ಗೂಗಲ್ 20ರ ಹುಟ್ಟುಹಬ್ಬದ ಸಂಭ್ರಮಕ್ಕೆ ವಿಶೇಷ ವಿಡಿಯೋ
ಬೆಂಗಳೂರು, ಸೆಪ್ಟೆಂಬರ್ 27: ಸರ್ಚ್ ಇಂಜಿನ್ ಲೋಕದ ದಿಗ್ಗಜ, ಅಂತರ್ಜಾಲದಲ್ಲಿ ಹಲವರ ಪಾಲಿನ ದೇವರು ಗೂಗಲ್ ಸಂಸ್ಥೆ ಇಂದು (ಸೆ.27) ತನ್ನ 20ನೇ ಹುಟ್ಟುಹಬ್ಬವನ್ನು ಹೊಸ ಗೂಗಲ್ ಡೂಡ್ಲ್ ಮೂಲಕ ಆಚರಿಸುತ್ತಿದೆ. ಈ ಬಾರಿ ಡೂಡ್ಲ್ ವಿಶೇಷವಾಗಿದ್ದು, ಸರ್ಚ್ ಇಂಜಿನ್ ರೂಪುಗೊಳ್ಳಲು ನೆರವಾದವರನ್ನು ಸ್ಮರಿಸಲಾಗಿದೆ.
ಆಹಾರ, ಭಾಷೆ, ಗ್ರಹ, ನೃತ್ಯ ಹೀಗೆ ವಿವಿಧ ವಿಷಯಗಳು ಅದರಲ್ಲೂ ಇದು ಹೇಗೆ? ಎಂಬ how to ಸರಣಿ, ಟೆಕ್ಕಿಗಳಿಗೆ ಕೋಡಿಂಗ್, ಸಂಚಾರಿಗಳಿಗೆ ಮಾರ್ಗದರ್ಶಿ ಮ್ಯಾಪ್ ಆಗಿ, ಸುದ್ದಿ, ವಿಡಿಯೋ ಹೀಗೆ ಬಗೆ ಬಗೆ ಸೌಲಭ್ಯಗಳನ್ನು ನೀಡುವ ಅಲ್ಲಾದ್ದೀನನ ಜೀನಿಯಂತೆ ಗೂಗಲ್ ತೋರುತ್ತದೆ.
ಗೂಗಲ್ ಈಗ 150 ಭಾಷೆಗಳಲ್ಲಿ, 190ಕ್ಕೂ ಅಧಿಕ ದೇಶಗಳಲ್ಲಿ ಸಕ್ರಿಯವಾಗಿದೆ. ಅಂತರ್ಜಾಲ ಸಂಬಂಧಿತ ಅನೇಕಾನೇಕ ಸೇವೆ ಹಾಗೂ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿದ ಕೀರ್ತಿ ಗೂಗಲ್ ಗೆ ಸಲ್ಲುತ್ತದೆ.

ಗೂಗಲ್ ಹುಟ್ಟುಹಬ್ಬದ ದಿನಾಂಕವೂ ಕುತೂಹಲಕಾರಿಯಾಗಿದೆ. 2005ರ ತನಕ ಸೆ.7ರಂದು ಗೂಗಲ್ ತನ್ನ ಹುಟ್ಟುಹಬ್ಬ ದಿನವನ್ನಾಗಿ ಆಚರಿಸುತ್ತಾ ಬಂದಿತ್ತು. ನಂತರ ಸೆ.27ಕ್ಕೆ ಇದು ಬದಲಾಯಿತು.
ಸೆ.4, 1998ರಲ್ಲಿ ಸ್ಟಾಡ್ ಫೋರ್ಡ್ ನ ಸ್ನಾತಕೋತ್ತರ ವಿದ್ಯಾರ್ಥಿಗಳಾದ ಲ್ಯಾರಿ ಪೇಜ್ ಹಾಗೂ ಸರ್ಗೆಬ್ರಿನ್ ಅವರು ಇಂಟೆರ್ ನೆಟ್ ನಲ್ಲಿ ಹುಡುಕುವಿಕೆಯನ್ನು ಸುಧಾರಣೆಗೊಳಿಸಲು ಗೂಗಲ್ ಎಂಬ ಹೊಸ ಸಂಸ್ಥೆ ಹುಟ್ಟುಹಾಕಿದರು. ಹೊಸ ಡೂಡ್ಲ್ ಚಿತ್ರದೊಂದಿಗೆ ಸೆ.27 ರಂದು ತನ್ನ ವಾರ್ಷಿಕೋತ್ಸವ ಗೂಗಲ್ ಆಚರಿಸುತ್ತದೆ
ಡೂಡಲ್ ಸ್ಪರ್ಧೆ: ವಿದ್ಯಾರ್ಥಿಗಳಿಗೆ ಅನೇಕ ಸ್ಪರ್ಧೆಗಳನ್ನು ಆಯೋಜಿಸುತ್ತಾ ಬಂದಿರುವ ಗೂಗಲ್, ಖ್ಯಾತ ನಾಮರ ಹುಟ್ಟುಹಬ್ಬ, ಹಬ್ಬ ಹರಿದಿನ, ವಾರ್ಷಿಕೋತ್ಸವ ದಿನಗಳಲ್ಲಿ ಗೂಗಲ್ ಲೋಗೋವನ್ನು ಅಲಂಕರಿಸಿ ಪ್ರದರ್ಶಿಸುತ್ತದೆ. ಗೂಗಲ್ ಲೋಗೋವನ್ನು ಕಲಾತ್ಮಕವಾಗಿ ರೂಪಿಸುವುದಕ್ಕೆ ಡೂಡಲ್ಸ್ ಎನ್ನಲಾಗುತ್ತದೆ.
ಪ್ರತಿ ವರ್ಷ ಶಾಲಾ ಮಕ್ಕಳಿಗೆ ಡೂಡ್ಲ್ ರಚನೆ ಸ್ಪರ್ಧೆ ಏರ್ಪಡಿಸಲಾಗುತ್ತದೆ. ಭಾರತ ಸೇರಿದಂತೆ ವಿಶ್ವದ ಅನೇಕ ವಿದ್ಯಮಾನಗಳು, ಐತಿಹಾಸಿಕ ದಿನಗಳು, ಹಬ್ಬ ಹರಿದಿನಗಳು, ಆಚರಣೆಗಳ ಸಂದರ್ಭದಲ್ಲಿ ಗೂಗಲ್ ತನ್ನ ಡೂಡ್ಲ್ ರೇಖಾಚಿತ್ರದ ಮೂಲಕ ಸಾಧಕರನ್ನು ಸ್ಮರಿಸುವ ಪ್ರಕ್ರಿಯೆಯನ್ನು ಮುಂದುವರೆಸಿಕೊಂಡು ಬಂದಿದೆ. 1998ರಿಂದ ಸುಮಾರು 900ಕ್ಕೂ ಹೆಚ್ಚು ಡೂಡ್ಲ್ ಗಳನ್ನು ರಚಿಸಿ ಪ್ರದರ್ಶಿಸಲಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications