್ಪ ಕೊಪ್ಪದ ಅವರನ್ನು ಸೋಮವಾರ ಪತ್ತೆ ಹಚ್ಚಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಅವರರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಆರ್.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. [ಹನುಮಂತಪ್ಪ ಆರೋಗ್ಯ ವಿಚಾರಿಸಿದ ಮೋದಿ]
ದೆಹಲಿಗೆ ಹೊರಟ ಕುಟುಂಬ ಸದಸ್ಯರು : ಹನುಮಂತಪ್ಪ ಕೊಪ್ಪದ ಅವರ ಪತ್ನಿ, ಪುತ್ರಿ ಸೇರಿದಂತೆ ಐವರು ಕುಟುಂಬ ಸದಸ್ಯರು ದೆಹಲಿಗೆ ಆಗಮಿಸಲಿದ್ದಾರೆ. ಹನುಮಂತಪ್ಪ ಕೊಪ್ಪದ ಅವರ ಸಂಬಂಧಿಕರಾದ ಈಶ್ವರ ಕೊಪ್ಪದ ಅವರು ಈ ಕುರಿತು ಒನ್ ಇಂಡಿಯಾ ಜೊತೆ ಮಾತನಾಡಿದ್ದು, ಧಾರವಾಡದ ಶಾಸಕರು ಕುಟುಂಬ ಸದಸ್ಯರು ದೆಹಲಿಗೆ ತೆರಳಲು ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. [ಸಿಯಾಚಿನ್ ಪವಾಡ: ಹನುಮಂತಪ್ಪ ಬಗ್ಗೆ ಅವರ ಅವ್ವ ಹೇಳಿದ್ದೇನು?]
Wife of Lance Naik Hanumanthappa (found in Siachen after 6 days of avalanche) goes to a temple in Dharwad, Karnataka pic.twitter.com/pCEKP0zPUy
— ANI (@ANI_news) February 9, 2016
'ಹನುಮಂತಪ್ಪ ಕೊಪ್ಪದ ಅವರ ಪತ್ನಿ, ಪುತ್ರಿ ನೇತ್ರಾ ಅವರು ಧಾಡವಾಡಕ್ಕೆ ಆಗಮಿಸುತ್ತಿದ್ದು, ಅಲ್ಲಿಂದ ಕಾರಿನ ಮೂಲಕ ಗೋವಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿಂದ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ. ಸಂಜೆ ವೇಳೆಗೆ ಅವರು ದೆಹಲಿ ತಲುಪುವ ಸಾಧ್ಯತೆ ಇದೆ' ಎಂದು ಈಶ್ವರ ಕೊಪ್ಪದ ಹೇಳಿದ್ದಾರೆ.['ಅಮರ' ಯೋಧ ಹನುಮಂತಪ್ಪನ ಅಂತಿಮ ಯಾತ್ರೆಯ ಚಿತ್ರಗಳು]
Family members of Lance Naik Hanumanthappa (found in Siachen after 6 days of the avalanche) in Dharwad, Karnataka. pic.twitter.com/WD3x26C449
— ANI (@ANI_news) February 9, 2016
ಟ್ವಿಟ್ ಮಾಡಿ ರಕ್ಷಣಾ ಸಚಿವ : ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಅವರು ಟ್ವಿಟ್ ಮಾಡಿದ್ದು, 'ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ, ನನ್ನ ಹಾರೈಕೆ ಅವರಿಗೆ ಇದೆ' ಎಂದು ತಿಳಿಸಿದ್ದಾರೆ.
My prayers are with Lance Naik Hanumanthappa who miraculously survived the avalanche at Siachen.
— Manohar Parrikar (@manoharparrikar) February 9, 2016
ಹಿಮಪಾತ ಸಂಭವಿಸಿತ್ತು : ಫೆ.3ರಂದು ಮದ್ರಾಸ್ ರೆಜಿಮೆಂಟ್ಗೆ ಸೇರಿದ 10 ಯೋಧರು 19 ಸಾವಿರ ಅಡಿಗಳ ಎತ್ತರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಭಾರೀ ಹಿಮಪಾತ ಸಂಭವಿಸಿತ್ತು. ಆಗ ಅಲ್ಲಿದ್ದ ಯೋಧರು ಹಿಮದಲ್ಲಿ ಸಿಲುಕಿದ್ದರು. ಕರ್ನಾಟಕದ ಹಾಸನದ ತೇಜೂರಿನ ಟಿ.ಟಿ ನಾಗೇಶ್, ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಪಿ.ಎನ್. ಮಹೇಶ್ ಮತ್ತು ಧಾರವಾಡದ ಹನುಮಂತಪ್ಪ ಕೊಪ್ಪದ ಅವರು ಈ ಹಿಮಪಾತದಲ್ಲಿ ಸಿಲುಕಿದ್ದರು. ಇವರ ಪೈಕಿ ನಾಗೇಶ್ ಮತ್ತು ಮಹೇಶ್ ಮೃತಪಟ್ಟಿದ್ದಾರೆ.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ













Click it and Unblock the Notifications