Hardik Pandya: ಹಾರ್ದಿಕ್ ಪಾಂಡ್ಯಗೆ ₹4 ಕೋಟಿ ವಂಚಿಸಿದ ಸಹೋದರನ ಬಂಧನ
ಕ್ರಿಕೆಟಿಗರಾದ ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯ ಅವರಿಗೆ ವ್ಯವಹಾರದಲ್ಲಿ ಸುಮಾರು 4 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಅವರ ಸಹೋದರ ವೈಭವ್ ಪಾಂಡ್ಯ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರಸ್ತುತ ಇದೀಗ 2024ನೇ ಆಬೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಆಡುತ್ತಿದ್ದು, ಇನ್ನು ಇವರ ಅಣ್ಣ ಕೃನಾಲ್ ಪಾಂಡ್ಯ ಅವರು ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಆಡುತ್ತಿದ್ದಾರೆ. ಇನ್ನು ಇದೀಗ ಇವರಿಬ್ಬರಿಗೆ 4 ಕೋಟಿ ರೂಪಾಯಿ ವಂಚಿಸಿ ಆರೋಪ ಹಿನ್ನೆಲೆ ಸಹೋದರ ವೈಭವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವೈಭವ್ (37) ಪಾಲುದಾರಿಕೆ ಸಂಸ್ಥೆಯಿಂದ ಸುಮಾರು 4.3 ಕೋಟಿ ರೂಪಾಯಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡುವ ಮೂಲಕ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರ ಕೃನಾಲ್ಗೆ ವಂಚನೆ ಮಾಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾದ ವರದಿ ಮಾಡಿದೆ ಅಂತಾ ನ್ಯೂಸ್ 18 ಇಂಗ್ಲೀಷ್ ತಿಳಿಸಿದೆ. ಇನ್ನು ವೈಭವ್ ವಿರುದ್ಧ ವಂಚನೆ ಮತ್ತು ನಕಲಿ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
2021ರಲ್ಲಿ ಪಾಲಿಮರ್ ವ್ಯವಹಾರಕ್ಕಾಗಿ ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯ ಅವರು ಬಂಡವಾಳವಾಗಿ ತಲಾ ಶೇಕಡಾ 40ರಷ್ಟು ಹೂಡಿಕೆ ಮಾಡಿದ್ದರಂತೆ. ಇದರಲ್ಲಿ ವೈಭವ್ ಪಾಂಡ್ಯ ಕೂಡ ಶೇಕಡಾ 20ರಷ್ಟು ಹಣವನ್ನು ಹೂಡಿಕೆ ಮಾಡಿದ್ದರಂತೆ. ಆದರೆ, ನಂತರ ಸಹೋದರರಿಗೆ ತಿಳಿಯದಂತೆ ವೈಭವ್ ಪಾಂಡ್ಯ ಅವರು ಸಂಸ್ಥೆಯ ಹಣವನ್ನು ಬೇರೆ ಕಂಪನಿಗೆ ವರ್ಗಾವಣೆ ಮಾಡಿಕೊಂಡಿದ್ದರಂತೆ ಎಂಬ ಆರೋಪ ಎದುರಾಗಿದೆ.
ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಇಬ್ಬರಿಗೂ ತಿಳಿಯದಂತೆ ದಾಖಲೆಗಳನ್ನು ಪೋರ್ಜರಿ ಮಾಡಿ 4.3 ಕೋಟಿ ರೂಪಾಯಿ ಹಣವನ್ನು ಸ್ವತಃ ವ್ಯವಹಾರಕ್ಕಾಗಿ ಬಳಸಿಕೊಂಡಿರುವ ಆರೋಪ ವೈಭವ್ ವಿರುದ್ದ ಕೇಳಿ ಬಂದಿದೆ. ಈ ಹಿನ್ನೆಲೆ ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ನಡೆಸಿದ ಮುಂಬೈ ಪೊಲೀಸರು ವೈಭವ್ ಅವರನ್ನ ವಶಕ್ಕೆ ಪಡೆದು ಬಂಧನ ಮಾಡಿ ವಿಚಾರಣೆ ಮುಂದುವರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications