Haryana Election 2024: ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಉಚಿತ ಹಣ, 5 ಲಕ್ಷ ಮನೆ ನಿರ್ಮಾಣ, ಅಡುಗೆ ಅನಿಲ ಭರವಸೆ
ನವದೆಹಲಿ, ಸೆಪ್ಟಂಬರ್ 19: ರಾಜಕೀಯ ಪಕ್ಷಗಳು ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗಿದೆ. ನೆನ್ನೆಯಷ್ಟೇ ಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಉಚಿತ ಯೋಜನೆಗಳ ಭರವಸೆ ನೀಡಿದೆ. ಇದನ್ನು ವಿರೋಧಿಸಿತ್ತಿದ್ದ ಬಿಜೆಪಿಯು ಸಹ ಉಚಿತ ಯೋಜನೆಗಳು ಇರುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಹೌದು, ಬಿಜೆಪಿ ಹಿರಿಯ ನಾಯಕ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು ಇಂದು ಗುರುವಾರ ಹರಿಯಾಣದ ರೋಹ್ತಕ್ನಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಇದನ್ನು ಉಚಿತ ಗ್ಯಾರೆಂಟಿಗಳು ಎನ್ನದೇ ಬಿಜೆಪಿ ಭರವಸೆ ಎಂಬ ಹೆಸರಿನಲ್ಲಿ ಭರಪೂರ ಕೊಡುಗೆ ಘೋಷಣೆ ಮಾಡಿದ್ದಾರೆ.

ಪ್ರಣಾಳಿಕೆಯ ಪ್ರಕಾರ, ಹರಿಯಾಣದಲ್ಲಿ ಈ ಬಾರಿಯೂ ಬಿಜೆಪಿ ಗೆಲುವು ಸಾಧಿಸಿದರೆ, ಮಹಿಳೆಯರಿಗೆ ಮಾಸಿಕವಾಗಿ 'ಲಾಡೋ ಲಕ್ಷ್ಮಿ ಯೋಜನೆ' ಹೆಸರಿನಲ್ಲಿ 2100 ರೂಪಾಯಿಗೆ ಸಹಾಯಧನವನ್ನು ನೇರ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಕನಿಷ್ಠ ಬೆಂಬಲ ಬೆಲೆಯಡಿ 24 ಬೆಳೆಗಳನ್ನು ಖರೀದಿಸುವುದರ ಜೊತೆಗೆ ಮಹಿಳೆಗೆ ಮಾಸಿಕ ಹಣ ಹಾಕುವುದಾಗಿ ಅವರು ಭರವಸೆ ನೀಡಿದ್ದಾರೆ.
During the release of @BJP4Haryana's manifesto for the Haryana Assembly elections 2024. https://t.co/irTJqgj0sU
— Jagat Prakash Nadda (@JPNadda) September 19, 2024
5ಲಕ್ಷ ಮನೆ, 02 ಲಕ್ಷ ಉದ್ಯೋಗ
ಹರ್ ಘರ್ ಗೃಹಿಣಿ ಯೋಜನೆಯಡಿ ಅಡುಗೆ ಅನಿಲವನ್ನು ಕೇವಲ 500 ರೂಪಾಯಿಗೆ ವಿತರಣೆ ಮಾಡಲಾಗುವುದು. ರಾಜ್ಯದ ಗ್ರಾಮೀಣ ಪ್ರದೇಶಗಳು ಮತ್ತು ನಗರದಲ್ಲಿ ಒಟ್ಟು 5ಲಕ್ಷ ಮನೆಗಳನ್ನು ನಿರ್ಮಿಸಿಕೊಡಲಾಗುವುದು. 02 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸಿ, ನಿರುದ್ಯೋಗ ಹೋಗಲಾಡಿಸಲು ಶ್ರಮಿಸಲಾಗುವುದು ಎಂದು ತಿಳಿಸಿದ್ದಾರೆ.
ನೆನ್ನೆಯಷ್ಟೇ ಕಾಂಗ್ರೆಸ್ ಪಕ್ಷವು ಹರಿಯಾಣದಲ್ಲಿ ಮಹಿಳೆಯರಿಗೆ 2000 ರೂಪಾಯಿ ಸಹಾಯಧನ ನೀಡುವುದು ಸೇರಿದಂತೆ ಹಲವು ಉಚಿತ ಭರವಸೆ ಘೋಷಿಸಿದೆ. ಅದೇ ರೀತಿ ಇಂದು ಬೃಹತ್ ಕಾರ್ಯಕ್ರಮದಲ್ಲಿ ಸಚಿವ ಜೆ.ಪಿ ನಡ್ಡಾ ಅವರು ಪ್ರಣಾಳಿಕೆ ಬಿಡುಗಡೆ ಮಾಡಿ ಉಚಿತ ಭರವಸೆ ನೀಡಿದರು.
ರಾಜ್ಯದಲ್ಲಿ 1031 ಅಭ್ಯರ್ಥಿಗಳು ಕಣಕ್ಕೆ
ಹರಿಯಾಣದಲ್ಲಿ ಒಟ್ಟು 1031 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಬಂಡಾಯದ ಬಿಸಿ ಎದುರಿಸಿವೆ. ಇನ್ನೇನು ಚುನಾವಣೆಗೆ ನಡೆಯಲು ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 05ರಂದು ಒಂದೇ ಹಂತದಲ್ಲಿ ಹರಿಯಾಣದ 90 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಅಕ್ಟೋಬರ್ 08ರಂದು ಮತ ಎಣಿಕೆ ನಡೆಯಲಿದೆ ಎಂದು ರಾಜ್ಯ ಚುನಾವಣೆ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications