Haryana Rain: ಹರಿಯಾಣ ಪ್ರವಾಹ ಸಮೀಕ್ಷೆ ವೇಳೆ ಶಾಸಕನಿಗೆ ಕಪಾಳಮೋಕ್ಷ ಮಾಡಿದ ಮಹಿಳೆ- ವಿಡಿಯೋ
ಚಂಡೀಗಢ ಜುಲೈ 13: ಪ್ರವಾಹದ ಬಗ್ಗೆ ಸಮೀಕ್ಷೆಗೆಂದು ತೆರಳಿದ್ದ ಜೆಜೆಪಿ ಶಾಸಕನಿಗೆ ಮಹಿಳೆಯೊಬ್ಬರು ಕಪಾಳಮೋಕ್ಷ ಮಾಡಿದ ಘಟನೆ ಹರಿಯಾಣದಲ್ಲಿ ನಡೆದಿದೆ. ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ಶಾಸಕ ಈಶ್ವರ್ ಸಿಂಗ್ ಅವರ ಮೇಲೆ ಪ್ರವಾಹ ಪೀಡಿತ ಪ್ರದೇಶದ ಮಹಿಳೆ ಕೋಪಗೊಂಡು ಕಪಾಳಮೋಕ್ಷ ಮಾಡಿದ್ದಾಳೆ.
ಶಾಸಕ ಈಶ್ವರ್ ಸಿಂಗ್ ಅವರು ಬುಧವಾರ ಗುಲಾದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಲು ಹೋಗಿದ್ದರು. ಘಗ್ಗರ್ ನದಿಯ ಉಕ್ಕಿ ಹರಿಯುತ್ತಿರುವುದರಿಂದ ಆ ಪ್ರದೇಶದಲ್ಲಿನ ಪ್ರವಾಹದ ಪರಿಸ್ಥಿತಿಯಿಂದ ಹೈರಾಣಾಗಿದ್ದ ಮಹಿಳೆ ತನ್ನ ಕೋಪವನ್ನು ಶಾಸಕರ ಮೇಲೆ ತೀರಿಸಿಕೊಂಡಿದ್ದಾಳೆ. 'ಈಗೇಕೆ ಬಂದಿದ್ದೀರಿ' ಎಂದು ಶಾಸಕನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
#WATCH | Haryana: In a viral video, a flood victim can be seen slapping JJP (Jannayak Janta Party) MLA Ishwar Singh in Guhla as he visited the flood affected areas
— ANI (@ANI) July 12, 2023
"Why have you come now?", asks the flood victim pic.twitter.com/NVQmdjYFb0
'ಬಂದ್ (ಸಣ್ಣ ಅಣೆಕಟ್ಟು)' ಉಲ್ಲಂಘನೆಯಿಂದಾಗಿ ಈ ಪ್ರದೇಶಕ್ಕೆ ನೀರು ಪ್ರವೇಶಿಸಲು ಕಾರಣವಾಗಿದೆ. ಈ ಬಗ್ಗೆ ಜನನಾಯಕರ ಗಮನಕ್ಕೆ ತಂದರೂ ಪ್ರಯೋಜನವಾಗಿರಲಿಲ್ಲ. ಇದು ಪ್ರವಾಹಕ್ಕೆ ಕಾರಣವಾಗಿದ್ದು ಶಾಸಕರ ಭೇಟಿ ವೇಳೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ವೈರಲ್ ಆಗಿರುವ ವಿಡಿಯೋವೊಂದು ಎಂಎಲ್ಎ ಸುತ್ತ ಜನ ಗುಂಪು ಗುಂಪಾಗಿ ನಿಂತಿರುವುದು ಕಂಡುಬಂದಿದೆ. ಈ ವೇಳೆ ಮಹಿಳೆಯು ಕಣ್ಣಿಗೆ ರಾಚುವಂತೆ ಕೋಪಗೊಂಡು ಮುಂದೆ ಬಂದು ಆತನಿಗೆ ಕಪಾಳಮೋಕ್ಷ ಮಾಡಿದ್ದಾಳೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಜೆಜೆಪಿ ಶಾಸಕರು, ಹಳ್ಳಿಯೊಂದರಲ್ಲಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಲು ಹೋದಾಗ ಜನರು ತಮ್ಮ ಮೇಲೆ ಹಲ್ಲೆ ನಡೆಸಿದರು ಎಂದು ಹೇಳಿದರು. JJP ಹರಿಯಾಣದಲ್ಲಿ ಬಿಜೆಪಿ ನೇತೃತ್ವದ ಆಡಳಿತ ಮೈತ್ರಿಕೂಟದ ಭಾಗವಾಗಿದೆ.

"ನಾನು ಬಯಸಿದ್ದರೆ, ಅಣೆಕಟ್ಟು ತೆರವಾಗುತ್ತಿರಲಿಲ್ಲ'' ಎಂದು ಮಹಿಳೆ ನನ್ನ ಮೇಲೆ ಆರೋಪ ಮಾಡಿದರು. 'ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗಿದೆ. ಇದು ನೈಸರ್ಗಿಕ ವಿಕೋಪ ಎಂದು ನಾನು ಅವರಿಗೆ ವಿವರಿಸಿದ್ದರೂ ಅವರು ಹಲ್ಲೆಗೆ ಮುಂದಾದರು' ಎಂದು ಸುದ್ದಿ ಜೆಜೆಪಿ ಶಾಸಕ ಹೇಳಿದ್ದಾರೆ.
ಮಹಿಳೆಯ ಕ್ರಮಕ್ಕಾಗಿ ತಾನು "ಕ್ಷಮಿಸಿದ್ದೇನೆ" ಮತ್ತು ಆಕೆಯ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಅವರು ಹೇಳಿದರು. "ಅವಳು ಮಾಡಿದ್ದಕ್ಕಾಗಿ ನಾನು ಯಾವುದೇ ಕ್ರಮವನ್ನು (ತೆಗೆದುಕೊಳ್ಳಲು) ಬಯಸುವುದಿಲ್ಲ. ನಾನು ಅವಳನ್ನು ಕ್ಷಮಿಸಿದ್ದೇನೆ" ಎಂದು ಅವರು ಹೇಳಿದರು.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ನಂತರ ಉಕ್ಕಿ ಹರಿಯುತ್ತಿರುವ ಘಗ್ಗರ್ ನದಿಯಿಂದ ಪಂಜಾಬ್ ಮತ್ತು ಹರಿಯಾಣದ ಹಲವಾರು ಹಳ್ಳಿಗಳು ಬಾಧಿತವಾಗಿರುವುದರಿಂದ ಪರಿಹಾರ ಕ್ರಮಗಳು ನಡೆಯುತ್ತಿವೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications