ಮಿಸ್ ವರ್ಲ್ಡ್ ಗೋಸ್ ಟು.. ಇಂಡಿಯಾ! ಪ್ರಶಸ್ತಿ ಗೆದ್ದ ಹರ್ಯಾಣದ ಚೆಲುವೆ
ಸಾನ್ಯಾ (ಚೀನಾ), ನ 18: ಹರ್ಯಾಣದ ಮೆಡಿಕಲ್ ವಿದ್ಯಾರ್ಥಿನಿ ಮನೂಷಿ ಚಿಲ್ಲರ್ 'ವಿಶ್ವಸುಂದರಿ - 2017' ಸ್ಪರ್ಧೆ ಗೆದ್ದಿದ್ದಾರೆ. ಹದಿನೇಳು ವರ್ಷಗಳ ನಂತರ ಈ ಪ್ರಶಸ್ತಿ ಭಾರತಕ್ಕೆ ಒಲಿದಿದ್ದು, ಇಸವಿ 2000ರಲ್ಲಿ ಪ್ರಿಯಾಂಕ ಚೋಪ್ರಾ ವಿಶ್ವ ಸುಂದರಿ ಕಿರೀಟ ತೊಟ್ಟಿದ್ದರು.
ವಿಶ್ವದ ವಿವಿಧ ಭಾಗಗಳಿಂದ 108 ಸುಂದರಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಶ್ವಸುಂದರಿ ಸ್ಪರ್ಧೆ ಗೆದ್ದ ಮನೂಷಿಯವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ಮಿಸ್ ಇಂಗ್ಲೆಂಡ್ ಸ್ಟೀಫನ್ ಹಿಲ್ ಮೊದಲ ರನ್ನರ್ ಅಪ್, ಮಿಸ್ ಮೆಕ್ಸಿಕೋ ಆಂಡ್ರಿಯಾ ಮೇಜಾ ಎರಡನೇ ರನ್ನರ್ ಅಪ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಮನೂಷಿ ತಂದೆ DRDO ಉದ್ಯೋಗಿಯಾಗಿದ್ದಾರೆ.
ಅತ್ಯುತ್ತಮ ಐವರು ಪ್ರಶಸ್ತಿ ಸುತ್ತಿಗೆ ಆಯ್ಕೆಯಾದ ನಂತರದ, ಪ್ರಶ್ನಾವಳಿ ರೌಂಡ್ ನಲ್ಲಿ, ಅತೀ ಹೆಚ್ಚು ಸಂಬಳ ಬರುವ ಯಾವ ಉದ್ಯೋಗವನ್ನು ಆಯ್ಕೆ ಮಾಡಲು ಬಯಸುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ ಮನೂಷಿ, ತಾಯಿ ಎಲ್ಲದಕ್ಕಿಂತಲೂ ನನಗೆ ಮುಖ್ಯ ಎಂದು ಉತ್ತರಿಸಿದ್ದಾರೆ.
ದುಡ್ಡು ಮುಖ್ಯವಲ್ಲ, ತಾಯಿ ತೋರಿಸುವ ಪ್ರೀತಿ ಬೆಲೆಕಟ್ಟಲಾಗದದ್ದು. ನನ್ನ ಜೀವನದಲ್ಲಿ ಆಕೆಯೇ ದೊಡ್ಡ ಸ್ಪೂರ್ತಿ. ಇವತ್ತು ಈ ಪ್ರಶಸ್ತಿ ಗೆಲ್ಲಲು ಆಕೆ ಕೊಟ್ಟ ಬೆಂಬಲವೇ ಕಾರಣ. ನನ್ನನ್ನು ಬೆಂಬಲಿಸಿದ ಮತ್ತು ನಾನು ಈ ಪ್ರಶಸ್ತಿ ಗೆಲ್ಲಬೇಕೆಂದು ಪ್ರಾರ್ಥಿಸಿದ ಎಲ್ಲರಿಗೂ ಥ್ಯಾಂಕ್ಸ್ ಎಂದು ಮನೂಷಿ ಭಾವೋದ್ವೇಗಕ್ಕೆ ಒಳಗಾದರು.
ರಾಜ್ಯದ ಮಗಳು ಮನೂಷಿ ಚಿಲ್ಲರ್ ಈ ಪ್ರಶಸ್ತಿ ಗೆದ್ದಿದ್ದಕ್ಕೆ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆಂದು ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಮನೂಷಿಯವರನ್ನು ಅಭಿನಂದಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications