ಬಾಬಾ ಡ್ರಾಮಾ ಅಂತ್ಯ, ರಾಮ್ಪಾಲ್ ಬಂಧನ
ನವದೆಹಲಿ. 20 : ಕೊನೆಗೂ ಹರ್ಯಾಣ ಪೊಲೀಸರು ಸತ್ಯಲೋಕ ಆಶ್ರಮದಲ್ಲಿ ಅಡಗಿದ್ದ ಸ್ವಯಂ ಘೋಷಿತ ದೇವಮಾನವ ರಾಮ್ಪಾಲ್ ಅವರನ್ನು ಬುಧವಾರ ರಾತ್ರಿ ಬಂಧಿಸಿದ್ದಾರೆ. ಬಾಬಾಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಇಂದು ಕೋರ್ಟಿಗೆ ಹಾಜರು ಪಡಿಸಲಾಗುತ್ತದೆ.
ರಾಮ್ಪಾಲ್ ಜೊತೆಗೆ ಅವರ ಆಪ್ತ ಸಹಾಯಕ ಪುರುಷೋತ್ತಮ ದಾಸ್ ಸೇರಿದಂತೆ 270 ಜನರನ್ನು ಬಂಧಿಸಲಾಗಿದ್ದು ಅವರ ವಿರುದ್ಧ ರಾಜದ್ರೋಹ ಸೇರಿದಂತೆ ಹಲವು ಆರೋಪಗಳನ್ನು ಮಾಡಲಾಗಿದೆ. ಬಾಬಾ ಆಶ್ರಮದ ಮುಂದೆ ನೂರಾರು ಭಕ್ತರು ಬಾಬಾ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊಲೆ ಹಾಗೂ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ಗೆ ದೇವಮಾನವನನ್ನು ಹಾಜರುಪಡಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಹರ್ಯಾಣದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕೇಂದ್ರ ಗೃಹ ಸಚಿವಾಲಯವು ರಾಜ್ಯಕ್ಕೆ 500ಕ್ಕೂ ಹೆಚ್ಚು ಸಿಬ್ಬಂದಿಯ ಅರೆಸೇನಾ ಪಡೆಯ ತುಕಡಿಗಳನ್ನು ರವಾನಿಸಿದೆ. [ಮಾಧ್ಯಮದ ಮೇಲೆ ಹರ್ಯಾಣ ಪೊಲೀಸ್ ಲಾಠಿ ಪ್ರಹಾರ]
ಹೊರಬಂದ ಭಕ್ತರು : ಕೆಲವು ದಿನಗಳಿಂದ ಸತ್ಯಲೋಕ ಆಶ್ರಮದಲ್ಲಿದ್ದ ಸಾವಿರಾರು ಭಕ್ತರು ಆಶ್ರಮದಿಂದ ಹೊರಬಂದಿದ್ದಾರೆ. ಸೋಮವಾರ ಪೊಲೀಸರು ಆಶ್ರಮದ ಮೇಲೆ ದಾಳಿ ನಡೆಸಿದ ನಂತರ ದೇವಮಾನವ ರಾಮ್ಪಾಲ್ ಖಾಸಗಿ ಬೆಂಗಾವಲು ಪಡೆ ಅವರೆಲ್ಲರನ್ನೂ ಒತ್ತೆಯಾಗಿರಿಸಿಕೊಂಡಿತ್ತು.

ಬುಧವಾರ ಪೊಲೀಸರು ಆಶ್ರಮ ಪ್ರವೇಶಿಸಿ ಬಾಬಾ ಬಂಧಿಸಿದ ಬಳಿಕ ಗುಂಪು ಗುಂಪಾಗಿ 10 ಸಾವಿರಕ್ಕೂ ಹೆಚ್ಚು ಭಕ್ತರ ದಂಡು ಹೊರ ಬಂದಿದೆ. ಆಶ್ರಮದಲ್ಲಿ ಸುಮಾರು 317 ಗನ್, ಪೆಟ್ರೋಲ್ ಬಾಂಬ್ ಹಾಗೂ 250 ಸಿಲಿಂಡರ್ ಹಾಗೂ ಶಸ್ತ್ರಾಸ್ತ್ರಗಳ ಸಂಗ್ರಹವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications