ಹರ್ಷವರ್ಧನ್ ರಾಜೀನಾಮೆ ಮೂಲಕ ಕೊರೊನಾ ನಿರ್ವಹಣೆ ವೈಫಲ್ಯ ಒಪ್ಪಿಕೊಂಡ ಕೇಂದ್ರ
ನವದೆಹಲಿ, ಜುಲೈ 08: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ರಾಜೀನಾಮೆಯು ದೇಶದಲ್ಲಿ ಕೊರೊನಾ ನಿಯಂತ್ರಣದಲ್ಲಿ ವೈಫವನ್ನು ಎತ್ತಿ ತೋರಿಸಿದೆ.
ಕೊರೊನಾ ಎರಡನೇ ಅಲೆಯ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನವು ಆರೋಪವು ಸಾರ್ವಜನಿಕ ವಲಯ ಹಾಗೂ ಪ್ರತಿಪಕ್ಷಗಳಿಂದ ಕೇಳಿಬಂದಿತ್ತು.
ಆದರೆ ಇದನ್ನು ಕೇಂದ್ರ ಸರ್ಕಾರ ಬಹಿರಂಗವಾಗಿ ಒಪ್ಪಿಕೊಂಡಿರಲಿಲ್ಲ ಆದರೆ ಆರೋಗ್ಯ ಸಚಿವ ಹರ್ಷವರ್ಧನ್ ರಾಜೀನಾಮೆ ಮೂಲಕ ಕೇಂದ್ರ ಸರ್ಕಾರವು ಆರೋಗ್ಯ ಸಚಿವಾಲಯದ ವೈಫಲ್ಯ ಹಾಗೂ ಕೊರೊನಾ ನಿಯಂತ್ರಣದಲ್ಲಿ ಎಡವಿದ್ದನ್ನು ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.

ಕೇಂದ್ರ ಆರೋಗ್ಯ ಸಚಿವರಾಗಿದ್ದ ಹರ್ಷವರ್ಧನ್ ಕೊರೊನಾ ನಿಯಂತ್ರಣ ಹಾಗೂ ಕೊರೊನಾ ಎರಡನೇ ಅಲೆಯ ಲೆಕ್ಕಾಚಾರದಲ್ಲಿ ಸಂಪುರ್ಣ ಎಡವಿದ್ದರು ಎನ್ನುವ ಆರೋಪವು ಮೊದಲಿನಿಂದಲೂ ಇತ್ತು.
2021ರ ಮಾರ್ಚ್ನಲ್ಲಿ ಭಾರತವು ಕೊರೊನಾ ಸೋಂಕಿನಿಂದ ಸಂಪೂರ್ಣ ಮುಕ್ತವಾಗಿದೆ ಎಂದು ದೇಶದ ಜನತೆಯ ಮುಂದೆ ಹೇಳಿದ್ದರು, ಆದರೆ ಈ ಹೇಳಿಕೆಯ ಕೆಲವೇ ದಿನಗಳ ಬಳಿಕ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿತ್ತು.
ಇದರಿಂದ ಎಚ್ಚೆತ್ತುಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೆಯೇ ಪ್ರಧಾನಿ ಕಾರ್ಯಾಲಯ ಕೊರೊನಾ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿಯನ್ನು ತಾನೇ ನಿರ್ವಹಿಸಿಕೊಂಡಿತ್ತು.
ಪ್ರಧಾನಿ ಕಾರ್ಯಾಲಯ, ನೀತಿ ಆಯೋಗ ಹಾಗೂ ಕೊರೊನಾ ಕಾರ್ಯಪಡೆಯು ಕೊರೊನಾ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಲು ಆರಂಭಿಸಿತ್ತು.
ಮಾರ್ಚ್ ಹಾಗೂ ಏಪ್ರಿಲ್ನಲ್ಲಿ ಮುಖ್ಯಮಂತ್ರಿಗಳ ಸರಣಿ ಸಭೆ, ಇಲಾಖೆಯ ಸರಣಿ ಸಭೆಯನ್ನು ಪ್ರಧಾನಿ ಕಾರ್ಯಾಲಯ ನೇರವಾಗಿ ಮಾಡಿತ್ತು.
ಈ ಕೆಲ ಸಭೆಗಳಲ್ಲಿ ಆರೋಗ್ಯ ಸಚಿವ ಹರ್ಷವರ್ಧನ್ ಇಲ್ಲದಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿತ್ತು. ಇದಕ್ಕೆ ಕಾರಣವೇನೆಂದರೆ ಹರ್ಷವರ್ಧನ್ ಹೇಳಿಕೆ ಹಾಗೂ ಕಾರ್ಯವೈಖರಿಯಿಂದ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.
ದೇಶದಲ್ಲಿ ಈಗ ಲಸಿಕೆ ಹಂಚಿಕೆ ಅಭಿಯಾನ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ, ಹಾಗೆಯೇ ಮೂರನೇ ಅಲೆಯ ಅಪಾಯ ಕೂಡ ಎದುರಾಗಿದೆ. ಈ ಹಂತದಲ್ಲಿ ಹರ್ಷವರ್ಧನ್ ಅವರನ್ನು ಇರಿಸಿಕೊಂಡರೆ ಕಾರ್ಯ ನಿರ್ವಹಣೆ ಕಷ್ಟವಾಗಬಹುದು ಎನ್ನುವ ಕಾರಣಕ್ಕೆ ತನ್ನ ನಂಬಿಕಸ್ಥ ಹಾಗೂ ಸಚಿವ ಮನ್ಸುಖ್ ಅವರಿಗೆ ಆರೋಗ್ಯ ಇಲಾಖೆಯ ಜವಾಬ್ದಾರಿ ನೀಡಲಾಗಿದೆ.
ಈ ಹಿಂದೆ ಬಂದರು ಸಚಿವರಾಗಿದ್ದ ಮನ್ಸುಖ್ ಅವರು ಗುಜರಾತ್ ಮೂಲದವರಾಗಿದ್ದಾರೆ ಹಾಗೂ ಪ್ರಧಾನಿ ನರೇಂದ್ರ ಮೋದಿಯ ಅತ್ಯಂತ ನಂಬಿಕಸ್ಥ ಸಚಿವ ಎನ್ನಲಾಗುತ್ತಿದೆ. ಕೋವಿಡ್ ನಿರ್ವಹಣೆ ಸಂದರ್ಭದಲ್ಲಿಯೂ ಇವರ ಪಾತ್ರ ಬಹಳ ದೊಡ್ಡದಿತ್ತು ಎನ್ನುವ ಮಾತು ಕೇಳಿಬಂದಿದೆ.
ವಿದೇಶಗಳಿಂದ ಆಮ್ಲಜನಕ ಸಾಂಧ್ರಕಗಳ ಆಮದು ಮತ್ತು ಕೆಲವು ಪ್ರಮುಖ ಔಷಧಿಗಳ ಆಮದಿನ ವಿಚಾರದಲ್ಲಿ ಮನ್ಸುಖ್ ಅವರು ಪ್ರಮುಖ ಪಾತ್ರವಹಿಸಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಈಗ ರಾಸಾಯನಿಕ ಇಲಾಖೆಯನ್ನು ಆರೋಗ್ಯ ಇಲಾಖೆಯೊಂದಿಗೆ ಸೇರಿಸಿ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications