ಹಾರ್ವರ್ಡ್ ವಿವಿ ಮತ್ತು ಹಾರ್ಡ್ ವರ್ಕ್: ಪ್ರಧಾನಿ ಮೋದಿ ವಾಕ್ ಪ್ರಹಾರ
ನೋಟು ನಿಷೇಧವನ್ನು ಕಟುವಾದ ಶಬ್ದದಲ್ಲಿ ಟೀಕಿಸಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ವಿರುದ್ದ ವಾಕ್ ಪ್ರಹಾರ ನಡೆಸಿರುವ ಮೋದಿ, ಹಾರ್ವರ್ಡ್ ವಿಶ್ವವಿದ್ಯಾಲಯದ ಯೋಚನೆಗಿಂತ, ಹಾರ್ಡ್ ವರ್ಕ್ ಮುಖ್ಯ ಎಂದು ಲೇವಡಿ.
ಮಹಾರಾಜಗಂಜ್, ಮಾ 1 (ಪಿಟಿಐ) : ಕೊನೆಯ ಎರಡು ಹಂತದ ವಿಧಾನಸಭಾ ಚುನಾವಣೆ ಬಾಕಿಯಿರುವ ಉತ್ತರಪ್ರದೇಶದಲ್ಲಿ, ಪ್ರಧಾನಿ ಮೋದಿ ನೊಬೆಲ್ ಪುರಷ್ಕೃತ ಅಮಾರ್ತ್ಯ ಸೇನ್ ಮತ್ತು ರಾಹುಲ್ ಗಾಂಧಿ ವಿರುದ್ದ ಹರಿಹಾಯ್ದಿದ್ದಾರೆ.
ನೋಟು ನಿಷೇಧವನ್ನು ಕಟುವಾದ ಶಬ್ದದಲ್ಲಿ ಟೀಕಿಸಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ವಿರುದ್ದ ವಾಕ್ ಪ್ರಹಾರ ನಡೆಸಿರುವ ಮೋದಿ, ಹಾರ್ವರ್ಡ್ ವಿಶ್ವವಿದ್ಯಾಲಯದ ಯೋಚನೆಗಿಂತ, ಹಾರ್ಡ್ ವರ್ಕ್ ಮುಖ್ಯ ಎಂದು ಲೇವಡಿ ಮಾಡಿದ್ದಾರೆ.
ಬುಧವಾರ (ಮಾ 1) ಚುನಾವಣಾ ಸಭೆಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ, ಒಂದು ದಿನದ ಹಿಂದೆಯಷ್ಟೇ ಸಿಎಸ್ಒ ( Central Statistical Organisation) ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ನೋಟು ನಿಷೇಧದಿಂದ ದೇಶದ ಅಭಿವೃದ್ದಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.
ಹಾಗಿದ್ದಾಗ್ಯೂ, ಖ್ಯಾತ ಅರ್ಥಶಾಸ್ತ್ರಜ್ಞರೊಬ್ಬರು ನೋಟು ನಿಷೇಧದ ಕ್ರಮವನ್ನು ಟೀಕಿಸುತ್ತಾರೆ. ಹಾರ್ವರ್ಡ್ ಯುನಿವರ್ಸಿಟಿಯಲ್ಲಿ ಓದಿರುವ ಇವರು, ಕೇಂದ್ರದ ಕ್ರಮವನ್ನು ಟೀಕಿಸುವ ಮೊದಲು ವಸ್ತುಸ್ಥಿತಿಯ ಪರಾಮರ್ಶೆ ಮಾಡಿ ಮಾತನಾಡಲಿ ಎಂದು ಅಮಾರ್ತ್ಯ ಸೇನ್ ಹೆಸರು ಉಲ್ಲೇಖಿಸದೇ ಪ್ರಧಾನಿ ಮೋದಿ ಟೀಕಿಸಿದ್ದಾರೆ.
ಎರಡು ದಿನದ ಹಿಂದೆ ಅತಂತ್ರ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ ಎಂದು ಹೇಳಿದ್ದ ಮೋದಿ, ಬುಧವಾರದ ಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎನ್ನುವ ವಿಶ್ವಾಸದ ಮಾತನ್ನಾಡಿದ್ದಾರೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಎಳನೀರು ವ್ಯಾಪಾರ, ಮೋದಿ ವ್ಯಂಗ್ಯ.. ಮುಂದೆ ಓದಿ...

ಅಮಾರ್ತ್ಯ ಸೇನ್ ವಿರುದ್ದ ಮೋದಿ ವಾಕ್ ಪ್ರಹಾರ
ಬಡಕುಟುಂಬದಿಂದ ಬಂದ ವ್ಯಕ್ತಿಯೊಬ್ಬ ದೇಶದ ಪ್ರಧಾನಿಯಾಗುತ್ತಾನೆ. ದೇಶದ ಅಭಿವೃದ್ದಿಗೆ ಕಷ್ಟಪಟ್ಟು ದುಡಿಯುತ್ತಾನೆ, ಇದು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಓದಿದ ವ್ಯಕ್ತಿಗೆ ಮತ್ತು ಹಾರ್ಡ್ ವರ್ಕ್ ಮಾಡುವ ವ್ಯಕ್ತಿಯ ನಡುವಿನ ವ್ಯತ್ಯಾಸ - ಮೋದಿ.

ಅಮಾರ್ತ್ಯ ಸೇನ್ ಹೇಳಿದ್ದೇನು?
ನೊಬೆಲ್ ಪ್ರಶಸ್ತಿ ವಿಜೇತ, ಖ್ಯಾತ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್, ನೋಟು ನಿಷೇಧದ ಕೇಂದ್ರದ ಕ್ರಮ ದೇಶದ ಅಭಿವೃದ್ದಿಗೆ ಮಾರಕವಾಗುತ್ತದೆ. ದೇಶ ಮುಂದೆ ಸಾಗುವ ಬದಲು ಹಿನ್ನಡೆ ಅನುಭವಿಸುತ್ತದೆ ಎಂದು ಸೇನ್ ಹೇಳಿದ್ದರು.

ಪ್ರಧಾನಿಗೆ ಅತಂತ್ರದಿಂದ ಬಹುಮತದ ವಿಶ್ವಾಸ
ನಾವು ಉತ್ತರಪ್ರದೇಶದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯಲಿದ್ದೇವೆ. ಹಾವು ಮುಂಗುಸಿಯಂತೆ ಇದ್ದ ಬಿಎಸ್ಪಿ ಮತ್ತು ಎಸ್ಪಿ ಅತಂತ್ರ ಫಲಿತಾಂಶ ಬಂದರೆ ಒಳ್ಳೆಯದು ಎನ್ನುವ ಲೆಕ್ಕಾಚಾರದಲ್ಲಿದೆ, ರಾಜ್ಯದ ಜನತೆ ಬಿಜೆಪಿಗೆ ಹರಸಲಿದ್ದಾರೆ - ಮೋದಿ.

ರಾಹುಲ್ ವಿರುದ್ದ ಮೋದಿ ವಾಗ್ದಾಳಿ
ತೆಂಗಿನಕಾಯಿ, ಆಲೂಗಡ್ಡೆ ಕಾರ್ಖಾನೆ ಎನ್ನುವ ಬಗ್ಗೆ ರಾಹುಲ್ ಗಾಂಧಿ ಭಾಷಣ ಬಿಗಿಯುತ್ತಿದ್ದಾರೆ. ಅವರು ಏನು ಮಾತನಾಡುತ್ತಿದ್ದಾರೆ ಎನ್ನುವ ಅರಿವು ಅವರಿಗಿದೆಯಾ? ತೆಂಗಿನಕಾಯಿಯೊಳಗೆ ನೀರಿರುವುದು ಚಿಕ್ಕ ಮಕ್ಕಳಿಗೂ ಗೊತ್ತಿರುವ ವಿಚಾರವಲ್ಲವೇ - ಪ್ರಧಾನಿ.

ಲಂಡನ್ ನಲ್ಲಿ ತೆಂಗಿನಕಾಯಿ ಫ್ಯಾಕ್ಟರಿ
ಬ್ರಿಟನ್ ನಲ್ಲಿ ಎಳನೀರು ಮಾರಲು ಇಚ್ಚಿಸುತ್ತೇನೆ ಎನ್ನುವ ರಾಹುಲ್ ಗಾಂಧಿ, ಉತ್ತರಪ್ರದೇಶದಲ್ಲಿ ಆಲೂಗೆಡ್ಡೆ ಫ್ಯಾಕ್ಟರಿ ಸ್ಥಾಪಿಸಬೇಕು ಎನ್ನುವ ಹೇಳಿಕೆಯನ್ನು ನೀಡುತ್ತಾರೆ. ಇದು ಕಾಂಗ್ರೆಸ್ ಪಕ್ಷದ ನಿಲುವು - ರಾಹುಲ್ ವಿರುದ್ದ ಮೋದಿ ವಾಗ್ದಾಳಿ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications